'ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ಮುಸ್ಲಿಮರ ಮತಕ್ಕಾಗಿ'
ನವದೆಹಲಿ, ಜು. 29: ಸದಾ ಗಡಿ ತಂಟೆಯಲ್ಲೇ ಮುಳುಗಿರುವ ಪಾಕಿಸ್ತಾನ ಅಗಲಿದ ಚೇತನ ಅಬ್ದುಲ್ ಕಲಾಂ ಅವರ ಸಾವಿನ ಸಂಬಂಧ ವಿವಾದಾತ್ಮಕ ಹೇಳಿಕೆ ನೀಡಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಕ್ಷಿಪಣಿ ಮಾನವ ಡಾ. ಎಪಿಜೆ ಅಬ್ದುಲ್ ಕಲಾಂ ಬಗ್ಗೆ ಪಾಕಿಸ್ತಾನ ಭೌತಶಾಸ್ತ್ರಜ್ಞ ಅಬ್ದುಲ್ ಖಾದಿರ್ ಖಾನ್ ಕೇವಲವಾಗಿ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ನಾಗರಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.[ಅಬ್ದುಲ್ ಕಲಾಂರ ಜೀವನ ಮತ್ತು ಸಾಧನೆ ಚಿತ್ರಗಳು]

ಕಲಾಂ ಒಬ್ಬ ಸಾಧಾರಣ ವಿಜ್ಞಾನಿ ಎಂದು ಬಿಬಿಸಿಗೆ ನೀಡಿರುವ ದೂರವಾಣಿ ಸಂದರ್ಶನದಲ್ಲಿ ಹೇಳಿದ್ದಾರೆ. ಕಲಾಂ ಅವರ ಹೆಸರು ಹೇಳಿದರೆ ಯಾವುದೇ ಅತ್ಯುನ್ನತ ಸಂಶೋಧನೆಗಳು ನೆನಪಿಗೆ ಬರುವುದಿಲ್ಲ ಎಂದು ಹೇಳಿರುವ ಖಾನ್ ಮೇಲೆ ಟ್ವಿಟ್ಟಿಗರು ಛೀಮಾರಿ ಹಾಕಿದ್ದಾರೆ.[ಮಿಸೈಲ್ ಮ್ಯಾನ್ ಕಲಾಂಗೆ ಗಣ್ಯರ ಅಂತಿಮ ನಮನ]
ಕಲಾಂ ಸರಳ ಜೀವನ ಅನುಸರಿಸಿಕೊಂಡು ಬಂದ ಸಾಮಾನ್ಯ ವಿಜ್ಞಾನಿ ಎಂದು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಭಾರತದ ಮಿಸ್ಸೈಲ್ ಯೋಜನೆ ಕಾರ್ಯಗತವಾದದ್ದು ರಷ್ಯಾ ಸಹಕಾರದಿಂದ ಎಂದು ಖಾನ್ ಹೇಳಿಕೆ ನೀಡಿದ್ದರು.[ಕಲಾಂಗೆ ಅಂತಿಮ ನಮನದ ಚಿತ್ರಗಳು]
ಬಿಜೆಪಿ ಮುಸ್ಲಿಂ ಮತ ಬ್ಯಾಂಕ್ ನ ಪಡೆಯಲು ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿತ್ತು. ಇದರಲ್ಲಿ ಬೇರೆ ಯಾವ ಉದ್ದೇಶಗಳು ಇರಲಿಲ್ಲ ಎಂಬ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಖಾನ್ ಯಾರು?
ಅಬ್ದುಲ್ ಖಾದಿರ್ ಖಾನ್ ಪಾಕಿಸ್ತಾನದ ವಿವಾದಾತ್ಮಕ ಅಣು ವಿಜ್ಞಾನಿ. ಬಾಂಬ್ ತಯಾರಿಕೆ ತಂತ್ರಜ್ಞಾನದಲ್ಲಿ ಖಾನ್ ನಿಪುಣ. ಕೋರಿಯಾಕ್ಕೆ ಪಾಕಿಸ್ತಾನದ ಕೆಲ ರಹಸ್ಯ ಮಾಹಿತಿಗಳನ್ನು ಖಾನ್ ಬಿಟ್ಟುಕೊಟ್ಟಿದ್ದಾರೆ ಎಂದು 2004 ರಲ್ಲಿ ಆರೋಪ ಬಂದಿತ್ತು. ಈ ಸಂದರ್ಭ ಖಾನ್ ಅವರನ್ನು ಬಂಧಿಸಿ ಸರ್ಕಾರದ ಪ್ರಮುಖ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ 2009 ರಲ್ಲಿ ಇಸ್ಲಾಮಾಬಾದ್ ಹೈ ಕೋರ್ಟ್ ಖಾನ್ ನಿರ್ದೋಷಿ ಎಂದು ತೀರ್ಮಾನ ನೀಡಿತ್ತು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications