Get Updates
Get notified of breaking news, exclusive insights, and must-see stories!

ಚುನಾವಣಾ ಸಂಬಂಧಿತ ಅಪರಾಧಗಳಲ್ಲಿ ಶಿಕ್ಷೆ ಪ್ರಮಾಣ ಅಧಿಕ: ಚುನಾವಣಾ ಆಯೋಗ

ನವದೆಹಲಿ, ಏಪ್ರಿಲ್. 29: ವಿಧಾನಸಭಾ ಚುನಾವಣೆಗೆ ಸಿದ್ಧವಾಗಿರುವ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ ಪ್ರಕರಣಗಳಲ್ಲಿ ಶೇಕಡಾ 50ಕ್ಕೂ ಹೆಚ್ಚು ಶಿಕ್ಷೆಯಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ. ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ನಿಯಮಿತವಾಗಿ ಅನುಸರಿಸುತ್ತದೆ ಎಂದು ತಿಳಿಸಿದ್ದಾರೆ.

"ಕರ್ನಾಟಕವು ಅತ್ಯಧಿಕ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಪರಾಧಗಳು ಸಂಭವಿಸಿದ ರಾಜ್ಯಗಳಲ್ಲಿ ಒಂದಾಗಿದೆ. ಕಳೆದ ಬಾರಿ, 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲವನ್ನೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಎಲ್ಲವನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ನಾವು ಕರ್ನಾಟಕದಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದೇವೆ" ಎಂದು ಪಿಟಿಐ ಸಂದರ್ಶನವೊಂದರಲ್ಲಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.

Conviction rate in election related offences high in state: Election Commission official

ಚುನಾವಣಾ ಆಯೋಗದ ಅಧಿಕಾರಿಯ ಪ್ರಕಾರ, 2013 ರಿಂದ 2019 ರವರೆಗೆ ನಡೆದ ಚುನಾವಣೆಗಳಿಗೆ ಸಂಬಂಧಿಸಿದಂತೆ ಈವರೆಗೆ ಶೇಕಡಾ 50ಕ್ಕೂ ಹೆಚ್ಚು ಶಿಕ್ಷೆಯಾಗಿದೆ. ಈ ಬಗ್ಗೆ ಮತ್ತಷ್ಟು ವಿವರಿಸಿದ ಮನೋಜ್ ಕುಮಾರ್ ಮೀನಾ, "ಶೇಕಡಾ 50 ಕ್ಕಿಂತ ಹೆಚ್ಚು ಪ್ರಕರಣಗಳಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದೆ. ಇದು ದೊಡ್ಡ ಸಂಖ್ಯೆಯಾಗಿದೆ" ಎಂದು ಹೇಳಿದ್ದಾರೆ.

ಬೇರೆ ರಾಜ್ಯಗಳ ಬಗ್ಗೆ ನನಗೆ ಗೊತ್ತಿಲ್ಲ ಆದರೆ ಚುನಾವಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶಿಕ್ಷೆಯಾಗುವುದು ತೀರಾ ವಿರಳ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಉತ್ತಮ ಸಾಧನೆ ಮಾಡಿದೆ. ಚುನಾವಣಾ ಆಯೋಗ ಮತ್ತು ಅವರ ಕಚೇರಿ ಪ್ರಕರಣಗಳನ್ನು ಬಹಳ ನಿಯಮಿತವಾಗಿ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ವಿವರಗಳನ್ನು ನೀಡಿದ ಅಧಿಕಾರಿ, ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಜನರಿಗೆ ಅವುಗಳ ನಿರ್ವಹಣೆಯ ಬಗ್ಗೆ ತರಬೇತಿ ನೀಡಲಾಗುತ್ತದೆ. ಸ್ಕ್ವಾಡ್ ತಂಡಗಳು ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಪಡೆದಿವೆ. ಅವರು ಅಕ್ರಮವನ್ನು ಕಂಡು ಹಿಡಿಯುವ ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳುವ ಅಧಿಕಾರವನ್ನು ಹೊಂದಿದ್ದಾರೆ. ಹೇಗೆ ಹುಡುಕಬೇಕು ಮತ್ತು ಹೇಗೆ ವಶಪಡಿಸಿಕೊಳ್ಳಬೇಕು, ಪ್ರಕರಣವನ್ನು ಹೇಗೆ ಬುಕ್ ಮಾಡಬೇಕು, ನ್ಯಾಯಾಲಯದ ಮುಂದೆ ಹೇಗೆ ಹಾಜರುಪಡಿಸಬೇಕು ಮತ್ತು ನ್ಯಾಯಾಲಯದ ಅನುಮತಿಯನ್ನು ಹೇಗೆ ತೆಗೆದುಕೊಳ್ಳಬೇಕು ಎಂದು ನಾವು ಅವರಿಗೆ ತರಬೇತಿ ನೀಡಿದ್ದೇವೆ" ಎಂದಿದ್ದಾರೆ.

Conviction rate in election related offences high in state: Election Commission official

ನಡೆಯುತ್ತಿರುವ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಕ್ರಿಯೆಯಲ್ಲಿ ರಾಜ್ಯದಲ್ಲಿ ಹಿಂದೆಂದೂ ಇಲ್ಲದಷ್ಟು ಭಾರಿ ನಗದು, ಅಮೂಲ್ಯವಾದ ಲೋಹಗಳು ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ದಿನಾಂಕಗಳನ್ನು ಘೋಷಿಸುವ ಸುಮಾರು ನಾಲ್ಕು ತಿಂಗಳ ಮುಂಚೆಯೇ ಆಯೋಗ ಕಸರತ್ತು ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ರಾಜ್ಯಕ್ಕೆ ಭೇಟಿ ನೀಡಿದ ತಕ್ಷಣ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಿದರು, ಎಲ್ಲವೂ ಜಾರಿಯಲ್ಲಿದ್ದುದರಿಂದ ಆಯೋಗವು ಅದನ್ನು ಹೆಚ್ಚು ವೃತ್ತಿಪರ ರೀತಿಯಲ್ಲಿ ಮಾಡಲು ಸಾಧ್ಯವಾಯಿತು. ಹೀಗಾಗಿ ಅಪಾರ ಪ್ರಮಾಣದ ನಗದು, ಚಿನ್ನ, ಮದ್ಯ ಮತ್ತು ಉಚಿತಗಳನ್ನು ವಶಪಡಿಸಿಕೊಳ್ಳಲಾಯಿತು ಎಂದರು.

" ಮುಂದಿನ 14 ದಿನಗಳು ನಮಗೆ ಅತ್ಯಂತ ನಿರ್ಣಾಯಕವಾಗಿವೆ. ನಾವು ನಮ್ಮ ಚೆಕ್‌ಪೋಸ್ಟ್‌ಗಳಲ್ಲಿ 100 % ಪರಿಶೀಲನೆ ನಡೆಸುತ್ತಿದ್ದೇವೆ. ಆದರೆ ನಾವು ಆಂತರಿಕ ಚಲನವಲನದ ಮೇಲೆ ನಿಗಾ ಇಡುತ್ತೇವೆ. ನಾವು ಸ್ಥಳೀಯ ಮಟ್ಟದಲ್ಲಿಯೂ ಗುಪ್ತವಾಗಿ ಮಾಹಿತಿ ಸಂಗ್ರಹಿಸುತ್ತಿದ್ದೇವೆ" ಎಂದು ಅಧಿಕಾರಿ ಹೇಳಿದ್ದಾರೆ.

ಆಯೋಗ ಹಂಚಿಕೊಂಡ ಮಾಹಿತಿಯ ಪ್ರಕಾರ, ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಗುರುವಾರದವರೆಗೆ 102.9 ಕೋಟಿ ನಗದು, 68.69 ಕೋಟಿ ಮೌಲ್ಯದ ಮದ್ಯ ಮತ್ತು 76 ಕೋಟಿ ಮೌಲ್ಯದ 149.31 ಕೆಜಿ ಚಿನ್ನ ಸೇರಿದಂತೆ ಒಟ್ಟು 292.06 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+