ಮಾಂಸಾಹಾರಿಗಳನ್ನು ಶಿಕ್ಷಿಸಲೆಂದೇ ಜನ್ಮ ತಾಳಿದ 'ಉಗ್ರಾವತಾರ' ಕೊರೊನಾ
ನವದೆಹಲಿ, ಜ 17: ಮಹಾಮಾರಿ ಕೊರೊನಾ (ಕೊವಿಡ್ 19) ರೋಗಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಚೀನಾದಲ್ಲಿ ಈ ಮಾರಣಾಂತಿಕ ರೋಗಕ್ಕೆ ಮೃತಪಟ್ಟವರ ಸಂಖ್ಯೆ 1,765ಕ್ಕೇರಿದೆ.
ಮೂರು ಸಾವಿರ ವರ್ಷಗಳ ಹಿಂದೆ ಅನುಸರಿಸುತ್ತಿದ್ದ ಚೀನಾ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಯನ್ನು ಅಳವಡಿಸಿಕೊಂಡು ಮಾರಕ ಸೋಂಕು ನಿವಾರಣೆಗೆ ಸರಕಾರ ಮುಂದಾಗಿದೆ. ಇತ್ತ, ಕೋಳಿ ಮಾಂಸ ತಿಂದರೆ ಕೊರೊನಾ ವೈರಸ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ, ಕರ್ನಾಟಕ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಇದರ ಬೆನ್ನಲ್ಲೇ, ಹಿಂದೂ ಮಹಾಸಭಾದ ಮುಖಂಡರೊಬ್ಬರು ನೀಡಿರುವ ಹೇಳಿಕೆ ವ್ಯಾಪಕ ಟೀಕೆಗೊಳಗಾಗಿದೆ. "ಮಾಂಸಾಹಾರಿಗಳನ್ನು ಶಿಕ್ಷಿಸಲೆಂದೇ ತಾಳಿರುವ ಹೊಸ ಅವತಾರವೇ ಕೊರೊನಾ" ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಚಕ್ರಪಾಣಿ ಹೇಳಿಕೆಯನ್ನು ನೀಡಿದ್ದಾರೆ.

"ಪ್ರಾಣಿಗಳನ್ನು ಹಿಂಸಿತ್ತಿರುವುದಕ್ಕೆ ಚೀನಾದವರಿಗೆ ಈ ರೋಗ ಪಾಠ ಕಲಿಸುತ್ತಿದೆ. ಬಡಜೀವಿಗಳ ರಕ್ಷಣೆಗಾಗಿ ಬಂದಿರುವ ಹೊಸ ಅವತಾರವಿದು. ಯಾರೇ ಆಗಲಿ, ಇನ್ನು ಮುಂದೆಯಾದರೂ, ಮಾಂಸಾಹಾರವನ್ನು ತ್ಯಜಿಸಲಿ" ಎಂದು ಚಕ್ರಪಾಣಿ ಹೇಳಿದ್ದಾರೆ.
ಕೋಳಿ ಮಾಂಸವನ್ನು ತಿಂದರೆ ಕೊರೊನಾ ವೈರಸ್ ಹರುಡುತ್ತದೆ ಎಂದು ಸಾಮಾಜಿಕ ತಾಣದಲ್ಲಿ ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ, ಆರೋಗ್ಯ ಇಲಾಖೆ, "ಕೋಳಿ ಮಾಂಸದಿಂದ ಕೊರೊನಾ ವೈರಸ್ ಹರಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರವಿಲ್ಲ. ವೈರಸ್ ಸೋಂಕಿತ ಮನುಷ್ಯರ ಸಂಪರ್ಕದಿಂದ ವೈರಸ್ ಹರಡುತ್ತದೆ. ವೈರಸ್ ಹರಡುವಿಕೆಯಲ್ಲಿ ಕೋಳಿಗಳ ಪಾತ್ರವಿಲ್ಲ" ಎನ್ನುವ ಸ್ಪಷ್ಟನೆಯನ್ನು ನೀಡಿತ್ತು.
ಚೀನಾದಲ್ಲಿ ಕೊರೊನಾ ಯಾವಮಟ್ಟಿಗೆ ಭೀತಿಯನ್ನು ತಂದಿದೆ ಎಂದರೆ, ಈ ವೈರಸ್ ನಿಂದ ತೀವ್ರವಾಗಿ ಹಾನಿಗೊಳಗಾದ ಕೆಲವು ಪ್ರದೇಶಗಳಲ್ಲಿನ ಆಸ್ಪತ್ರೆಗಳು, ಮಾರುಕಟ್ಟೆಗಳು ಮತ್ತು ಬಸ್ಗಳಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ನೋಟುಗಳನ್ನು ನಾಶಮಾಡಲು ಯೋಜನೆ ಮಾಡಿರುವುದಾಗಿ ಚೀನಾದ ಕೇಂದ್ರ ಬ್ಯಾಂಕ್ ಹೇಳಿದೆ.
-
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications