Fact Check:ಮೋದಿ ಭಾಷಣ, 4 ದಿನ ಇಡೀ ದೇಶವೇ ಬಂದ್?
ಬೆಂಗಳೂರು, ಮಾರ್ಚ್ 19: ಕೊರೊನಾವೈರಸ್ ಸೋಂಕು ಹರಡುವ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿವೆ. ಕೋವಿಡ್19 ಬಗ್ಗೆ ಆತಂಕ ನಿವಾರಿಸಲು ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಗುರುವಾರದಂದು ಮಾತನಾಡಲಿದ್ದಾರೆ.
ಆದರೆ, ಮೋದಿ ಅವರು ಏನು ಮಾತನಾಡಬಹುದು ಎಂಬುದರ ಬಗ್ಗೆ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಮೋದಿ ಅವರು ತಮ್ಮ ಭಾಷಣದಲ್ಲಿ ದೇಶವನ್ನು ಮುರ್ನಾಲ್ಕು ದಿನ ಸಂಪೂರ್ಣ ಬಂದ್ ಮಾಡುವಂತೆ ಆದೇಶ ನೀಡಲಿದ್ದಾರೆ ಎಂಬ ಸಂದೇಶ ಹರಿದಾಡುತ್ತಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದೆ.

Live: ರಾತ್ರಿ 8 ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ, ತೀವ್ರ ಕುತೂಹಲ
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಸಾರ್ ಭಾರತಿ ಸಿಇಒ ಶಶಿಶೇಖರ್, ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಧಾನಿ ಮೋದಿ ಅವರು ಲಾಕ್ ಡೌನ್ ಎಂದು ಆದೇಶಿಸುತ್ತಾರೆ ಎಂಬಂತೆ ಸುದ್ದಿ ಹರಡುತ್ತಿದೆ. ಈ ಮಾಹಿತಿ ಸಂಪೂರ್ಣ ತಪ್ಪು. ಇದರಿಂದ ಸಾರ್ವಜನಿಕರಲ್ಲಿ ಅನಗತ್ಯ ಗೊಂದಲ, ಗಾಬರಿ ಉಂಟು ಮಾಡುತ್ತದೆ. ಇಂಥ ಪರಿಸ್ಥಿತಿಯಲ್ಲಿ ಇಂಥದ್ದೊಂದು ಗೊಂದಲ ಬೇಕಿಲ್ಲ. ಮೋದಿ ಅವರು ದೇಶವನ್ನು ಬಂದ್ ಮಾಡುವ ಬಗ್ಗೆ ಮಾತನಾಡುತ್ತಾರೆ ಎಂಬುದು ಸುಳ್ಳು ಎಂದು ಟ್ವೀಟ್ ಮಾಡಿದ್ದಾರೆ.
Some media outlets are speculating that PM Modi will announce a lock down in his address. This information is incorrect. It will also create unnecessary panic in minds of people, which is the last thing we need in times like this.
— Shashi Shekhar (@shashidigital) March 19, 2020
ಭಾರತದಲ್ಲಿ ಇದುವರೆಗೆ ಒಟ್ಟು 160 ಜನಕ್ಕೆ ಕೊರೊನಾ ವೈರಸ್ ಸೋಂಕು (ಕೋವಿಡ್ 19) ತಗುಲಿರುವುದು ದೃಢಪಟ್ಟಿದೆ. ಭಾರತದಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಹಾಗೂ ಪಂಜಾಬ್ ನಲ್ಲಿ ತಲಾ ಒಬ್ಬರು ಒಟ್ಟು ನಾಲ್ಕು ಮಂದಿ ಮೃತರಾಗಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications