Expressway: ₹7283.28 ಕೋಟಿ ವೆಚ್ಚದ ಎಕ್ಸ್ಪ್ರೆಸ್ವೇ ಉದ್ಘಾಟನೆ; ಎಲ್ಲಿ ಹಾಗೂ ಯಾವೆಲ್ಲಾ ಮಾರ್ಗಗಳಲ್ಲಿ ಹಾದುಹೋಗಲಿದೆ?
Expressway: ದೇಶದಲ್ಲಿ ಈಗಾಗಲೇ ಹಲವು ರಾಷ್ಟ್ರೀಯ ಹೆದ್ದಾರಿಗಳು ಉದ್ಘಾನೆಯಾಗಿವೆ. ಇದೀಗ 91.35 ಕಿಲೋ ಮೀಟರ್ ಉದ್ದದ 7283.28 ಕೋಟಿ ರೂಪಾಯಿ ವೆಚ್ಚದ ಎಕ್ಸ್ಪ್ರೆಸ್ ವೇ ಅನ್ನು ಉದ್ಘಾಟನೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿ? ಇದಕ್ಕೆ ತಗುಲಿದ ವೆಚ್ಚ? ಯಾವೆಲ್ಲಾ ಮಾರ್ಗಗಳಲ್ಲಿ ಹಾದುಹೋಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದೇಶದ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳು ಉದ್ಘಾಟನೆಯಾಗಿದ್ದರೆ, ಇನ್ನೂ ಕೆಲವು ಕಾಮಗಾರಿ ಹಂತದಲ್ಲಿವೆ. ಕರ್ನಾಟಕದಲ್ಲಿ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಈಗಾಗಲೇ ಉದ್ಘಾಟನೆಯಾಗಿ ಇಲ್ಲಿ ವಾಹನಗಳು ಕೂಡ ಸಂಚಾರ ಮಾಡುತ್ತಿವೆ. ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಉದ್ಘಾಟನೆ ಹಂತದಲ್ಲಿದ್ದರೆ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ಎಕ್ಸ್ಪ್ರೆಸ್ ವೇ ಕಾಮಗಾರಿ ಇನ್ನೂ ಆರಂಭವಾಗಬೇಕಿದೆ.

ಈ ನಡುವೆಯೇ ಇದೀಗ ಉತ್ತರ ಪ್ರದೆಶದ ಸಿಎಂ ಯೋಗಿ ಆದಿತ್ಯನಾಥ್ ಅವರು 91.35 ಕಿ.ಮೀ. ಉದ್ದದ 7283.28 ಕೋಟಿ ರೂಪಾಯಿ ವೆಚ್ಚದ ಗೋರಖ್ಪುರ ಲಿಂಕ್ ಎಕ್ಸ್ಪ್ರೆಸ್ವೇ ಅನ್ನು ಉದ್ಘಾಟನೆ ಮಾಡಿದ್ದಾರೆ. ಬಳಿಕ ಭಗವಾನ್ಪುರ ಟೋಲ್ ಪ್ಲಾಜಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೂಲಸೌಕರ್ಯ ಅಭಿವೃದ್ಧಿ ವೇಗ ಆದರೆ ಪ್ರಗತಿಯೂ ವೇಗಗೊಳ್ಳುತ್ತದೆ. ಪ್ರಗತಿ ವೇಗ ಆದರೆ ಸಮೃದ್ಧಿ ತಾನಾಗಿಯೇ ಬರುತ್ತದೆ ಎಂದು ಹೇಳಿದರು.
2017ರ ಬಳಿಕ ಉತ್ತರ ಪ್ರದೇಶದಲ್ಲಿ ಮೂಲಸೌಕರ್ಯಗಳಿಗೆ ಗಮನ ಹರಿಸಲಾಗಿದೆ. ಇದರಿಂದ ರಾಜ್ಯವು ಪ್ರಸ್ತುತ ಅಬೀವೃದ್ಧಿಯತ್ತ ಸಾಗುತ್ತಿದೆ. 2017ರ ಮೊದಲು ಉತ್ತರ ಪ್ರದೇಶದಲ್ಲಿ ಮೂಲಸೌಕರ್ಯಗಳ ಕೊರತೆಯಿತ್ತು. ಬಡವರ ಕಲ್ಯಾಣ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಿಗುತ್ತಿರಲಿಲ್ಲ. ಸಾಂಪ್ರದಾಯಿಕ ಉದ್ಯಮಗಳು ಮುಚ್ಚುವ ಹಂತದಲ್ಲಿದ್ದವು. ಇದೀಗ ರಾಜ್ಯವು ಮಾಫಿಯಾ, ಗೂಂಡಾ ಹಾಗೂ ಗಲಭೆ ಮುಕ್ತವಾಗಿದೆ. ಇದು ದೇಶದಲ್ಲಿ ಪ್ರವಾಸೋದ್ಯಮ ಮತ್ತು ಹೂಡಿಕೆಗೆ ಉತ್ತಮ ತಾಣವಾಗಿದೆ ಎಂದು ಹೇಳಿದರು.
ಎಕ್ಸ್ಪ್ರೆಸ್ ವೇನಿಂದ ಏನೆಲ್ಲಾ ಪ್ರಯೋಜನೆಗಳಿವೆ?: ಉತ್ತರ ಪ್ರದೇಶದ ಎಕ್ಸ್ಪ್ರೆಸ್ವೇಗಳು ಹೂಡಿಕೆಗೆ ಹೆಚ್ಚು ಸಹಕಾರಿಯಾಗಲಿದೆ. ಸಾರಿಗೆ ಸಂಪರ್ಕವನ್ನು ಹೆಚ್ಚಿಸಿದಂತೆ ಅಗಲಿದೆ. ಗೋರಖ್ಪುರ ಲಿಂಕ್ ಎಕ್ಸ್ಪ್ರೆಸ್ವೇ ಮೂಲಕ ಗೋರಖ್ಪುರದ ದಕ್ಷಿಣ ಭಾಗದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ ಆಗಲಿವೆ. ಗೋರಖ್ಪುರ ಲಿಂಕ್ ಎಕ್ಸ್ಪ್ರೆಸ್ವೇಯಲ್ಲಿ ಪ್ರಯಾಣವು ಆರಾಮದಾಯಕ ಆಗಿದೆ ಮತ್ತು ಸಮಯವೂ ಉಳಿತಾಯ ಆಗಲಿದೆ.
ಗೋರಖ್ಪುರದಿಂದ ಪೂರ್ವಾಂಚಲ್ ಎಕ್ಸ್ಪ್ರೆಸ್ವೇ ಮೂಲಕ ಲಕ್ನೋಗೆ ಹೋಗಲು ಕೇವಲ 3 ಗಂಟೆಗಳು ಬೇಕಾಗುತ್ತದೆ ಅಷ್ಟೇ. ಈ ಲಿಂಕ್ ಎಕ್ಸ್ಪ್ರೆಸ್ವೇ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲಿದೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆಗಳು ಬರಲಿದ್ದು, ಇದರಿಂದ ಉದ್ಯೋಗವಕಾಶಗಳು ಕೂಡ ದೊರೆದಂತಾಗಲಿವೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications