ಕೊರೊನಾ ಸೋಂಕು ಈಗಲೂ ಮೊದಲಿನಷ್ಟೇ ಅಪಾಯಕಾರಿ: ಮೋದಿ
ನವದೆಹಲಿ, ಜುಲೈ 26 : "ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ನಮ್ಮ ದೇಶದಲ್ಲಿ ಹೆಚ್ಚಿದೆ. ಆದರೆ, ಕೊರೊನಾ ವೈರಸ್ ಮೊದಲು ಇದ್ದ ಹಾಗೆಯೇ ಈಗಲೂ ಅಪಾಯಕಾರಿ" ಎಂದು ನರೇಂದ್ರ ಮೋದಿ ಹೇಳಿದರು.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದರು. "ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಕೊರೊನಾದಿಂದ ದೂರವಿರಲು ಇರುವ ಮಾರ್ಗಗಳು" ಎಂದರು.
"ನಾವು ಮುಂದಿನ ಮನ್ ಕೀ ಬಾತ್ನಲ್ಲಿ ಭೇಟಿಯಾಗುವ ಮೊದಲು ಸ್ವಾತಂತ್ರ್ಯ ದಿನಾಚರಣೆ ಬರುತ್ತಿದೆ. ಕೊರೊನಾ ನಡುವೆಯೇ ನಾವು ಸ್ವಾತಂತ್ರ್ಯ ದಿನಾಚಣೆಯನ್ನು ಆಚರಣೆ ಮಾಡಬೇಕು. ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದವರನ್ನು ನೆನೆಪಿಸಿಕೊಳ್ಳೋಣ" ಎಂದು ನರೇಂದ್ರ ಮೋದಿ ಹೇಳಿದರು.
"ಮಾಸ್ಕ್ ಧರಿಸಲು ನಿಮಗೆ ಕಿರಿಕಿರಿಯಾಗುತ್ತಿದೆಯೇ?, ಮಾತನಾಡುವಾಗ ಮಾಸ್ಕ್ ತೆಗೆಯಬೇಕು ಎಂದು ಅನ್ನಿಸುತ್ತಿದೆಯೇ?. ಒಮ್ಮೆ ಡಾಕ್ಟರ್ ಸೇರಿದಂತೆ ಕೊರೊನಾ ವಾರಿಯರ್ಸ್ಗಳನ್ನು ನೆನಪು ಮಾಡಿಕೊಳ್ಳಿ. ಮಾಸ್ಕ್ ಧರಿಸಿ ಅವರು 8 ರಿಂದ 10 ಗಂಟೆ ಕೆಲಸ ಮಾಡುತ್ತಾರೆ" ಎಂದು ಮೋದಿ ಮನ್ ಕೀ ಬಾತ್ನಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿ ಸದಸ್ಯನ ಕೆಲಸಕ್ಕೆ ಶ್ಲಾಘನೆ
ಗ್ರಾಮದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಸ್ಪೇಯರ್ ತಯಾರು ಮಾಡಿದ ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪುರಸಭೆ ಅಧ್ಯಕ್ಷ ಮೊಹಮ್ಮದ್ ಇಕ್ಬಾಲ್ ಕೆಲಸವನ್ನು ನರೇಂದ್ರ ಮೋದಿ ಶ್ಲಾಘಿಸಿದರು.
|
ಕ್ವಾರಂಟೈನ್ ಸೆಂಟರ್
ಜಮ್ಮುವಿನಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು 30 ಹಾಸಿಗೆಗಳ ಕ್ವಾರಂಟೈನ್ ಕೇಂದ್ರ ಮಾಡಿದ್ದನ್ನು ಮೋದಿ ಮನ್ ಕೀ ಬಾತ್ನಲ್ಲಿ ನೆನಪಿಸಿಕೊಂಡರು.

ರಕ್ಷಾ ಬಂಧನ
"ರಕ್ಷಾ ಬಂಧನ ಬರುತ್ತಿದೆ. ಈ ಬಾರಿ ಜನರು ವಿಶಿಷ್ಟವಾಗಿ ಹಬ್ಬವನ್ನು ಆಚರಣೆ ಮಾಡಲಿದ್ದಾರೆ. ರಕ್ಷಾ ಬಂಧನಕ್ಕೆ ಜನರು Vocal for Local ಲಿಂಕ್ ಮಾಡುತ್ತಿದ್ದಾರೆ" ಎಂದು ನರೇಂದ್ರ ಮೋದಿ ಹೇಳಿದರು.

ವಿದ್ಯಾರ್ಥಿಗಳ ಜೊತೆ ಸಂವಾದ
ಬೋರ್ಡ್ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳಿಸಿದ ಉತ್ತರ ಪ್ರದೇಶ, ಕೇರಳ, ತಮಿಳುನಾಡು ಮತ್ತು ಹರ್ಯಾಣದ ವಿದ್ಯಾರ್ಥಿಗಳ ಜೊತೆ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಮುಂದಿನ ಗುರಿ, ಮನೆಯಲ್ಲಿನ ಪ್ರೋತ್ಸಾಹ ಮುಂತಾದ ವಿಚಾರಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.
-
PM Modi: ಆದಿಚುಂಚನಗಿರಿ ಮಠಕ್ಕೆ 'ನಮೋ' ಭೇಟಿ: ಕರ್ನಾಟಕ ಸಂಸ್ಕೃತಿ, ಮಠದ ಸೇವೆಗೆ ಮೆಚ್ಚುಗೆ -
Narendra Modi: ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ 18 ಅಂಶ: ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications