Get Updates
Get notified of breaking news, exclusive insights, and must-see stories!

Coromandel Train Accident: ಬೆಂಗಳೂರಿನಿಂದ ತೆರಳಿದ ಪ್ರಯಾಣಿಕರೆಷ್ಟು? ಮೃತಪಟ್ಟ ಕನ್ನಡಿಗರೆಷ್ಟು? ಮಾಹಿತಿ, ವಿವರ

ಬೆಂಗಳೂರು, ಮೇ 03: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 22 ಬೋಗಿಗಳ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) - ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12864) ರೈಲು ಅಪಘಾತಕ್ಕೆ ಈಡಾಗಿದೆ. ಈ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 280 ದಾಟಿದ್ದು, ಗಾಯಗೊಂಡವರ ಸಂಖ್ಯೆ 900ಕ್ಕೂ ಹೆಚ್ಚಿದೆ. ಮೃತಪಟ್ಟವರಲ್ಲಿ ದೇಶದ ಹಲವು ರಾಜ್ಯಗಳ ಪ್ರಯಾಣಿಕರೂ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದಿಂದ ಪ್ರಯಾಣಿಸುತ್ತಿದ್ದ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು 'ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌' ವರದಿ ಮಾಡಿದೆ. ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12841) ಗೆ ಡಿಕ್ಕಿಯಾದ ನಂತರ ಎರಡು ಜನರಲ್ ಬೋಗಿಗಳು ಮತ್ತು ರೈಲಿನ ಬ್ರೇಕ್ ವ್ಯಾನ್ ಹಳಿತಪ್ಪಿದೆ ಎಂದು ತಿಳಿದುಬಂದಿದೆ.

Coromandel Train Accident

ಬೆಂಗಳೂರಿನಿಂದ ಹೊರಟ ರೈಲಿನಲ್ಲಿ ಸುಮಾರು 1,300 ಪ್ರಯಾಣಿಕರು ಇದ್ದುದರಿಂದ ಸಾವುನೋವುಗಳು ಮತ್ತು ಗಾಯಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದೂ ಹೇಳಲಾಗುತ್ತಿದೆ.

ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಪ್ರಕಾರ, ಬೈಯಪ್ಪನಹಳ್ಳಿಯ ಎಸ್‌ಎಂವಿಟಿ ಸ್ಟೇಷನ್‌ನಿಂದ ಒಟ್ಟು 994 ಕಾಯ್ದಿರಿಸಿದ ಪ್ರಯಾಣಿಕರು ಹತ್ತಿದ್ದರು. ಸುಮಾರು 300 ಕಾಯ್ದಿರಿಸದ ಪ್ರಯಾಣಿಕರು ಕೂಡ ರೈಲನ್ನು ಹತ್ತಿದರು. ಈ ಪ್ರಯಾಣಿಕರ ಬಗ್ಗೆ ಯಾವುದೇ ವಿವರಗಳಿಲ್ಲ. 'ಸಂತ್ರಸ್ತರು ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದ ಕಾರಣ, ಪ್ರಯಾಣಿಕರ ಗುರುತನ್ನು ಖಚಿತಪಡಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ' ಎಂದು ಅವರು ತಿಳಿಸಿದ್ದಾರೆ.

Coromandel Train Accident

ಪ್ರಕಟಣೆಯ ಪ್ರಕಾರ, 'ಈಗಾಗಲೇ, ದುರಂತ ಅಪಘಾತದಿಂದಾಗಿ ರಾಜ್ಯದಿಂದ ತೆರಳಿದ್ದ ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ. ನಾಲ್ವರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

'ಸಣ್ಣ ಗಾಯಗಳಿಗೆ ಒಳಗಾದ ಪ್ರಯಾಣಿಕರನ್ನು ಆದ್ಯತೆಯ ಮೇರೆಗೆ ಬಾಲಸೋರ್, ಖಾಂತಪಾರಾ, ಸೊರೊ ಮತ್ತು ಗೋಪಾಲ್‌ಪುರ ಆರೋಗ್ಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ' ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಡಬೇಕಿದ್ದ ಎಸ್‌ಎಂವಿಟಿ-ಗುವಾಹಟಿ ಎಕ್ಸ್‌ಪ್ರೆಸ್ (12509) ರದ್ದಾಗಿದೆ.

Coromandel Train Accident

ರಕ್ಷಣಾ ಕಾರ್ಯಾಚರಣೆ

ಬಾಲಸೋರ್ ಬಳಿಯ ಬಹನಾಗ ಬಜಾರ್‌ನಲ್ಲಿ ಹಳಿತಪ್ಪಿದ ಬೋಗಿಗಳಲ್ಲಿ ಸಿಲುಕಿರುವ ಜನರನ್ನು ಹೊರತರಲು ಅಪಘಾತ ಸ್ಥಳದಲ್ಲಿ ಭಾರೀ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದು ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಸಂಭವಿಸಿದ ಅತೀ ದೊಡ್ಡ ರೈಲು ಅಪಘಾತಗಳಲ್ಲಿ ಒಂದಾಗಿದೆ.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ನೀಡಲಾಗುವುದು. ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಲಾಗಿದೆ. ಅಪಘಾತದ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಒಂದು ದಿನದ ಶೋಕಾಚರಣೆ ಘೋಷಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+