ಕೊರೊನಾ ಎಫೆಕ್ಟ್: ಭಾರತದ ಗಡಿರೇಖೆಗಳೆಲ್ಲ ಬಂದ್ ಬಂದ್ ಬಂದ್!
ಕೋಲ್ಕತ್ತಾ, ಮಾರ್ಚ್.15: ಭಾರತಕ್ಕೆ ಕೊರೊನಾ ವೈರಸ್ ಲಗ್ಗೆ ಇಟ್ಟಿದ್ದೇ ತಡ ಕೇಂದ್ರ ಸರ್ಕಾರದ ಜೊತೆ ಜೊತೆಗೆ ರಾಜ್ಯ ಸರ್ಕಾರಗಳೂ ಕೂಡಾ ಫುಲ್ ಅಲರ್ಟ್ ಆಗಿ ಬಿಟ್ಟಿವೆ. ಬಹುತೇಕ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಪಶ್ಚಿಮ ಬಂಗಾಳ ಸರ್ಕಾರವು ಇದರಿಂದ ಒಂದು ಹೆಜ್ಜೆ ಮುಂದೆ ಹೋಗಿದೆ. ಭೂಪಾನ್ ಜೊತೆಗಿನ ಗಡಿ ಸಂಪರ್ಕಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬ್ರೇಕ್ ಹಾಕಿದ್ದಾರೆ. ಅಲಿಪುರದೌರ್ ಜಿಲ್ಲೆಯ ಜೈಗಾನ್ ಗಡಿ ಪ್ರದೇಶದಲ್ಲಿನ ಎಲ್ಲ ಸಂಚಾರಕ್ಕೂ ಕಡಿವಾಣ ಹಾಕಲಾಗಿದೆ.
ಭೂತಾನ್ ಗಡಿಗೆ ಹೊಂದಿಕೊಂಡಂತೆ ಇರುವ ಈ ಪ್ರದೇಶದಲ್ಲಿ ಯಾವುದೇ ರೀತಿ ಸರಕು ಮತ್ತು ಸೇವೆಗಳ ಸಂಚಾರ ನಡೆಸದಂತೆ ಅಧಿಕಾರಿಗಳು ಕಠಿಣ ಕ್ರಮಗಳನ್ನು ಜಾರಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಂತಾರಾಷ್ಟ್ರೀಯ ಗಡಿರೇಖೆಗಳಲ್ಲಿ ವಹಿವಾಟು ಬಂದ್:
ಪಶ್ಚಿಮ ಬಂಗಾಳ ಮತ್ತು ಭೂತಾನ್ ನಡುವಿನ ವ್ಯಾಪಾರ ವಹಿವಾಟು ಸಂಚಾರವಷ್ಟೇ ಬಂದ್ ಆಗಿಲ್ಲ. ಬದಲಿಗೆ ಭಾರತದ ಜೊತೆಗೆ ಗಡಿರೇಖೆಯನ್ನು ಹೊಂದಿಕೊಂಡಿರುವ ಪ್ರದೇಶಗಳ ಪೈಕಿ 18 ಗಡಿಗಳಲ್ಲಿ ಸಂಚಾರವನ್ನು ತಡೆ ಹಿಡಯಲಾಗಿದೆ. ಭೂತಾನ್ ಜೊತೆಗೆ ನೇಪಾಳ, ಬರ್ಮಾ ಗಡಿಯಲ್ಲಿ ಸರಕು ಅಥವಾ ಜನ ಪ್ರವಾಸಕ್ಕೆ ಬ್ರೇಕ್ ಹಾಕಲಾಗುತ್ತದೆ ಎಂದು ಸ್ವತಃ ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಿದೆ.
ದೇಶದಲ್ಲಿ ಇದುವರೆಗೂ ಒಟ್ಟು 107 ಜನರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇದುವರೆಗಿನ ವೈದ್ಯಕೀಯ ತಪಾಸಣೆಯಿಂದ ತಿಳಿದು ಬಂದಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಜನರಿಗೆ ಸೋಂಕು ಇರುವುದು ಸ್ಪಷ್ಟವಾಗಿದೆ. ಮಹಾರಾಷ್ಟ್ರದಲ್ಲಿ 31, ಕೇರಳದಲ್ಲಿ 22, ಉತ್ತರ ಪ್ರದೇಶದಲ್ಲಿ 11, ದೆಹಲಿಯಲ್ಲಿ 7, ಜನರಿಗೆ ಸೋಂಕು ಇರುವುದು ಸ್ಪಷ್ಟವಾಗಿದೆ. ಹರಿಯಾಣದಲ್ಲಿ 14 ಮಂದಿಗೆ ಸೋಂಕು ತಗಲಿದ್ದು, ಎಲ್ಲರೂ ವಿದೇಶಿಗರು ಎಂದು ಹೇಳಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications