4ನೇ ಹಂತದ ಲಾಕ್ ಡೌನ್; ಏನಿರುತ್ತೆ, ಏನಿರಲ್ಲ?
ನವದೆಹಲಿ, ಮೇ 14 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. 3ನೇ ಹಂತದ ಲಾಕ್ ಟೌನ್ ಮೇ 17ರಂದು ಮುಗಿಯಲಿದ್ದು, 4ನೇ ಹಂತ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಹೇಳಿದ್ದಾರೆ.
Recommended Video
ರಾಜ್ಯ ಸರ್ಕಾರಗಳು 4ನೇ ಹಂತದ ಲಾಕ್ ಡೌನ್ ಹೇಗಿರಬೇಕು? ಎಂಬ ವರದಿ ಸಿದ್ಧಪಡಿಸುತ್ತಿವೆ. ಶುಕ್ರವಾರ ಕೇಂದ್ರ ಗೃಹ ಇಲಾಖೆಗೆ ವರದಿ ನೀಡಲಾಗುತ್ತದೆ. ಶನಿವಾರ ಲಾಕ್ ಡೌನ್ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇದೆ.
ಮಂಗಳವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ 4ನೇ ಹಂತದ ಲಾಕ್ ಡೌನ್ ವಿಭಿನ್ನವಾಗಿರಲಿದೆ ಎಂಬ ಸುಳಿವು ನೀಡಿದ್ದಾರೆ. ಮತ್ತೊಂದು ಕಡೆ ರಾಜ್ಯಗಳು ಆರ್ಥಿಕ ಚಟುವಟಿಕೆಗೆ ಧಕ್ಕೆಯಾಗದಂತೆ ಲಾಕ್ ಡೌನ್ ಮುಂದುವರೆಸಲು ಬಯಸಿವೆ.
ಮೇ 17ರ ಬಳಿಕ ಬಹುತೇಕ ಎಲ್ಲಾ ಸೇವೆಗಳು ಆರಂಭವಾಗುವ ನಿರೀಕ್ಷೆ ಇದೆ. ಮಾಲ್ಗಳು ಬಾಗಿಲು ತೆರೆಯುವ ಸಾಧ್ಯತೆ ಕಡಿಮೆ ಇದೆ. ಸಮಾವೇಶ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳ ಮೇಲಿನ ನಿಷೇಧ ಹಾಗೆಯೇ ಮುಂದುವರೆಯಲಿದೆ.

ಕಂಟೈನ್ಮೆಂಟ್ ಝೋನ್ ಬದಲಾವಣೆ
4ನೇ ಹಂತದ ಲಾಕ್ ಡೌನ್ನಲ್ಲಿ ಕಂಟೈನ್ಮೆಂಟ್ ಝೋನ್ಗಳಲ್ಲಿ ಬದಲಾವಣೆಯಾಗಲಿದೆ. ಕೇಂದ್ರ ಗೃಹ ಸಚಿವಾಲಯ ಕೊರೊನಾ ಕೇಸುಗಳ ಆಧಾರದ ಮೇಲೆ ಈಗಾಗಲೇ ಕೆಂಪು, ಕಿತ್ತಲೆ ಮತ್ತು ಹಸಿರು ವಲಯ ಎಂದು ದೇಶವನ್ನು ವಿಭಾಗ ಮಾಡಿದೆ.

ರಾಜ್ಯಗಳ ಬೇಡಿಕೆ ಏನು?
ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯ ವೇಳೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ನಾವೇ ಝೋನ್ ಗುರುತಿಸಿಕೊಳ್ಳುತ್ತೇವೆ. ಒಂದು ತಾಲೂಕಿನಲ್ಲಿ ಕೊರೊನಾ ಪ್ರಕರಣ ಇದ್ದಾಗ ಇಡೀ ಜಿಲ್ಲೆಯನ್ನು ಕೆಂಪು ವಲಯಕ್ಕೆ ಸೇರಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾರಿಗೆ ಸಂಚಾರ ಆರಂಭ
ಮೇ 17ರ ಬಳಿಕ ಸಾರಿಗೆ ಸಂಚಾರ ಆರಂಭವಾಗಲಿದೆ. ಈಗಾಗಲೇ ಭಾರತೀಯ ರೈಲ್ವೆ ಹಲವು ಮಾರ್ಗದಲ್ಲಿ ರೈಲುಗಳನ್ನು ಓಡಿಸುತ್ತಿದೆ. ಕೈಗಾರಿಕಾ ಚಟುವಟಿಕೆ ಮಾಲ್ ಹೊರತುಪಡಿಸಿ ಇತರ ಅಂಗಡಿಗಳನ್ನು ತೆರೆಯಲು ಅವಕಾಶ ಸಿಗಲಿದೆ. ಅಂತರ ಜಿಲ್ಲಾ ಓಡಾಟಕ್ಕೆ ಅನುಮತಿ ನೀಡಲಾಗುತ್ತದೆ. ಆದರೆ, ಅಂತರರಾಜ್ಯ ಸಂಚಾರಕ್ಕೆ ಪಾಸ್ ಇರುತ್ತದೆ.

ಕಂಟೈನ್ಮೆಂಟ್ ಝೋನ್ಗೆ ಪ್ರವೇಶವಿಲ್ಲ
ಸ್ಥಳೀಯ ಆಡಳಿತ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿದ ಪ್ರದೇಶಕ್ಕೆ ಪ್ರವೇಶ ಇರುವುದಿಲ್ಲ. ಸಮಾವೇಶ, ರಾಜಕೀಯ ಜಾಥಾ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ. ಜನಸಂದಣಿ ಸೇರದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಜೂನ್ ತನಕ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
Popular Indian Foods: ಈ 5 ಆಹಾರಗಳು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಗಳು! -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ










Click it and Unblock the Notifications