ಹರಿದ್ವಾರದ ಕುಂಭಮೇಳದಿಂದ ದೂರ ಉಳಿದ 2 ಅಖಾದಾ
ನವದೆಹಲಿ, ಏಪ್ರಿಲ್ 16: ಉತ್ತರಾಖಂಡದ ಹರಿದ್ವಾರದಲ್ಲಿ ಕೊರೊನಾವೈರಸ್ ಸೋಂಕಿನ ಅಪಾಯ ಹೆಚ್ಚುತ್ತಿದೆ. ಈ ಹಿನ್ನೆಲೆ 13 ಅಖಾದಗಳ ಪೈಕಿ ನಿರಂಜನಿ ಅಖಾದಾ ಮತ್ತು ತಪೋವನದ ಶ್ರೀ ಆನಂದ ಅಖಾದಾ ಕುಂಭಮೇಳದಿಂದ ಹೊರಗುಳಿಯಲು ನಿರ್ಧರಿಸಿವೆ.
ಕುಂಭಮೇಳದ ಕೇಂದ್ರವಾಗಿರುವ ಶಾಹಿಸ್ನಾನ್ ಆಚರಣೆಯು ಏಪ್ರಿಲ್ 14ರ ಮೇಷ ಸಂಕ್ರಾಂತಿದ ದಿನ ಪೂರ್ಣಗೊಂಡಿದೆ. ನಿರಂಜನಿ ಅಖಾದಾದ ಹಲವು ಸದಸ್ಯರಲ್ಲಿ ಕೊರೊನಾವೈರಸ್ ಸೋಂಕಿತ ಲಕ್ಷಣಗಳು ಕಾಣಿಸಿಕೊಂಡಿವೆ. ಆದ್ದರಿಂದ ನಮ್ಮ ಪಾಲಿಗೆ ಕುಂಭಮೇಳ ಮುಕ್ತಾಯವಾಗಿದೆ ಎಂದು ನಿರಂಜನಿ ಅಖಾದಾ ಕಾರ್ಯದರ್ಶಿ ರವೀಂದ್ರ ಪುರಿ ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ನಡೆಸಿದ ಕೊರೊನಾವೈರಸ್ ಸೋಂಕಿನ ಪರೀಕ್ಷೆಗಳಲ್ಲಿ ಅತಿಹೆಚ್ಚು ಜನರಿಗೆ ಸೋಂಕು ತಗುಲಿರುವುದು ದೃಢಪಡುತ್ತಿದೆ. ಅಖಿಲ ಭಾರತೀಯ ಅಖಾದಾ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅವರಿಗೆ ಕೊವಿಡ್-19 ಸೋಂಕು ತಗುಲಿದ್ದು, ರಿಷಿಕೇಶ್ ನ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾ ಸೋಂಕಿನಿಂದ ಕಪಿಲ್ ಸ್ವಾಮಿ ಸಾವು:
ಮಧ್ಯಪ್ರದೇಶದ ಮಹಾಮಂಡಲೇಶ್ವರ ಮಹಾನಿರ್ವಾಣಿ ಅಖಾದಾದ ಸ್ವಾಮಿ ಕಪಿಲ್ ದಾಸ್ ಅವರು ಕೊರೊನಾವೈರಸ್ ಸೋಂಕಿನಿಂದ ಏಪ್ರಿಲ್.13ರಂದು ಪ್ರಾಣ ಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಏಪ್ರಿಲ್ 17ರಿಂದ ಕುಂಭಮೇಳದಲ್ಲಿ ಭಾಗವಹಿಸದಿರಲು ನಿರಂಜನಿ ಆಖಾದಾ ಮತ್ತು ತಪೋವನ ಅಖಾದ ನಿರ್ಧರಿಸಿವೆ.
ಉತ್ತರಾಖಂಡದಲ್ಲಿ ಹೆಚ್ಚಿದ ಕೊರೊನಾ ಅಪಾಯ:
ರಾಜ್ಯದಲ್ಲಿ ಒಂದೇ ದಿನ 2220 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 9 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 1802ಕ್ಕೆ ಏರಿಕೆಯಾಗಿದೆ. ಈವರೆಗೂ 1,16,244 ಸೋಂಕಿತ ಪ್ರಕರಣಗಳು ವರದಿಯಾಗಿವೆ.
ಹರಿದ್ವಾರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆ ಆಗುತ್ತಿದ್ದರೂ ಏಪ್ರಿಲ್ 27 ಮತ್ತು ಏಪ್ರಿಲ್ 30ರವರೆಗೂ ಶಾಹಿ ಸ್ನಾನ್ ನಡೆಯಲಿದೆ. 12 ವರ್ಷಗಳಿಗೆ ಒಂದು ಬಾರಿ ನಡೆಯುವ ಕುಂಭಮೇಳವು ಸಾಮಾನ್ಯವಾಗಿ 4 ತಿಂಗಳವರೆಗೂ ನಡೆಯುತ್ತದೆ. ಆದರೆ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಏಪ್ರಿಲ್ 1 ರಿಂದ 30ರವರೆಗೂ ಮಾತ್ರ ಕುಂಭಮೇಳ ನಡೆಸುವುದಕ್ಕೆ ಅನುಮತಿ ನೀಡಲಾಗಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications