ಲಾಕ್ ಡೌನ್ ಮತ್ತು ಹಾಟ್ ಸ್ಪಾಟ್ಗಳಿಗಿರುವ ವ್ಯತ್ಯಾಸವೇನು?
ಬೆಂಗಳೂರು, ಏಪ್ರಿಲ್ 09 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಉತ್ತರ ಪ್ರದೇಶ ಮತ್ತು ದೆಹಲಿ ಸರ್ಕಾರಗಳು ಕೆಲವು ಪ್ರದೇಶಗಳನ್ನು 'ಹಾಟ್ ಸ್ಪಾಟ್' ಎಂದು ಘೋಷಿಸಿವೆ.
Recommended Video
ಲಾಕ್ ಡೌನ್ ಮತ್ತು ಹಾಟ್ ಸ್ಪಾಟ್ಗಳಿಗೆ ಹಲವು ವ್ಯತ್ಯಾಸಗಳಿವೆ. ಹಾಟ್ ಸ್ಪಾಟ್ ಎಂದು ಘೋಷಣೆಯಾದ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜನರು ಅಗತ್ಯ ವಸ್ತುಗಳ ಖರೀದಿಗೆ ಸಹ ಮನೆಯಿಂದ ಹೊರ ಬರುವಂತಿಲ್ಲ.
6 ಅಥವ ಅದಕ್ಕಿಂತ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾದ ಪ್ರದೇಶವನ್ನು 'ಹಾಟ್ ಸ್ಪಾಟ್' ಎಂದು ಘೋಷಣೆ ಮಾಡಲಾಗುತ್ತದೆ. ಈ ಪ್ರದೇಶವನ್ನು ಪೊಲೀಸರು ಸಂಪೂರ್ಣವಾಗಿ ತಮ್ಮ ವಶಕ್ಕೆ ಪಡೆದುಕೊಳ್ಳುತ್ತಾರೆ.

ಹಾಟ್ ಸ್ಪಾಟ್ ಎಂದು ಘೋಷಣೆಯಾದ ತಕ್ಷಣ ಪೊಲೀಸರು ಬ್ಯಾರಿಕೇಡ್ ಹಾಕಿ ಸ್ಥಳವನ್ನು ಸೀಲ್ ಮಾಡುತ್ತಾರೆ. ಈ ಪ್ರದೇಶಕ್ಕೆ ಹೊರಗಿನಿಂದ ಯಾರೂ ಬರುವಂತಿಲ್ಲ. ಈ ಪ್ರದೇಶದಲ್ಲಿರುವ ಜನರು ಹೊರಗೆ ಹೋಗುವಂತಿಲ್ಲ.
ದಿನಸಿ ಮತ್ತು ಔಷಧಿಗಳನ್ನು ತರಲು ಸಹ ಜನರು ಮನೆಯಿಂದ ಹೊರ ಬರುವಂತಿಲ್ಲ. ಸರ್ಕಾರವೇ ಜನರ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವ ವ್ಯವಸ್ಥೆ ಮಾಡುತ್ತದೆ. ತುರ್ತು ಸಂದರ್ಭದಲ್ಲಿ ಅಂಬ್ಯುಲೆನ್ಸ್ ಹೊರತುಪಡಿಸಿ ಉಳಿದ ಯಾವುದೇ ವಾಹನಗಳು ಹಾಟ್ ಸ್ಪಾಟ್ ಪ್ರವೇಶ ಮಾಡಬಾರದು.
ಹಾಟ್ ಸ್ಪಾಟ್ ಪ್ರದೇಶ ಸಂಪೂರ್ಣ ಪೊಲೀಸ್ ವಶದಲ್ಲಿ ಇರುತ್ತದೆ. ಈ ಪ್ರದೇಶಕ್ಕೆ ಬರುವ, ಹೋಗುವ ದಾರಿಗಳನ್ನು ಬಂದ್ ಮಾಡಲಾಗುತ್ತದೆ. ಮಾಧ್ಯಮಗಳಿಗೂ ಸಹ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗುತ್ತದೆ.
ಸ್ಥಳೀಯ ಆಡಳಿತ ಹಾಟ್ ಸ್ಪಾಟ್ ಪ್ರದೇಶದಲ್ಲಿ ನಿರಂತರ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುತ್ತದೆ. ಈ ಪ್ರದೇಶಕ್ಕೆ ಪ್ರವೇಶಿಸುವ ಮೊದಲ ಅವರು ಸಹ ಅಗತ್ಯ ಸುರಕ್ಷತಾ ಕವಚಗಳನ್ನು ಧರಿಸಬೇಕು.
ಲಾಕ್ ಡೌನ್ ಜಾರಿಯಲ್ಲಿರುವ ಪ್ರದೇಶದಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಗೆ ಮನೆಯಿಂದ ಹೊರ ಬರಲು ಅವಕಾಶವಿದೆ. ದಿನಸಿ, ತರಕಾರಿ, ಹಣ್ಣು, ಮೆಡಿಕಲ್ ಶಾಪ್ಗಳು ಬಾಗಿಲು ತೆರೆದಿರುತ್ತವೆ. ಆದರೆ, ಹಾಟ್ ಸ್ಪಾಟ್ಗಳಲ್ಲಿ ಯಾವುದೇ ಅಂಗಡಿ ಬಾಗಿಲು ತೆರೆಯುವಂತಿಲ್ಲ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications