ಸರಕಾರವನ್ನೇ ಬೆಚ್ಚಿಬೀಳಿಸಿದ ಈ 5 ಸುಳ್ಳು ಸುದ್ದಿಯನ್ನು ಯಾವ ಕಾರಣಕ್ಕೂ ನಂಬಬೇಡಿ
ಕೋವಿಡ್ 19 ಮರಣ ಮೃದಂಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ, ಸೋಂಕಿತರ ಸಂಖ್ಯೆಯೂ ಉಲ್ಬಣಗೊಳ್ಳುತ್ತಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿಯದೆ ಸುಳ್ಳು ಸುದ್ದಿಗಳು ಯಥೇಚ್ಚವಾಗಿ ಹರಿದಾಡುತ್ತಿದೆ.
ಕಪೋಕಲ್ಪಿತ ಸುದ್ದಿಗಳು, ವದಂತಿಗಳು ಸಾಮಾಜಿಕ ತಾಣದಲ್ಲಿ ಎಗ್ಗಿಲ್ಲದೇ ಹರಿದಾಡುತ್ತಲೇ ಇದೆ. ಈ ಸುದ್ದಿಯನ್ನೆಲ್ಲಾ ನಂಬಬಾರದೆಂದು ಎಷ್ಟೇ ಸಂಬಂಧಪಟ್ಟವರು ತಿಳಿ ಹೇಳಿದರೂ, ಇಂತಹ ಸುದ್ದಿಗಳು ಜನರಲ್ಲಿ ಅನಗತ್ಯ ಭೀತಿ ಮತ್ತು ಗೊಂದಲವನ್ನು ಸೃಷ್ಟಿಸುತ್ತಿದೆ.
ಕೆಲವೊಂದು ಸುಳ್ಳು ಸುದ್ದಿಗಳಿಗೆ ಖುದ್ದು ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಇಷ್ಟೆಲ್ಲಾ ಯಾಕೆ, ಭಾರತೀಯ ಆರ್ಮಿಯೂ ಇದಕ್ಕೆ ಸ್ಪಷ್ಟನೆಯನ್ನು ನೀಡಬೇಕಾಗಿ ಬಂತು.
ಕೊರೊನಾ ದಾಳಿಯ ಮುನ್ನೆಚ್ಚರಿಕೆಯ ಕ್ರಮವಾಗಿ ಲಾಕ್ ಡೌನ್ ಘೋಷಣೆಯಾದ ನಂತರ, ಸಾಮಾಜಿಕ ತಾಣದಲ್ಲಿ ಬಿರುಗಾಳಿ ಎಬ್ಬಿಸಿದ ಐದು ಸುಳ್ಳು ಸುದ್ದಿಗಳ ಪಟ್ಟಿ ಇಂತಿದೆ.

ಕೊರೊನಾ ಭಾರತದಲ್ಲಿ ಮೂರನೇ ಸ್ಟೇಜ್ ಗೆ ಬಂದಿದೆ
ಆನ್ಲೈನ್ ಅಂತರ್ಜಾಲ ಸಂಸ್ಥೆಯೊಂದು ಕೊರೊನಾ ವೈರಸ್ ಭಾರತದಲ್ಲಿ ಮೂರನೇ ಸ್ಟೇಜ್ ಗೆ ಬಂದಿದೆ ಎನ್ನುವ ಸುದ್ದಿಯನ್ನು ಪ್ರಕಟಿಸಿತು. ಇದು ದೇಶದಲ್ಲಿ ಭಾರೀ ಸದ್ದನ್ನು ಮಾಡಿತು. ನಂತರ, ಕೇಂದ್ರ ಆರೋಗ್ಯ ಸಚಿವಾಲಯ ಇದಕ್ಕೆ ಸ್ಪಷ್ಟನೆಯನ್ನು ನೀಡಿ, ಕೊರೊನಾ, ಭಾರತದಲ್ಲಿ ಇನ್ನೂ ಎರಡನೇ ಹಂತದಲ್ಲಿದೆ ಎಂದು ಸ್ಪಷ್ಟ ಪಡಿಸಿತು.

ಐದು ಸಾವಿರ ಕಡಿತಗೊಳಿಸಲು ಪ್ರಧಾನಿ ಮೋದಿ ಸೂಚನೆ
ಕೊರೊನಾ ವೈರಸ್ ಎದುರಿಸುತ್ತಿರುವ ಈ ಸಂದಿಗ್ದ ಪರಿಸ್ಥಿತಿಯಲ್ಲಿ ಎಲ್ಲಾ ಕೇಂದ್ರ ಸರಕಾರದ ನೌಕರರ ಮತ್ತು ಪಿಂಚಣಿದಾರರ ಮಾಸಿಕ ವೇತನದಲ್ಲಿ ಐದು ಸಾವಿರ ಕಡಿತಗೊಳಿಸಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತು. ಕೊನೆಗೆ, ಈ ರೀತಿಯ ಯಾವ ಚಿಂತನೆಯೂ ಕೇಂದ್ರ ಹೊಂದಿಲ್ಲ, ಎಂದು ಖುದ್ದು, ಪ್ರಧಾನಮಂತ್ರಿ ಕಾರ್ಯಾಲಯ ಸ್ಪಷ್ಟನೆಯನ್ನು ನೀಡಿತು.

ವೈಷ್ಣೋದೇವಿ ಯಾತ್ರಿಕರು ಕತ್ರಾದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ
ಕೊರೊನಾ ವೈರಸ್ ನಿಂದ ವೈಷ್ಣೋದೇವಿ ಯಾತ್ರಿಕರು ಕತ್ರಾದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತು. ಕೊನೆಗೆ, ಕೇಂದ್ರ ಪ್ರವಾಸೋದ್ಯಮ ಮತ್ತು ಜಮ್ಮು ಕಾಶ್ಮೀರ ಆಡಳಿತ, ಇದೊಂದು ಸುಳ್ಳುಸುದ್ದಿ, ಹದಿನೆಂಟು ಮಾರ್ಚ್ ಗೆ ಈ ಯಾತ್ರೆ ಮುಗಿದಾಗಿದೆ ಎಂದು ಸ್ಪಷ್ಟನೆಯನ್ನು ನೀಡಿತು.

ದೈನಂದಿನ ಆಡಳಿತ ಮಿಲಿಟರಿ ಕೈಗೆ ಹೋಗಲಿದೆ
ಏಪ್ರಿಲ್ ಮಧ್ಯಭಾಗದಲ್ಲಿ ಭಾರತದಲ್ಲಿ ಎಮರ್ಜೆನ್ಸಿ ಘೋಷಣೆ ಮಾಡಲಾಗುವುದು ಎನ್ನುವ ವದಂತಿ, ಸಾಮಾಜಿಕ ತಾಣದಲ್ಲಿ ಅಲ್ಲೋಲಕಲ್ಲೋಲವನ್ನೇ ಸೃಷ್ಟಿಸಿತು. ದೈನಂದಿನ ಆಡಳಿತ ಮಿಲಿಟರಿ ಕೈಗೆ ಹೋಗಲಿದೆ ಎಂದು ಸುದ್ದಿಯಾಗುತ್ತಿದ್ದಂತೆಯೇ, ಭೂಸೇನಾ ಅಧಿಕಾರಿಗಳು ಇದೊಂದು ಸುಳ್ಳುಸುದ್ದಿ ಎನ್ನುವ ಸ್ಪಷ್ಟನೆಯನ್ನು ನೀಡಿತು.

ಹಬೆಯಿಂದ ಉಸಿರೆಳೆದುಕೊಂಡರೆ ವೈರಸ್ ಮಾಯ
ಹಬೆಯಿಂದ ಉಸಿರೆಳೆದುಕೊಂಡರೆ (inhalation) ಕೊರೊನಾ ವೈರಸ್ ಶೇ. 100% ತೊಲಗಿ ಹೋಗುತ್ತದೆ. ಮೂಗು, ಗಂಟಲಿನೊಳಗೆ ಹೋಗಿದ್ದರೂ, ಈ ರೀತಿ ಮಾಡಿದರೆ, ತೊಂದರೆಯಾಗುವುದಿಲ್ಲ ಎಂದು ಚೀನಾದವರು ಕಂಡು ಹಿಡಿದಿದ್ದಾರೆ ಎನ್ನುವ ಸುದ್ದಿ ಹರಿದಾಡಿತು. ಆಮೇಲೆ, ಇಂತಹ ಯಾವ ಪ್ರಯೋಗವೂ ಚೀನಾದಿಂದ ನಡೆದಿಲ್ಲ ಎನ್ನುವ ಸ್ಪಷ್ಟನೆಯನ್ನು ನೀಡಲಾಯಿತು.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications