ಹೈದರಾಬಾದ್ ಎನ್ಕೌಂಟರ್, ಪೊಲೀಸ್ ಕ್ರಮ ಖಂಡಿಸಿದ ಕಾರ್ಯಕರ್ತೆ
ಹೈದರಾಬಾದ್, ಡಿಸೆಂಬರ್ 06: ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರ, ಹತ್ಯೆ ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ಪೊಲೀಸರು ಎನ್ಕೌಂಟರ್ ಮಾಡಿ ಹತ್ಯೆ ಮಾಡಿರುವುದನ್ನು ಮಹಿಳಾ ಕಾರ್ಯಕರ್ತೆ ಖಂಡಿಸಿದ್ದಾರೆ. ಮಾನವ ಹಕ್ಕುಗಳ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ, ತೆಲಂಗಾಣ ಸರ್ಕಾರದ ಆಡಳಿತ ವೈಫಲ್ಯವಾಗಿದೆ ಎಂದಿದ್ದಾರೆ.
"ತೆಲಂಗಾಣದಲ್ಲಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಸಂಪೂರ್ಣ ಅಸಮರ್ಥತೆಯಿಂದ ಕೂಡಿದೆ. ಅಪರಾಧ ಕೃತ್ಯಗಳನ್ನು ತಡೆಯಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಈ ಪ್ರಕರಣ ನೋಡಿದರೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ'' ಎಂದು ಪ್ರಗತಿಪರ ಮಹಿಳಾ ಸಮಿತಿ ಕಾರ್ಯದರ್ಶಿ ಕವಿತಾ ಕೃಷ್ಣನ್ ಹೇಳಿದ್ದಾರೆ.
ಆರೋಪಿಗಳನ್ನು ತಪ್ಪಿತಸ್ಥರು ಎಂದು ನ್ಯಾಯಾಲಯ ಇನ್ನು ಆದೇಶಿಸಿಲ್ಲ. ಆರೋಪ ಸಾಬೀತಾಗುವ ಮುನ್ನವೇ ಪೊಲೀಸ್ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಉತ್ತರ ಹೇಳದೆ ತೆಲಂಗಾಣ ಸರ್ಕಾರವು, ನ್ಯಾಯ ಸಿಕ್ಕಿದೆ ಎಂಬಂತೆ ವರ್ತಿಸುತ್ತಿದೆ ಎಂದು ಹೇಳಿದರು.

ತೆಲಂಗಾಣ ಪೊಲೀಸರು ನಡೆದುಕೊಂಡ ರೀತಿ ಸರಿಯಿಲ್ಲ. ಮಹಿಳೆಯರು ಘನತೆಯಿಂದ ಬದುಕುವಂತೆ ಪೊಲೀಸ್ ವ್ಯವಸ್ಥೆಯನ್ನು ಸರ್ಕಾರ ಸಜ್ಜುಗೊಳಿಸಬೇಕಿದೆ. ಅದು ಬಿಟ್ಟು ಪೊಲೀಸರು ನ್ಯಾಯವನ್ನು ಕೈಗೆತ್ತಿಕೊಂಡಿದ್ದಾರೆ. ಈ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದ ಪೊಲೀಸರ ವಿಚಾರಣೆ ನಡೆಸಬೇಕಿದೆ.
ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮನ್ (ಎನ್ಎಫ್ಐಡಬ್ಲ್ಯು) ಪ್ರಧಾನ ಕಾರ್ಯದರ್ಶಿ ಅನ್ನಿರಾಜಾ, ಇಡೀ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು, ಈ ರೀತಿ ಎನ್ ಕೌಂಟರ್ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ಬೃಂದಾ ಗ್ರೋವರ್ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಬಂಧಿತರಾದವರನ್ನು ನಿರ್ದಾಕ್ಷಿಣ್ಯವಾಗಿ ಕೊಲ್ಲುವುದು ಸರಿಯಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವುದು ಸಮಂಜಸವಲ್ಲ. ಮಹಿಳೆಯರು ಸಮಾನ ಮತ್ತು ಮುಕ್ತ ನಾಗರಿಕರಾಗಿ ಬದುಕುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸರ್ಕಾರ ಮರೆತಿದೆ ಎಂದಿದ್ದಾರೆ.
"ಬಿಜೆಪಿ ಈ ರೀತಿ ವಿಷಯಾಂತರ ರಾಜಕೀಯದಲ್ಲಿ ನಿಪುಣವಾಗಿದ್ದು, ಹಿಂಸೆಯ ಮೂಲಕ ನ್ಯಾಯ, ನಕಲಿ ಎನ್ಕೌಂಟರ್, ಕಲ್ಲು ಹೊಡೆದು ಸಾಯಿಸುವುದು ಎಲ್ಲಕ್ಕೂ ಒಂದೇ ರೀತಿ ನ್ಯಾಯ ಸರಿಯೇ?"ಎಂದು ಮಾನವ ಹಕ್ಕು ಕಾರ್ಯಕರ್ತರಾದ ಶಬನಮ್ ಹಶ್ಮಿ ಪ್ರತಿಕ್ರಿಯಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications