ISRO Mission: ಒಂದು.. ಎರಡು.. ಮೂರು... ಇಸ್ರೋ ಇತಿಹಾಸಕ್ಕೆ ಕೆಲವೇ ನಿಮಿಷ ಬಾಕಿ!
ಭಾರತ ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದು, ಬಾಹ್ಯಾಕಾಶ ಲೋಕದಲ್ಲಿ ಮತ್ತೊಂದು ವಿಸ್ಮಯಕ್ಕೆ ಇಡೀ ಜಗತ್ತೇ ಸಾಕ್ಷಿಯಾಗಲಿದೆ. ಮನುಷ್ಯರು ಬಾಹ್ಯಾಕಾಶ ಕ್ಷೇತ್ರದಲ್ಲಿ ಕೂಡ ಎಷ್ಟು ಹಿಡಿತ ಹೊಂದಿದ್ದಾರೆ? ಅನ್ನೋದಕ್ಕೆ ಇಂದು ಮತ್ತೊಂದು ಉದಾಹರಣೆ ಸಿಗಲಿದೆ. ಯಾಕಿಷ್ಟು ಮಾತು ಅಂದ್ರೆ, ಒಂದು.. ಎರಡು.. ಮೂರು... ಅರೆರೆ 'ಇಸ್ರೋ' ಇತಿಹಾಸಕ್ಕೆ ಕೆಲವೇ ನಿಮಿಷ ಬಾಕಿ ಇದೆ ಕಣ್ರೀ!
ಭಾರತ ನೆಲದಲ್ಲಿ ಕಟ್ಟಿ ಬೆಳೆಸಿ, ಇಂದು ಜಾಗತಿಕವಾಗಿ ಕೂಡ ದೊಡ್ಡ ಹೆಸರು ಮಾಡಿರುವ ನಮ್ಮ 'ಇಸ್ರೋ' ಸಂಸ್ಥೆ ಕಂಡರೆ 'ನಾಸಾ' ವಿಜ್ಞಾನಿಗಳು ಕೂಡ ಎದ್ದು ನಿಂತು ಸಲ್ಯೂಟ್ ಹೊಡೆಯುತ್ತಾರೆ. ಯಾಕಂದ್ರೆ ಇಸ್ರೋ ಸಾಧನೆಗೆ ಖುದ್ದು ನಾಸಾ ವಿಜ್ಞಾನಿಗಳು ಕೂಡ ತಲೆ ಬಾಗಿದ್ದು, ಭಾರತದ ಕಾರ್ಯಕ್ಕೆ ಗ್ರೇಟ್ ಅಂತಾ ಹೇಳುತ್ತಿದ್ದಾರೆ. ಈಗಾಗಲೇ 2024 ರಲ್ಲಿ ಹಲವು ಸಾಧನೆ ಮಾಡಿರುವ 'ಇಸ್ರೋ' ಸಂಸ್ಥೆ ಇದೀಗ 2024ರ ಕೊನೆಯಲ್ಲಿ ಕೂಡ ಭಾರಿ ದೊಡ್ಡ ಸಾಧನೆಗೆ ಸಜ್ಜಾಗಿದೆ!

ಕೆಲವೇ ನಿಮಿಷದಲ್ಲಿ ಹಾರಲಿದೆ ರಾಕೆಟ್!
ಆಡು ಮುಟ್ಟದ ಸೊಪ್ಪಿಲ್ಲ, ಇಸ್ರೋ ಬಾಹ್ಯಾಕಾಶದಲ್ಲಿ ಮಾಡದ ಸಾಧನೆ ಇಲ್ಲ ಎನ್ನಬಹುದು. 'ಇಸ್ರೋ' ಇದೀಗ ಅಮೆರಿಕ, ರಷ್ಯಾ & ಚೀನಾ ಮಾಡಿರುವ ಸಾಧನೆ ಸಾಲಿಗೆ ಸೇರಲು ಸಕಲ ಸಿದ್ಧತೆ ನಡೆಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮಹತ್ವದ ಉಡಾವಣೆಗೆ ಸಜ್ಜಾಗಿದೆ. ಹೀಗೆ 'ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್' ಎಂಬ ಮಹತ್ವದ ಸಾಧನೆಗೆ ಇಸ್ರೋ ಸಜ್ಜಾಗಿದೆ. ಇನ್ನೇನು ಕೆಲವೇ ನಿಮಿಷದಲ್ಲಿ ಇಸ್ರೋ ರಾಕೆಟ್ ಆಕಾಶಕ್ಕೆ ಹಾರಲಿದೆ!
ಡಾಕಿಂಗ್ & ಅನ್ಡಾಕಿಂಗ್ ಅಂದ್ರೆ ಏನು?
ಅಂತರಿಕ್ಷದಲ್ಲಿ 2 ಬಾಹ್ಯಾಕಾಶ ನೌಕೆಗಳ ಡಾಕಿಂಗ್ ಮತ್ತು ಅನ್ಡಾಕಿಂಗ್ ನಡೆಸಲು 'ಇಸ್ರೋ' ವಿಜ್ಞಾನಿಗಳು ಸಜ್ಜಾಗಿದ್ದಾರೆ. ಈ ಮೂಲಕ ಬಾಹ್ಯಾಕಾಶ ಅಂದ್ರೆ ಆಕಾಶದಲ್ಲಿ ಯಾವುದೇ ರೀತಿ ಮಾನವರ ಸಹಾಯ ಇಲ್ಲದೆ, 2 ಬಾಹ್ಯಾಕಾಶ ನೌಕೆಗಳನ್ನು ಒಂದಕ್ಕೊಂದು ಕೂಡಿಸುವುದು & ಬೇರೆ ಮಾಡುವ ಕೆಲಸವನ್ನು ಇಸ್ರೋ ಭೂಮಿ ಮೇಲಿಂದಲೇ ನಡೆಸಲಿದೆ. ಡಿಸೆಂಬರ್ 30ರ ರಾತ್ರಿ 10 ಗಂಟೆಗೆ 'ಇಸ್ರೋ' 2 ಉಪಗ್ರಹಗಳನ್ನು ಉಡಾವಣೆ ಮಾಡಲಿದ್ದು, ಉಪಗ್ರಹ ನಭಕ್ಕೆ ಅಂದ್ರೆ ಬಾಹ್ಯಾಕಾಶಕ್ಕೆ ಹಾರಲಿದೆ. ಇದಕ್ಕಾಗಿ ವಿಶೇಷ ತಂತ್ರಜ್ಞಾನ ಬಳಸಲು ಇಸ್ರೋ ಈಗ ಮುಂದಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications