ಜನತಾ ಕರ್ಫ್ಯೂಗೂ ಮುನ್ನ ಜನತೆಗೆ ಶುಭ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ
ನವದೆಹಲಿ, ಮಾರ್ಚ್ 21: ಕೊರೊನಾವೈರಸ್ ಸೋಂಕು ಹರಡುವ ಭೀತಿ ಎಲ್ಲೆಡೆ ಹೆಚ್ಚಾಗುತ್ತಿದ್ದಂತೆ ಮಾಸ್ಕ್, ಸ್ಯಾನಿಟೈಸರ್ ಮಾರಾಟವೂ ಹೆಚ್ಚಾಗಿದೆ. ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದರೂ, ಹ್ಯಾಂಡ್ ಸ್ಯಾನಿಟೈಸರ್ ಬಳಕೆಯಂತೂ ಅಗತ್ಯವಾಗಿದೆ. ಅನೇಕ ಕಡೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ದುಪ್ಪಟ್ಟು ಬೆಲೆಗೆ ಮಾರುವುದು ಕಂಡು ಬಂದಿದ್ದರಿಂದ ಸರ್ಕಾರ ಇದಕ್ಕೆಲ್ಲ ಕಡಿವಾಣ ಹಾಕಲು ಮಾರ್ಗೋಪಾಯ ಕಂಡುಕೊಂಡಿದೆ.
ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನು ಅಗತ್ಯ ವಸ್ತುಗಳ ಪಟ್ಟಿಗೆ ಸೇರಿಸಿರುವ ಸರ್ಕಾರ, ದರವನ್ನು ನಿಗದಿ ಮಾಡಿದೆ. ಸರ್ಜಿಕಲ್ ಮಾಸ್ಕ್ ಒಂದಕ್ಕೆ ರೂ.10, 200 ಎಂಎಲ್ ಸ್ಯಾನಿಟೈಸರ್ ಗೆ ರೂ.100 ದರವನ್ನು ನಿಗದಿ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಹೊರಡಿಸಿರುವ ಗೆಜೆಟ್ ನೋಟಿಫಿಕೇಷನ್ ನಂತೆ, 2 ಪ್ಲೇ ಮಾಸ್ಕ್ 8 ರೂ, 3 ಪ್ಲೇ ಸರ್ಜಿಕಲ್ ಮಾಸ್ಕ್ 10ರೂ ಗಿಂತಲೂ ಹೆಚ್ಚು ದರದಲ್ಲಿ ಮಾರುವಂತಿಲ್ಲ. 200 ಎಂಎಲ್ ಸ್ಯಾನಿಟೈಸರ್ 100 ರು ದರದಲ್ಲೇ ಮಾರಾಟ ಮಾಡಬೇಕು ಎಂದು ದರ ನಿಗದಿ ಮಾಡಿ ಆದೇಶ ಹೊರಡಿಸಿದೆ.
Important Development: Indian Government has just announced a Gazette of India order fixing retail prices of hand santizer and masks. Now 2ply mask at Rs 8, 3 ply surgical masks at Rs 10. Hand santizers at Rs 100 per bottle of 200 ml. Timely action by Govt. to prevent #Covid_19. pic.twitter.com/ziHJGOHuDB
— Aditya Raj Kaul (@AdityaRajKaul) March 21, 2020
ಬೆಂಗಳೂರಿನಲ್ಲಿ ದುಪ್ಪಟ್ಟು ದರದಲ್ಲಿ ಮಾಸ್ಕ್, ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದ ಅನೇಕ ಮೆಡಿಕಲ್ ಶಾಪ್, ಮಳಿಗೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಅಪಾರ ಪ್ರಮಾಣದ ಅಕ್ರಮ ದಾಸ್ತಾನು ವಶಪಡಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ. ಒಂದು ವೇಳೆ ಈ ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡರೆ ಅಂಗಡಿಯ ಲೈಸೆನ್ಸ್ ರದ್ದುಗೊಳಿಸಿ, ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಈ ಆದೇಶ ಜೂನ್ 30, 2020ರ ವರೆಗೆ ಜಾರಿಯಲ್ಲಿರುತ್ತದೆ
कोरोना वायरस #COVID19 के फैलने के बाद से बाजार में विभिन्न फेस मास्क, इसके निर्माण में लगने वाली सामग्री और हैंड सेनिटाइजर की कीमतों में बेतहाशा वृद्धि देखी गई है। सरकार ने इसे गंभीरता से लेते हुए इनकी कीमतें तय कर दी हैं। 1/3 @drharshvardhan @narendramodi #IndiaFightsCorona
— Ram Vilas Paswan (@irvpaswan) March 20, 2020
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications