"ಭಾರತೀಯರಿಗೆ 2 ತಿಂಗಳಿನಲ್ಲೇ ದೇಶೀಯ ಕೊವಿಡ್-19 ಲಸಿಕೆ"
ನವದೆಹಲಿ, ನವೆಂಬರ್.23: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕುರಿತು ನಡೆಸಿರುವ ವೈದ್ಯಕೀಯ ಸಂಶೋಧನಾ ಕಾರ್ಯವು ಒಂದು ಅಥವಾ ಎರಡು ತಿಂಗಳಿನಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ನವೆಂಬರ್ ತಿಂಗಳಿನಲ್ಲೇ ಭಾರತ್ ಬಯೋಟೆಕ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯು ಜಂಟಿಯಾಗಿ ಮೂರನೇ ಹಂತದ ವೈದ್ಯಕೀಯ ಪ್ರಯೋಗವನ್ನು ಪ್ರಾರಂಭಿಸಲಿವೆ. ಕೊವ್ಯಾಕ್ಸಿನ್ ಲಸಿಕೆಯ ವೈದ್ಯಕೀಯ ಪ್ರಯೋಗದಲ್ಲಿ ಈ ಬಾರಿ 26000 ಸ್ವಯಂಸೇವಕರನ್ನು ಪ್ರಯೋಗಿಸಲಾಗುತ್ತದೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಕೊವಿಡ್-19 ಸೋಂಕಿಗೆ ಸ್ಥಳೀಯ ಲಸಿಕೆಯನ್ನು ಸಂಶೋಧಿಸುವಲ್ಲಿ ನಿರತರಾಗಿದ್ದೇವೆ. ಇನ್ನೊಂದು ತಿಂಗಳು ಅಥವಾ ಎರಡು ತಿಂಗಳಿನಲ್ಲಿ ದೇಶೀಯ ಕೊರೊನಾವೈರಸ್ ಲಸಿಕೆಯ ವೈದ್ಯಕೀಯ ಪ್ರಯೋಗ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.

20 ರಿಂದ 25 ಕೋಟಿ ಜನರಿಗೆ ಲಸಿಕೆ:
ಭಾರತದಲ್ಲಿ ಮುಂದಿನ 2021ರ ಜುಲೈ ತಿಂಗಳ ವೇಳೆಗೆ 20 ರಿಂದ 25 ಕೋಟಿ ಭಾರತೀಯರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ. ಕಳೆದ ಸಪ್ಟೆಂಬರ್ ನಲ್ಲಿ ಇದೇ ಕೊವಿಡ್-19 ಲಸಿಕೆ ಬಗ್ಗೆ ಮಾತನಾಡಿದ್ದ ಸಚಿವರು ಆರಂಭಿಕ ಹಂತದಲ್ಲಿ ವೃದ್ಧರು ಮತ್ತು ಕೊರೊನಾವೈರಸ್ ನಿಂದ ಹೆಚ್ಚು ಅಪಾಯವಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದ್ದರು.
ಮಾರ್ಚ್ ವೇಳೆಗೆ ಲಸಿಕೆಗೆ ಚಾಲನೆ:
ಕಳೆದ ಶುಕ್ರವಾರ ರಾಯಟರ್ಸ್ ಜೊತೆಗೆ ಮಾತನಾಡಿದ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಸಂಶೋಧಕರು ಫೆಬ್ರವರಿ ಅಥವಾ ಮಾರ್ಚ್ ವೇಳೆಗೆ ಲಸಿಕೆ ವಿತರಣೆಗೆ ಚಾಲನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದರು. ಇನ್ನು, ಭಾರತ್ ಬಯೋಟೆಕ್ ಸಂಸ್ಥೆಯು ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಲಸಿಕೆ ವಿತರಣೆ ಆರಂಭಿಸುವುದಾಗಿ ಹೇಳಿತ್ತು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications