ಇಸ್ರೋದ ಭೂ ವೀಕ್ಷಣಾ ಉಪಗ್ರಹ ಇಒಎಸ್ -01 ಉಡಾವಣೆಗೆ ಕ್ಷಣಗಣನೆ
ಬೆಂಗಳೂರು, ನವೆಂಬರ್ 06: ಭೂಮಿಯ ವೀಕ್ಷಣಾ ಉಪಗ್ರಹ ಇಒಎಸ್-01ರ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತಿಳಿಸಿದೆ.
ಭಾರತದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ತನ್ನ 51 ನೇ ಮಿಷನ್ (ಪಿಎಸ್ಎಲ್ ವಿಸಿ 49) ನಲ್ಲಿ ಇಒಎಸ್ -01 ಅನ್ನು ಪ್ರಾಥಮಿಕ ಉಪಗ್ರಹವಾಗಿ ಒಂಬತ್ತು ಅಂತರರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಸಾಗಿಸಲಿದೆ.
ನವೆಂಬರ್ 7 ರಂದು ಉಪಗ್ರಹ ಉಡಾವಣೆಯಾಗಲಿದೆ. ಕೊರೊನಾ ಕಾರಣದಿಂದ ಕಳೆದ ಕೆಲ ತಿಂಗಳುಗಳಿಂದ ಇಸ್ರೋದ ಅಂತರಿಕ್ಷ ಕಾರ್ಯಕ್ರಮಗಳು ಸ್ಥಗಿತವಾಗಿದ್ದು ಇದೀಗ ಶನಿವಾರದಿಂದ ಮತ್ತೆ ಚಾಲನೆ ಸಿಕ್ಕಲಿದೆ.

ಶನಿವಾರ ಮಧ್ಯಾಹ್ನ 3:02 ಕ್ಕೆ ಪಿಎಸ್ಎಲ್ವಿ-ಸಿ49 ವಾಹನದೊಡನೆ ಇಒಎಸ್ -01,ಇತರೆ ಒಂಬತ್ತು ಅಂತರರಾಷ್ಟ್ರೀಯ ಗ್ರಾಹಕರ ಉಪಗ್ರಹಗಳು ಸೇರಿ ಹತ್ತು ಉಪಗ್ರಹಗಳನ್ನು ಅಂತರಿಕ್ಷಕ್ಕೆ ಸೇರಿಸಲಿದೆ.
ಗ್ರಾಹಕ ಉಪಗ್ರಹಗಳನ್ನು ಬಾಹ್ಯಾಕಾಶ ಇಲಾಖೆಯ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್ಎಸ್ಐಎಲ್) ನೊಂದಿಗೆ ವಾಣಿಜ್ಯ ಒಪ್ಪಂದದಡಿಯಲ್ಲಿ ಉಡಾವಣೆ ಮಾಡಲಾಗುತ್ತಿದೆ ಎಂದು ಸಂಸ್ಥೆ ಹೇಳಿದೆ.
ಗ್ರಾಹಕ ಉಪಗ್ರಹಗಳಲ್ಲಿ ತಂತ್ರಜ್ಞಾನ ಪ್ರದರ್ಶನಕ್ಕಾಗಿ ಲಿಥುವೇನಿಯಾದಿಂದ ಒಂದು, ಮತ್ತು ಲಕ್ಸೆಂಬರ್ಗ್ ಮತ್ತು ಯುಎಸ್ಎಯಿಂದ ತಲಾ ನಾಲ್ಕು ಸಮುದ್ರ ಕಾರ್ಯಾಚರಣೆಗೆ ಸಂಬಂಧಿಸಿದ ಉಪಗ್ರಹಗಳು ಹಾಗೂ ಮಲ್ಟಿ-ಮಿಷನ್ ರಿಮೋಟ್ ಸೆನ್ಸಿಂಗ್ ಸೇರಿದೆ.
ಪಿಎಸ್ಎಲ್ವಿ-ಸಿ 49 / ಇಒಎಸ್ -01 ಮಿಷನ್ ಉಡಾವಣೆಯ ಕ್ಷಣಗಣನೆ ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ(ಎಸ್ಡಿಎಸ್ಸಿ)ದಲ್ಲಿ ಶುಕ್ರವಾರ ಮಧ್ಯಾಹ್ನ 1:02 ಗಂ (ಐಎಸ್ಟಿ) ಯಿಂದ ಪ್ರಾರಂಭವಾಯಿತು" ಎಂದು ಇಸ್ರೋ ತಿಳಿಸಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications