ಜಾರ್ಖಂಡ್: ಪೊಲೀಸ್ ಠಾಣೆಯೊಳಗೆ ಮದ್ಯ ಸೇವಿಸಿ ನೃತ್ಯ ಮಾಡಿದ ಪೊಲೀಸರು, ಐವರ ಅಮಾನತು
ಪೊಲೀಸರ ಕೃತ್ಯವನ್ನು ಖಂಡಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬು ಲಾಲ್ ಮರಾಂಡಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ರಾಂಚಿ, ಮಾರ್ಚ್ 10: ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿ ಕುಣಿದು ಕುಪ್ಪಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಜಾರ್ಖಂಡ್ನ ಗೊಡ್ಡಾ ಜಿಲ್ಲೆಯ ಪೊಲೀಸ್ ಠಾಣೆಯಾಗಿದ್ದು, ಘಟನೆ ಬಳಿಕ ಐವರು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
कुछ पुलिसवालों की थाना कैम्पस में यह वल्गर एवं बेपरवाह फूहड़ प्रस्तुति।
— Babulal Marandi (@yourBabulal) March 9, 2023
रक्षक के रूप में भक्षकों का यह भयावह चेहरा।
सचमुच बारूद के ढ़ेर पर झारखंड को बिठा दिया है सोरेन सल्तनत के एक्सीडेंटल राजकुमार हेमंत ने।
इन्हें जयचंद जैसा याद करेगा आदिवासी समाज और देश।जागो झारखंड के युवा। pic.twitter.com/OAxpohykj5
ಗೊಡ್ಡಾ ಜಿಲ್ಲೆಯ ಪೊಲೀಸ್ ಠಾಣೆ ಕ್ಯಾಂಪಸ್ನಲ್ಲಿ ಮದ್ಯ ಸೇವಿಸಿ ನೃತ್ಯ ಮಾಡಿದ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಅಮಾನತುಗೊಂಡವರು ಠಾಣೆಯಲ್ಲಿ ಹೋಳಿ ಆಚರಣೆ ಮಾಡುತ್ತಿದ್ದರು. ಹೋಳಿ ಆಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕಾನೂನು ಪಾಲಿಸಬೇಕಾದವರು, ರಕ್ಷಣೆ ನೀಡುವ ಸ್ಥಳದಲ್ಲಿ ಮದ್ಯಪಾನ ಮಾಡುತ್ತ ಆಮೋಜು ಮಸ್ತಿ ಮಾಡಿರುವುದಕ್ಕೆ ಭಾರಿ ಆಕ್ಷೇಪ ಉಂಟಾಗಿದೆ.

ಘಟನೆಯ ವೈರಲ್ ಆದ ಬೆನ್ನಲ್ಲೆ ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಐವರು ಪೊಲೀಸರು ತಪ್ಪಿತಸ್ಥರು ಎಂದು ತಿಳಿದು ಬಂದಿದ್ದು, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಗೊಡ್ಡಾದ ಪೊಲೀಸ್ ಅಧೀಕ್ಷಕ ನಾಥು ಸಿಂಗ್ ಮೀನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪೊಲೀಸರ ಕೃತ್ಯವನ್ನು ಖಂಡಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಅಮಾನತುಗೊಂಡ ಪೊಲೀಸರಲ್ಲಿ ಇಬ್ಬರು ಎಎಸ್ಐಗಳು ಮತ್ತು ಮೂವರು ಕಾನ್ಸ್ಟೆಬಲ್ಗಳು ಸೇರಿದ್ದಾರೆ. ಸಹಾಯಕ ಸಬ್ ಇನ್ಸ್ಪೆಕ್ಟರ್ ಬಿಪಿನ್ ಬಿಹಾರಿ ರಾಯ್, ಸಹಾಯಕ ಸಬ್ ಇನ್ಸ್ಪೆಕ್ಟರ್ ರಾಧಾ ಕೃಷ್ಣ ಸಿಂಗ್, ಕಾನ್ಸ್ಟೆಬಲ್ ಸತ್ಯೇಂದ್ರ ನಾರಾಯಣ ಸಿಂಗ್, ಕಾನ್ಸ್ಟೆಬಲ್ ಕೃಷ್ಣ ಕುಮಾರ್ ಸಿಂಗ್ ಮತ್ತು ಕಾನ್ಸ್ಟೆಬಲ್ ಪ್ಯಾರೆ ಮೋಹನ್ ಸಿಂಗ್ ಅಮಾನತುಗೊಂಡವರು.
"09.03.2023 ರಂದು, ಗೊಡ್ಡಾ ಜಿಲ್ಲೆಯ ಮಹಾಗಾಮಾ ಪೊಲೀಸ್ ಠಾಣೆಯ ವಿಡಿಯೋ ವೈರಲ್ ಆಗಿತ್ತು, ಈ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ, ಉಪವಿಭಾಗೀಯ ಪೊಲೀಸ್ ಅಧಿಕಾರಿ, ಮಹಾಗಾಮಾ ಅವರೊಂದಿಗೆ ವಿಚಾರಣೆ ನಡೆಸಲಾಯಿತು. ತನಿಖೆಯ ಸಂದರ್ಭದಲ್ಲಿ, ಈ ಕೆಳಗಿನ ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದಿದ್ದು, ಅವರನ್ನು ಅಮಾನತುಗೊಳಿಸಿ ಠಾಣೆಗೆ ಹಿಂತಿರುಗಿಸಲಾಗಿದೆ" ಎಂದು ಎಸ್ಪಿ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಗುರುವಾರ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಬಾಬು ಲಾಲ್ ಮರಾಂಡಿ ಅವರು ವೈರಲ್ ವಿಡಿಯೋ ಸ್ಕ್ರೀನ್-ರೆಕಾರ್ಡಿಂಗ್ ಅನ್ನು ಹಂಚಿಕೊಂಡಿದ್ದಾರೆ. ಇದನ್ನು ಕಾನ್ಸ್ಟೆಬಲ್ ಸತ್ಯೇಂದ್ರ ನಾರಾಯಣ್ ಸಿಂಗ್ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು.
ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಾಬು ಲಾಲ್ ಮರಾಂಡಿ, "ಪೊಲೀಸ್ ಠಾಣೆ ಕ್ಯಾಂಪಸ್ನಲ್ಲಿ ಕೆಲವು ಪೊಲೀಸರ ಈ ಅಸಭ್ಯ ಮತ್ತು ಅಸಡ್ಡೆ ಪ್ರಸ್ತುತಿ ರಕ್ಷಕರ ವೇಷದಲ್ಲಿರುವ ವ್ಯಾಘ್ರರ ಮುಖ. ಸೋರೆನ್ ಸುಲ್ತಾನರ ಆಕಸ್ಮಿಕ ರಾಜಕುಮಾರ ಹೇಮಂತ್ನಿಂದ ಜಾರ್ಖಂಡ್ ನಿಜವಾಗಿಯೂ ಪುಡಿಪುಡಿಯಾಗಿದೆ. ಬುಡಕಟ್ಟು ಸಮಾಜ ಮತ್ತು ಜಾರ್ಖಂಡ್ ಯುವಜನತೆ ಎದ್ದೇಳಿ" ಎಂದು ಹೇಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications