ಇಸ್ರೋದ ಭೂ ವೀಕ್ಷಣಾ ಉಪಗ್ರಹ ಇಒಎಸ್ -01 ಉಡಾವಣೆಗೆ ಕ್ಷಣಗಣನೆ
ಬೆಂಗಳೂರು, ನವೆಂಬರ್ 06: ಭೂಮಿಯ ವೀಕ್ಷಣಾ ಉಪಗ್ರಹ ಇಒಎಸ್-01ರ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತಿಳಿಸಿದೆ.
ಭಾರತದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ತನ್ನ 51 ನೇ ಮಿಷನ್ (ಪಿಎಸ್ಎಲ್ ವಿಸಿ 49) ನಲ್ಲಿ ಇಒಎಸ್ -01 ಅನ್ನು ಪ್ರಾಥಮಿಕ ಉಪಗ್ರಹವಾಗಿ ಒಂಬತ್ತು ಅಂತರರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಸಾಗಿಸಲಿದೆ.
ನವೆಂಬರ್ 7 ರಂದು ಉಪಗ್ರಹ ಉಡಾವಣೆಯಾಗಲಿದೆ. ಕೊರೊನಾ ಕಾರಣದಿಂದ ಕಳೆದ ಕೆಲ ತಿಂಗಳುಗಳಿಂದ ಇಸ್ರೋದ ಅಂತರಿಕ್ಷ ಕಾರ್ಯಕ್ರಮಗಳು ಸ್ಥಗಿತವಾಗಿದ್ದು ಇದೀಗ ಶನಿವಾರದಿಂದ ಮತ್ತೆ ಚಾಲನೆ ಸಿಕ್ಕಲಿದೆ.

ಶನಿವಾರ ಮಧ್ಯಾಹ್ನ 3:02 ಕ್ಕೆ ಪಿಎಸ್ಎಲ್ವಿ-ಸಿ49 ವಾಹನದೊಡನೆ ಇಒಎಸ್ -01,ಇತರೆ ಒಂಬತ್ತು ಅಂತರರಾಷ್ಟ್ರೀಯ ಗ್ರಾಹಕರ ಉಪಗ್ರಹಗಳು ಸೇರಿ ಹತ್ತು ಉಪಗ್ರಹಗಳನ್ನು ಅಂತರಿಕ್ಷಕ್ಕೆ ಸೇರಿಸಲಿದೆ.
ಗ್ರಾಹಕ ಉಪಗ್ರಹಗಳನ್ನು ಬಾಹ್ಯಾಕಾಶ ಇಲಾಖೆಯ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್ಎಸ್ಐಎಲ್) ನೊಂದಿಗೆ ವಾಣಿಜ್ಯ ಒಪ್ಪಂದದಡಿಯಲ್ಲಿ ಉಡಾವಣೆ ಮಾಡಲಾಗುತ್ತಿದೆ ಎಂದು ಸಂಸ್ಥೆ ಹೇಳಿದೆ.
ಗ್ರಾಹಕ ಉಪಗ್ರಹಗಳಲ್ಲಿ ತಂತ್ರಜ್ಞಾನ ಪ್ರದರ್ಶನಕ್ಕಾಗಿ ಲಿಥುವೇನಿಯಾದಿಂದ ಒಂದು, ಮತ್ತು ಲಕ್ಸೆಂಬರ್ಗ್ ಮತ್ತು ಯುಎಸ್ಎಯಿಂದ ತಲಾ ನಾಲ್ಕು ಸಮುದ್ರ ಕಾರ್ಯಾಚರಣೆಗೆ ಸಂಬಂಧಿಸಿದ ಉಪಗ್ರಹಗಳು ಹಾಗೂ ಮಲ್ಟಿ-ಮಿಷನ್ ರಿಮೋಟ್ ಸೆನ್ಸಿಂಗ್ ಸೇರಿದೆ.
ಪಿಎಸ್ಎಲ್ವಿ-ಸಿ 49 / ಇಒಎಸ್ -01 ಮಿಷನ್ ಉಡಾವಣೆಯ ಕ್ಷಣಗಣನೆ ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ(ಎಸ್ಡಿಎಸ್ಸಿ)ದಲ್ಲಿ ಶುಕ್ರವಾರ ಮಧ್ಯಾಹ್ನ 1:02 ಗಂ (ಐಎಸ್ಟಿ) ಯಿಂದ ಪ್ರಾರಂಭವಾಯಿತು" ಎಂದು ಇಸ್ರೋ ತಿಳಿಸಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications