ಭಾರತದಲ್ಲಿ ಕೊರೊನಾ BF7 ಪತ್ತೆ: ಏರ್ಫೋರ್ಟ್ನಲ್ಲಿ ಪ್ರಯಾಣಿಕರ ತಪಾಸಣೆಗೆ ಸರ್ಕಾರ ಕ್ರಮ?
ಬೆಂಗಳೂರು, ಡಿಸೆಂಬರ್ 21: ಚೀನಾ ದೇಶದಲ್ಲಿ ಉಲ್ಬಣಗೊಂಡು ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ತಳಿ BF7 ಸೋಂಕು ಭಾರತಕ್ಕೆ ಕಾಲಿಟ್ಟಿದೆ. ಇದರ ಬೆನ್ನಲ್ಲೆ ಚೀನಾ ಸೇರಿದಂತೆ ಇತರರ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಮಾಣಿಕರನ್ನು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ತಪಾಸಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೊರೊನಾ ಮಹಾಮಾರಿ ಮತ್ತೆ ಆರ್ಭಟ ಶುರುವಿಟ್ಟುಕೊಂಡಿದೆ. ಚೀನಾದಲ್ಲಿ ಕಂಡು ಬಂದಿದ್ದ ಕೊರೊನಾ ರೂಪಾಂತರಿ ತಳಿಯು (BF7) ಭಾರತದ ವಡೋದರದ ಸಭಾನ್ಪುರ ಪ್ರದೇಶದಲ್ಲಿ ವಾಸಿಸುವ ಎನ್ಆರ್ಐ ಮಹಿಳೆಯೊಬ್ಬರಲ್ಲಿ ಕಂಡು ಬಂದಿದೆ. ಇದರ ಬೆನ್ನಲ್ಲಿಯೇ ಕೇಂದ್ರ ಆರೋಗ್ಯ ಇಲಾಖೆ ಸಚಿವ ಮನ್ಸೂಖ್ ಮಾಂಡವೀಯ ಅವರು ತಜ್ಞರು ಜೊತೆ ತುರ್ತು ಸಭೆ ನಡೆಸಿದ್ದಾರೆ. ದೇಶದಲ್ಲಿನ ಕೋವಿಡ್ ನಿಯಂತ್ರಣದ ಮುಂಜಾಗ್ರತಾ ಕ್ರಮವಾಗಿ ಸಭೆಯಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆಗೆ ಒಳಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ನಂತರ ಮಾತನಾಡಿದ ಮನ್ಸೂಖ್ ಮಾಂಡವೀಯ ಅವರು, ದೇಶದಲ್ಲಿ ಕೋವಿಡ್ -19 ಸೋಂಕು ಸಂಪೂರ್ಣವಾಗಿ ಅಂತ್ಯಗೊಂಡಿಲ್ಲ. ಈ ಮಧ್ಯೆ ಓಮಿಕ್ರಾನ್ ರೂಪಾಂತರಿ BF7 ದೇಶದಲ್ಲಿ ಪತ್ತೆ ಆಗಿದೆ. ಈ ಸಂಬಂಧ ದೇಶದ ಆಯಕಟ್ಟಿನ ಸ್ಥಳಗಳಲ್ಲಿ ಕೋವಿಡ್ ಕಣ್ಗಾವಲು ಬಲಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅಲ್ಲದೇ ಭಾರತ ಆರೋಗ್ಯ ವಿಚಾರದಲ್ಲಿ ಎಂತದ್ದೇ ಪರಿಸ್ಥಿತಿ ಎದುರಿಸಲು ಸಶಕ್ತವಾಗಿದೆ ಎಂದು ತಿಳಿಸಿದರು.

ಕೇವಲ ಶೇ.28ರಷ್ಟು ಜನ ನಿಯಮ ಪಾಲನೆ
ಸಭೆಯಲ್ಲಿ ಭಾಗವಹಿಸಿದ್ದ ಆರೋಗ್ಯ ತಜ್ಞರು ಸೇರಿದಂತೆ ಹಿರಿಯ ಅಧಿಕಾರಿಗಳು ವಿಶ್ವಮಟ್ಟದಲ್ಲಿ ಸದ್ಯದ ಕೋವಿಡ್ ಪರಿಸ್ಥಿತಿ ಹೇಗಿದೆ ಮತ್ತು ಭಾರತದ ಸನ್ನಿವೇಶ ಯಾವ ಹಂತದಲ್ಲಿದೆ ಎಂಬುದನ್ನು ವಿವರಿಸಿದರು. ಜೊತೆಗೆ ಭಾರತದ ಜನಸಂಖ್ಯೆಯ ಶೇ. 27ರಿಂದ 28 ರಷ್ಟು ಜನರು ಮಾತ್ರ ಕೋವಿಡ್ -19ರ ಮುನ್ನೆಚ್ಚರಿಕೆ ಮತ್ತು ಮಾರ್ಗಸೂಚಿಗಳನ್ನು ಅನುಸರಿಸುತ್ತಾರೆ.
ಕೊರೊನಾ ಬರದಂತೆ ತಡೆಯಲು ಅಥವಾ ಸಮರ್ಥ ನಿರ್ವಹಣೆಗೆ ಜನದಟ್ಟಣೆ ಪ್ರದೇಶಗಳಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ನೀತಿ ಆಯೋಗದ (ಆರೋಗ್ಯ) ಸದಸ್ಯ ಡಾ.ವಿ.ಕೆ ಪಾಲ್ ಸಲಹೆ ನೀಡಿದರು.
ಯುಎಸ್ನಿಂದ ಭಾರತಕ್ಕೆ ಬಂದಿದ್ದ ಈ ದೇಶದ ಮಹಿಳೆಯಲ್ಲಿ ಓಮಿಕ್ರಾನ್ ರೂಪಾಂತರಿ ಕಂಡು ಬಂದ ನಂತರ ಅವರ ಸಂಪರ್ಕಕ್ಕೆ ಬಂದ ಇಬ್ಬರುನ್ನು ತಪಾಸಣೆಗೆ ಒಳಪಡಿಸಲಾಗಿದೆ. ಗಂಟಲು ಮಾದರಿಯನ್ನು ವೈರಸ್ ತಳಿ ಪತ್ತೆ ಮಾಡುವ ಜಿನೋಮ್ ಸಿಕ್ವೆನ್ಸಿಂಗ್ ಲ್ಯಾಬ್ಗೆ ಕಳುಹಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications