ಕೊರೊನಾಗೆ ಪತಂಜಲಿಯ ಆಯುರ್ವೇದ ಮದ್ದು: ಕೈ ಎತ್ತಿದ ಬಾಬಾ ರಾಮ್ದೇವ್
ಹರಿದ್ವಾರ, ಜುಲೈ 1: ಸದ್ಯ ದೇಶ ಎದುರಿಸುತ್ತಿರುವ ಮೆಡಿಕಲ್ ಎಮರ್ಜೆನ್ಸಿ ಪರಿಸ್ಥಿತಿಯನ್ನು ಪರಿಹಾಸ್ಯ ಮಾಡುವಂತೆ, ಕೊರೊನಾಗೆ ಆಯುರ್ವೇದ ಮದ್ದು ಕಂಡು ಹಿಡಿದಿದ್ದೇವೆ ಎಂದಿದ್ದ ಪತಂಜಲಿ ಸಂಸ್ಥೆ ಈಗ ಉಲ್ಟಾ ಹೊಡೆದಿದೆ.
"ಕೊವಿಡ್ 19 ರೋಗದ ವಿರುದ್ಧ ಹೋರಾಡಲು ಮೊದಲ ಬಾರಿಗೆ ಆಯುರ್ವೇದದಲ್ಲಿ ಔಷಧಿ ಕಂಡುಹಿಡಿದಿದ್ದೇವೆ" ಎಂದು ತುಂಬಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದ ಪತಂಜಲಿ ಯೋಗಪೀಠದ ಬಾಬಾ ರಾಮ್ದೇವ್ ಈಗ ನಾವು ಹಾಗೆ ಹೇಳಿಲ್ಲ ಎಂದಿದ್ದಾರೆ.
ಪತಂಜಲಿ ಆಯುರ್ವೇದ ಸಂಸ್ಥೆಯ ಸಿಇಒ ಆಚಾರ್ಯ ಬಾಲಕೃಷ್ಣ, "ಕೊರೊನಾ ಸೋಂಕಿಗೆ ಮೊದಲ ಔಷಧ ಕೊರೊನಿಲ್ ಅನ್ನು ಸಂಪೂರ್ಣ ವೈಜ್ಞಾನಿಕ ದಾಖಲೆಗಳೊಂದಿಗೆ ಬಿಡುಗಡೆ ಮಾಡಲಿದ್ದೇವೆ" ಎಂದು ಹೇಳಿದ್ದರು.
ರಾಮ್ದೇವ್, ಔಷಧ ಕಂಡುಹಿಡಿದಿದ್ದು ಉತ್ತಮ ವಿಚಾರ, ಆದರೆ ಅದು ಆಯುಷ್ ಮಂತ್ರಾಲಯದಡಿ ಬರುತ್ತದೆ ಎಂದು ಕೇಂದ್ರ ಸರಕಾರ ಕೊರೊನಿಲ್ ಔಷಧ ಮಾರಾಟಕ್ಕೆ ತಡೆನೀಡಿತ್ತು. ಬಾಬಾ ರಾಮ್ದೇವ್ ಹೇಳಿದ್ದೇನು?

ಕೊರೊನಾ ಕಿಟ್ ಹೆಸರಿನ ಯಾವುದೇ ಔಷಧಿಯನ್ನು ನಾವು ತಯಾರಿಸಿಲ್ಲ
ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಬಾಬಾ ರಾಮ್ದೇವ್, "ಈ ವರದಿಯನ್ನು ನಾವು ನಿರಾಕರಿಸುತ್ತೇವೆ. ಕೊರೊನಾ ಕಿಟ್ ಹೆಸರಿನ ಯಾವುದೇ ಔಷಧಿಯನ್ನು ನಾವು ತಯಾರಿಸಿಲ್ಲ" ಎಂದು ಹೇಳಿದ್ದಾರೆ. ಉತ್ತರಾಖಂಡ ಸರಕಾರದ ನೊಟೀಸ್ ಗೆ ಲಿಖಿತ ರೂಪದಲ್ಲಿ ಪತಂಜಲಿ ಈ ರೀತಿ ಉತ್ತರಿಸಿದೆ.

ಬಾಬಾ ರಾಮ್ದೇವ್ ಹೇಳಿಕೆ
"ನಾವು, ದಿವ್ಯಾ ಸ್ವಸರಿ ವಟಿ', ದಿವ್ಯಾ ಕೊರೊನಿಲ್ ಟ್ಯಾಬ್ಲೆಟ್ ಮತ್ತು ದಿವ್ಯಾ ಅನು ತೈಲವನ್ನು ಪ್ಯಾಕ್ ಮಾಡಿದ್ದೆವು. ನಾವು ಕೊರೊನಿಲ್ ಕಿಟ್ ಹೆಸರಿನ ಲ್ಲಿ ಯಾವುದೇ ಲಸಿಕೆಯನ್ನು ಮಾರಾಟ ಮಾಡಿಲ್ಲ ಅಥವಾ ಕೊರೊನಾ ಚಿಕಿತ್ಸೆಗಾಗಿ ಅದನ್ನು ಪ್ರಚಾರ ಮಾಡಿಲ್ಲ"ಎಂದು ಬಾಬಾ ರಾಮ್ದೇವ್ ಹೇಳಿದ್ದಾರೆ.

ಕೊರೊನಾ ಸೋಂಕು ನಿವಾರಣೆಯಾಗುತ್ತದೆ ಎಂದು ನಾವು ಹೇಳಿಕೊಂಡಿಲ್ಲ
"ಪ್ರಾಯೋಗಿಕವಾಗಿ ನಾವು ಯಶಸ್ವಿಯಾಗಿದ್ದೇವೆ ಎಂದಷ್ಟೇ ನಾವು ಮಾಧ್ಯಮದ ಮುಂದೆ ಹೇಳಿರುವುದು. ಈ ಮದ್ದಿನಿಂದ ಕೊರೊನಾ ಸೋಂಕು ನಿವಾರಣೆಯಾಗುತ್ತದೆ ಎಂದು ನಾವು ಹೇಳಿಕೊಂಡಿಲ್ಲ"ಎಂದು ಪತಂಜಲಿ ಸಂಸ್ಥೆಯ ಬಾಬಾ ರಾಮ್ದೇವ್ ಸ್ಪಷ್ಟನೆಯನ್ನು ನೀಡಿದ್ದಾರೆ.

ಕೊರೊನಾಗೆ ಪತಂಜಲಿಯ ಆಯುರ್ವೇದ ಮದ್ದು: ಕೈ ಎತ್ತಿದ ಬಾಬಾ ರಾಮ್ದೇವ್
"ಕೋವಿಡ್ 19 ರೋಗದ ವಿರುದ್ಧ ಹೋರಾಡಲು ಮೊದಲ ಭಾರಿಗೆ ಆಯುರ್ವೇದದಲ್ಲಿ ಔಷಧಿ ಕಂಡುಹಿಡಿದಿದ್ದೇವೆ. ಮೂರು ದಿನಗಳಲ್ಲಿ ಶೇ.69ರಷ್ಟು ಗುಣಮುಖರಾಗುತ್ತಾರೆ. 7 ದಿನಗಳಲ್ಲಿ ಶೇ.100ರಷ್ಟು ರೋಗಿಗಳು ಗುಣಮುಖರಾಗಲಿದ್ದಾರೆ. ಈ ಔಷಧದಿಂದ 1 ಸಾವಿರ ರೋಗಿಗಳನ್ನು 5-14 ದಿನಗಳಲ್ಲಿ ಗುಣಮುಖರನ್ನಾಗಿ ಮಾಡಬಹುದು" ಎಂದು ಆಚಾರ್ಯ ಬಾಲಕೃಷ್ಣ ಹೇಳಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications