Jyoti Malhotra: ಪಾಕ್ ಪರ ಬೇಹುಗಾರಿಕೆ ಆರೋಪ; ಜ್ಯೋತಿ ಮಲ್ಹೋತ್ರಾ ಡೈರಿಯಲ್ಲಿದ್ದ ವಿವರ ಬಹಿರಂಗ!
ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರ ವೈಯಕ್ತಿಕ ಡೈರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡೈರಿಯಲ್ಲಿ ಅವರ ಆಲೋಚನೆಗಳು ಮತ್ತು ಪ್ರಯಾಣಗಳ ಬಗ್ಗೆ ವಿವರವಾಗಿ ಬರೆದಿದ್ದಾರೆ ಎಂದು ವರದಿಯಾಗಿದೆ.
ಗೂಢಚರ್ಯೆ ಆರೋಪದ ಮೇಲೆ ಕಳೆದ ಎರಡು ವಾರಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಬಂಧಿಸಲ್ಪಟ್ಟ 11 ಜನರಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೂಡ ಒಬ್ಬರು. ಉತ್ತರ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನ-ಸಂಬಂಧಿತ ಗೂಢಚಾರ ಜಾಲವನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. 'ಟ್ರಾವೆಲ್ ವಿತ್ ಜೊ' ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದ ಜ್ಯೋತಿ ಅವರನ್ನು ಮೇ 16 ರಂದು ಹರಿಯಾಣದ ಹಿಸಾರ್ನಲ್ಲಿರುವ ನ್ಯೂ ಅಗರ್ಸೈನ್ ಎಕ್ಸ್ಟೆನ್ಶನ್ನಿಂದ ಬಂಧಿಸಲಾಯಿತು.

ಪೊಲೀಸ್ ಮೂಲಗಳ ಪ್ರಕಾರ, ಜ್ಯೋತಿ ಮಲ್ಹೋತ್ರಾ ತಮ್ಮ ಪ್ರಯಾಣದ ಅನುಭವವನ್ನು ದಾಖಲಿಸಿದ್ದಾರೆ. ಅವರು ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಡೈರಿಯಲ್ಲಿ ಮಾಹಿತಿಯನ್ನು ಬರೆದಿದ್ದಾರೆ. ಇದು ಅವರ ಅಂತರಾಷ್ಟ್ರೀಯ ಸಂಪರ್ಕಗಳು, ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬಹುದು ಎಂದು ತನಿಖಾಧಿಕಾರಿಗಳು ನಿರೀಕ್ಷಿಸಿದ್ದಾರೆ.
ಸುಮಾರು 10-11 ಪುಟಗಳಷ್ಟು ಉದ್ದವಿರುವ ಈ ದಿನಚರಿಯಲ್ಲಿ ಎಂಟು ಪುಟಗಳಷ್ಟು ಸಾಮಾನ್ಯ ಪ್ರಯಾಣ ಟಿಪ್ಪಣಿಗಳು ಇಂಗ್ಲಿಷ್ನಲ್ಲಿ ಮತ್ತು ಮೂರು ಪುಟಗಳಷ್ಟು ಪಾಕಿಸ್ತಾನವನ್ನು ಕೇಂದ್ರೀಕರಿಸಿ ಹಿಂದಿಯಲ್ಲಿ ಬರೆಯಲಾಗಿದೆ.
ಒಂದೇ ಮಣ್ಣಿಗೆ ಸೇರಿದವರು!
ಪಾಕಿಸ್ತಾನ ಪ್ರವಾಸದಿಂದ ಹಿಂದಿರುಗಿದ ಬಳಿಕ ದಿನಚರಿಯಲ್ಲಿ, "ಪಾಕಿಸ್ತಾನದ ಮೂಲಕ 10 ದಿನಗಳ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಇಂದು ನಾನು ನನ್ನ ದೇಶವಾದ ಭಾರತಕ್ಕೆ ಮರಳಿದ್ದೇನೆ. ಗಡಿಗಳ ಅಂತರವು ಎಷ್ಟು ಕಾಲ ಉಳಿಯುತ್ತದೆ ಎಂದು ನಮಗೆ ತಿಳಿದಿಲ್ಲ, ಆದರೆ ಹೃದಯಗಳ ಕುಂದುಕೊರತೆಗಳು ಮಾಯವಾಗಲಿ. ನಾವೆಲ್ಲರೂ ಒಂದೇ ಭೂಮಿ, ಒಂದೇ ಮಣ್ಣಿಗೆ ಸೇರಿದವರು." ಎಂದು ಬರೆದಿದ್ದಾರೆ.
ಜ್ಯೋತಿ ಮಲ್ಹೋತ್ರಾ ತಮ್ಮ ಡೈರಿಯಲ್ಲಿ ಪಾಕಿಸ್ತಾನದಲ್ಲಿ ಪಡೆದ ಆತಿಥ್ಯವನ್ನು ಹೊಗಳಿದ್ದಾರೆ. ಹೆಚ್ಚಿನ ಭಾರತೀಯ ಹಿಂದೂಗಳು ಅಲ್ಲಿ ತಮ್ಮ ಪೂರ್ವಜರ ಸ್ಥಳಗಳಿಗೆ ಭೇಟಿ ನೀಡಬಹುದೆಂದು ಆಶಿಸಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ. ದೇವಾಲಯಗಳು ಮತ್ತು ಗುರುದ್ವಾರಗಳು ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಸುಲಭ ಪ್ರವೇಶ ಸಿಗಬೇಕು ಮತ್ತು 1947 ರ ವಿಭಜನೆಯ ಸಮಯದಲ್ಲಿ ಬೇರ್ಪಟ್ಟ ಕುಟುಂಬಗಳೊಂದಿಗೆ ಮತ್ತೆ ಸಂಪರ್ಕ ಸಾಧಿಸುವ ಇಷ್ಟದ ಬಗ್ಗೆಯೂ ಅವರು ಬರೆದಿದ್ದಾರೆ.
ತನಿಖಾಧಿಕಾರಿಗಳ ಪ್ರಕಾರ, ಮಲ್ಹೋತ್ರಾ ಆಗಾಗ್ಗೆ ತಡರಾತ್ರಿಯವರೆಗೆ ಕೆಲಸ ಮಾಡುತ್ತಿದ್ದರು, ರಾತ್ರಿ 1 ಗಂಟೆಯವರೆಗೆ ವೀಡಿಯೊಗಳನ್ನು ಎಡಿಟ್ ಮಾಡುತ್ತಿದ್ದರು ಮತ್ತು ಅಪ್ಲೋಡ್ ಮಾಡುತ್ತಿದ್ದರು. ಅವರು ದೆಹಲಿಗೆ ಪ್ರಯಾಣಿಸುತ್ತಿರುವುದಾಗಿ ತಮ್ಮ ಕುಟುಂಬಕ್ಕೆ ತಿಳಿಸಿದ್ದರು, ಆದರೆ ವಾಸ್ತವವಾಗಿ ಅವರು ಬೇರೆಡೆಗೆ ಹೋಗುತ್ತಿದ್ದರು ಎಂದು ತನಿಖೆಯಲ್ಲಿ ತಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications