ಭಾರತದಲ್ಲಿ 1,00,000ಕ್ಕೂ ಮೀರಿತು ಕೊರೊನಾ ಸೋಂಕಿತರ ಸಂಖ್ಯೆ!
ನವದೆಹಲಿ, ಮೇ.19: ಭಾರತದಲ್ಲಿ ನಾಲ್ಕನೇ ಅವಧಿಯ ಲಾಕ್ ಡೌನ್ ವಿಸ್ತರಣೆಯಾಗಿದ್ದರೂ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸಾಲು ಸಾಲು ಲಾಕ್ ಡೌನ್ ಘೋಷಿಸಿದ ಭಾರತದಲ್ಲೂ ಕೋವಿಡ್-19 ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲೇ 4,970 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 134 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,139ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 3,163ಕ್ಕೆ ಏರಿದೆ.
ಭಾರತದಲ್ಲಿ 1,01,139 ಕೊರೊನಾ ವೈರಸ್ ಸೋಂಕಿತರ ಪೈಕಿ 39,233 ಮಂದಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಳಿದಂತೆ 57,933 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

4 ರಾಜ್ಯಗಳಲ್ಲಿ 10,000 ಗಡಿ ದಾಟಿದ ಸೋಂಕಿರ ಸಂಖ್ಯೆ:
ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಹಾಗೂ ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಈಗಾಗಲೇ 10 ಸಾವಿರದ ಗಡಿ ದಾಟಿದೆ. ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 35,058 ಮಂದಿ ಕೊರೊನಾ ವೈರಸ್ ಸೋಂಕಿತರಿದ್ದು, ಇದೊಂದೇ ರಾಜ್ಯದಲ್ಲಿ ಮಹಾಮಾರಿಗೆ 1,249 ಮಂದಿ ಬಲಿಯಾಗಿದ್ದಾರೆ.
ತಮಿಳುನಾಡಿನಲ್ಲಿ 11,760 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿದ್ದು, 82 ಮಂದಿ ಪ್ರಾಣ ಬಿಟ್ಟಿದ್ದಾರೆ. 11,746 ಸೋಂಕಿತರನ್ನು ಹೊಂದಿರುವ ಗುಜರಾತ್ ನಲ್ಲಿ 694 ಮಂದಿ ಮಹಾಮಾರಿಯಿಂದ ಉಸಿರು ಚೆಲ್ಲಿದ್ದಾರೆ. ನವದೆಹಲಿಯಲ್ಲಿ 10,054 ಮಂದಿಗೆ ಕೊರೊನಾ ವೈರಸ್ ಕನ್ಫರ್ಮ್ ಆಗಿದ್ದು, ಇದುವರೆಗೂ ಕೊವಿಡ್-19ನಿಂದ 160 ಜನ ಮೃತಪಟ್ಟಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications