ಮದರ್ ತೆರೇಸಾ ಭಾರತಕ್ಕೆ ಯಾಕೆ ಬಂದಿದ್ರು? ಆಸ್ಕ್ ಆರೆಸ್ಸೆಸ್
ಕೇಂದ್ರದಲ್ಲಿ ಬಿಜೆಪಿ ಸರಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ಹಿಂದೂ ಪರ ಸಂಘಟನೆಗಳ ಮುಖಂಡರ ಹೇಳಿಕೆಗಳು ಪುಂಖಾನುಪುಂಖವಾಗಿ ಹರಿದು ಬರುತ್ತಲೇ ಇದೆ.
ಇದಕ್ಕೆ ಲೇಟೆಸ್ಟ್ ಆಗಿ ಇನ್ನೊಂದು ಸೇರ್ಪಡೆಯಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಸೋಮವಾರ (ಫೆ 23) ನೀಡಿದ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ/ ಸಮರ್ಥನೆ ವ್ಯಕ್ತವಾಗುತ್ತಿದೆ. (ಸಂತರ ಸಮ್ಮೇಳನದಲ್ಲಿ ಮರು ಮತಾಂತರಕ್ಕೆ ಚಾಲನೆ)
ಸಂಸತ್ತಿನ ಬಜೆಟ್ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ RSS ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಿಜೆಪಿಗೆ ತೀವ್ರ ಮುಜುಗರವನ್ನು ತಂದೊಡ್ಡದೇ ಇರಲಾರದು.
ಪ್ರಮುಖ ವಿಷಯದ ಚರ್ಚೆಯ ಬದಲು ವಿಪಕ್ಷಗಳು ಈ ವಿಚಾರವನ್ನೇ ಪ್ರಮುಖವಾಗಿ ಅಸ್ತ್ರವಾಗಿ ಬಳಸಿಕೊಂಡರೂ ಆಶ್ಚರ್ಯ ಪಡಬೇಕಾಗಿಲ್ಲ.
ನೊಬೆಲ್ ಪ್ರಶಸ್ತಿ ವಿಜೇತೆ ದಿವಂಗತ ಮದರ್ ತೆರೆಸಾ ಅವರ ಸಾಮಾಜಿಕ ಕಾಳಜಿಯನ್ನು ಮೋಹನ್ ಭಾಗವತ್ ಪ್ರಶ್ನಿಸಿದ್ದಾರೆ.
ಇವರ ಸಾಮಾಜಿಕ ಕಳಕಳಿಯ ಹಿಂದೆ ಮತಾಂತರದ ಉದ್ದೇಶ ಯಾಕಿರಬಾರದು ಎನ್ನುವ ಗಂಭೀರ ಪ್ರಶ್ನೆಯನ್ನು ಭಾಗವತ್ ಎತ್ತಿದ್ದಾರೆ. ಮುಂದೆ ಓದಿ..

ಭಾಗವತ್ ವಿವಾದಾತ್ಮಕ ಹೇಳಿಕೆ
ರಾಜಸ್ಥಾನದ ಭರತ್ ಪುರದಲ್ಲಿ ಸೋಮವಾರ (ಫೆ 24) ಮಾತನಾಡುತ್ತಿದ್ದ ಭಾಗವತ್ , ಮದರ್ ತೆರೆಸಾ ಅವರ ಬಡವರ ಸೇವೆ ನಿಸ್ವಾರ್ಥವಾಗಿದ್ದಿರಬಹುದು. ಆದರೆ ಅವರ ಸೇವೆಯ ಹಿಂದೆ ಕ್ರೈಸ್ತ ಧರ್ಮದ ಮತಾಂತರದ ಉದ್ದೇಶವಿತ್ತು ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.
|
ಕಾರ್ಯಕ್ರಮದಲ್ಲಿ ಭಾಗವತ್
ನಮ್ಮ ದೇಶದಲ್ಲಿ ಯಾವುದೇ ಸಾಮಾಜಿಕ ಕಳಕಳಿಯ ಚಟುವಟಿಕೆಗಳ ಹಿಂದೆ ಒಂದು ಉದ್ದೇಶ ಇದ್ದೇ ಇರುತ್ತದೆ. ನಿಸ್ವಾರ್ಥವಾಗಿ ಸಾಮಾಜಿಕ ಚಟುವಟಿಕೆಗಳು ನಡೆಯುವ ಉದಾಹರಣೆಗಳು ನಮ್ಮಲ್ಲಿ ವಿರಳ ಎಂದು ಭಾಗವತರ್ ಭರತ್ ಪುರದಲ್ಲಿ ಅನಾಥಶ್ರಮವೊಂದನ್ನು ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಈ ರೀತಿಯ ಹೇಳೀಕೆಯನ್ನು ನೀಡಿದ್ದಾರೆ.

ಒಂದು ವಾರದ ಹಿಂದೆ ಮೋದಿ ಹೇಳಿದ್ದೇನು
ಒಂದು ವಾರದ ಹಿಂದೆ ಪ್ರಧಾನಿ ಮೋದಿ, ದೇಶದಲ್ಲಿ ಎಲ್ಲಾ ಜಾತಿ, ಕೋಮಿನವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಭಾರತೀಯರು ಯಾವುದೇ ಜಾತಿಯವರ ಜೊತೆ ತಮ್ಮನ್ನು ಗುರುತಿಸಿಕೊಳ್ಳಲು ಯಾವುದೇ ಅಡೆತಡೆ ಇಲ್ಲ ಎಂದು ಹೇಳಿದ್ದರು.
|
ಅರವಿಂದ್ ಕೇಜ್ರಿವಾಲ್ ಹೇಳಿಕೆ
ದಯವಿಟ್ಟು ಮದರ್ ತೆರೆಸಾ ಅವರನ್ನು ಬಿಟ್ಟುಬಿಡಿ. ನಾನು ಈ ಹಿಂದೆ ಮದರ್ ತೆರೆಸಾ ಜೊತೆ ಕೊಲ್ಕತ್ತಾದ ನಿರ್ಮಲ್ ಹೃದಯ್ ಆಶ್ರಮದಲ್ಲಿ ಕೆಲಸ ಮಾಡಿದ್ದೇನೆ. ಅವರು ಉದಾತ್ತ ಧ್ಯೇಯ ಹೊಂದಿರುವ ಚೈತನ್ಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ವಿಪಕ್ಷಗಳ ಟೀಕೆ
ಎಲ್ಲಾ ಪ್ರಮುಖ ವಿರೋಧ ಪಕ್ಷಗಳು ಭಾಗವತ್ ಹೇಳಿಕೆಯನ್ನು ಖಂಡಿಸಿವೆ. ಈ ವಿಷಯವನ್ನು ನಾವು ಸದನದಲ್ಲಿ ಪ್ರಸ್ತಾಪಿಸುತ್ತೇವೆ. ಮದರ್ ತೆರೆಸಾ ಅವರನ್ನು ಈ ರೀತಿ ಅವಮಾನಿಸುವುದು ಸರಿಯಲ್ಲ. ಬಿಜೆಪಿ ಕೂಡಲೇ ಕ್ಷಮೆಯಾಚಿಸ ಬೇಕೆಂದು ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಆಗ್ರಹಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications