Breaking: ಉಪರಾಷ್ಟ್ರಪತಿ ಚುನಾವಣೆ: ಮತ ಎಣಿಕೆ ಆರಂಭ
ನವದೆಹಲಿ, ಆಗಸ್ಟ್.6: ಭಾರತದ 16ನೇ ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಅಂತ್ಯಗೊಂಡಿದ್ದು, ಮತ ಎಣಿಕೆಯೂ ಆರಂಭಗೊಂಡಿದೆ.
ಭಾರತದ ಎರಡನೇ ಅತ್ಯುನ್ನತ ನಾಗರಿಕ ಸ್ಥಾನವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಬಿಜೆಪಿ ಬೆಂಬಲಿತ ಜಗದೀಪ್ ದಂಖರ್ ಅವರು ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಪ್ರತಿಸ್ಪರ್ಧಿಯಾಗಿ ಯುಪಿಎ ಒಕ್ಕೂಟದಿಂದ ಕಾಂಗ್ರೆಸ್ ಬೆಂಬಲಿತ ಮಂಗಳೂರು ಮೂಲದವರಾದ ಶ್ರೀಮತಿ ಮಾರ್ಗರೇಟ್ ಆಳ್ವ ಅವರು ಕಣಕ್ಕೆ ಇಳಿದಿದ್ದರು.
ಶನಿವಾರ 5 ಗಂಟೆಗೆ ಮತದಾನ ಮುಕ್ತಾಯವಾಗಿದೆ. ಸುಮಾರು ಶೇ. 93ರಷ್ಟು ಸಂಸದರು ಮತದಾನ ಮಾಡಿದ್ದಾರೆ ಎನ್ನಲಾಗಿದೆ. ಇಲ್ಲಿ ಒಟ್ಟು ಸಂಸದರ ಸಂಖ್ಯೆ 780 ಆಗಿದ್ದು, ಅದರಲ್ಲಿ ಬಿಜೆಪಿ 303 ಇದರಲ್ಲಿ 91 ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ 394 ಮಂದಿ ಇದ್ದಾರೆ. ಎನ್ಡಿಎ ಒಕ್ಕೂಟದ 47+ 5 ಮಂದಿ ನಾಮನಿರ್ದೇಶೀತರು ಸೇರಿ 446 ಮಂದಿ ಹಾಗೂ ಎನ್ಡಿಎ ಅಲ್ಲದವರು 81 ಮಂದಿ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ.

ಎನ್ಡಿಎ ಬೆಂಬಲಿತ ಜಗದೀಪ್ ದಂಖರ್ ಅವರಿಗೆ ಶೇ. 70ರಷ್ಟ್ರು ಬಹುಮತ ಸಿಗುವ ಸಾಧ್ಯತೆ ಇದೆ ಎಂದು ಅಂದಾಜು ಮಾಡಲಾಗಿದೆ. ಇನ್ನೂ ಯುಪಿಎ ಬೆಂಬಲಿತ ಮಾರ್ಗರೇಟ್ ಆಳ್ವ ಅವರ ಪರ ಎಷ್ಟು ಮತಗಳು ಚಲಾಯಿತವಾಗಿವೆ ಎಂಬ ಅಂದಾಜು ಲಭ್ಯವಾಗಿಲ್ಲ.

ಮಾರ್ಗರೇಟ್ ಆಳ್ವ ಅವರಿಗೆ ಟಿಎಸ್ಆರ್ ಜಾರ್ಖಂಡ್ ಮುಕ್ತಿ ಮೋರ್ಚಾ, ಡಿಎಂಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಬೆಂಬಲ ಘೋಷಿಸಿದ್ದವು. ಮಾಜಿ ಸಚಿವರಾಗಿದ್ದ ಮಾರ್ಗರೇಟ್ ಆಳ್ವಾ ಅವರು ಮೂಲತ ವಕೀಲೆಯಾಗಿದ್ದವರು. ಮಂಗಳೂರಿನವರಾದ ಅವರು ಕಾಂಗ್ರೆಸ್ನಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡು ರಾಜಕೀಯ ಉನ್ನತ ಸ್ಥಾನವನ್ನು ಅಲಂಕರಿಸಿದವರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications