ಕೊಯಿಮತ್ತೂರಿನಿಂದ ಹೊರಟ ಮೊದಲು ಖಾಸಗಿ ರೈಲು 'ಭಾರತ್ ಗೌರವ್'
ಕೊಯಿಮತ್ತೂರು ಜೂ.15: ತಮಿಳುನಾಡಿನ ಕೊಯಮತ್ತೂರಲ್ಲಿರುವ ಉತ್ತರ ರೈಲು ನಿಲ್ದಾಣದಲ್ಲಿ ಬುಧವಾರ ಹಬ್ಬದ ವಾತಾವರಣ ಕಂಡು ಬಂತು. ಒಂದೆಡೆ ನಾದಸ್ವರ ಮೊಳಗಿಸುವ ಕಲಾವಿದರ ಮತ್ತೊಂದೆರೆ ನೃತ್ಯ ಕಲಾವಿದರು, ವಿವಿಧ ಹೂಗಳಿಂದ ಸಿಂಗರಿಸಲಾಗಿದ್ದ ರೈಲು ನಿಲ್ದಾಣ. ಇವೆಲ್ಲವು ದೇಶದ ಮೊದಲ ಖಾಸಗಿ ರೈಲೊಂದರ ಸಂಚಾರ ಕಾರ್ಯಾರಂಭಕ್ಕೆ ಸಾಕ್ಷಿಯಾದವು.
'ಸೌಥ್ ಸ್ಟಾರ್ ರೈಲ್' ಖಾಸಗಿ ಕಂಪನಿಯಿಂದ ನಿರ್ವಹಿಸಲ್ಪಡುವ 'ಭಾರತ್ ಗೌರವ್' ರೈಲು ಕೊಯಿಮತ್ತೂರು ರೈಲು ನಿಲ್ದಾಣದಿಂದ ಬೆಳಗ್ಗೆ ಪ್ರಯಾಣ ಆರಂಭಿಸಿದೆ. ಇದಕ್ಕಾಗಿ ರೈಲ್ವೆ ಇಲಾಖೆ ಅಧಿಕಾರಿಗಳು, ಪ್ರಯಾಣಿಕರ ಸಮ್ಮುಖದಲ್ಲಿ ಮೊದಲ ಪ್ರಯಾಣಕ್ಕೆ ಚಾಲನೆ ದೊರೆಯಿತು. ಈ ರೈಲನ್ನು ಕಂಪನಿಯು ಶಿರಡಿ ಸೇವಾ ಪೂರೈಕೆದಾರರಿಗೆ ಎರಡು ವರ್ಷದ ಅವಧಿಗೆ ಪ್ರಯಾಣಕ್ಕಾಗಿ ನೀಡಿದೆ ಎನ್ನಲಾಗಿದೆ.
ಬೆಂಗಳೂರಿಗರ ಕನಸು ನನಸು; ಉಪನಗರ ರೈಲು ಯೋಜನೆಗೆ ವೇಗ
ಕೊಯಿಮತ್ತೂರು ಭಾಗದಿಂದ ಮಂತ್ರಾಲಯ ಮಾರ್ಗದ ಮೂಲಕ ಸಾಗಿ ಶಿರಡಿ ತಲುಪಲಿದೆ. ಪ್ರಯಾಣಿಕರಿಗೆ ಇದೊಂದು ಉತ್ತಮ ಅನುಭವ ನೀಡಲಿದ್ದು, ಒಟ್ಟು ಐದು ತಿಂಗಳು ಪ್ರಯಾಣದ ಯೋಜನೆ ರೂಪಿಸಿದೆ. ಯೋಜನೆ ಪೈಕಿ ತಿಂಗಳಿಗೆ ಮೂರು ಭಾರಿ ಕೊಯಿಮತ್ತೂರಿನಿಂದ ಶಿರಡಿಗೆ ಪ್ರಯಾಣ ಬೆಳೆಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಿದೆ. ಒಂದು ಸಲದ ಪ್ರಯಾಣ ಸುಮಾರು ಐದು ದಿನಗಳು ಹಿಡಿಯುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಯಾಣಿಕರಿಂದ ಹರ್ಷ ವ್ಯಕ್ತ:
ಈ ಕುರಿತು ಶಿರಡಿಗೆ ಮೊದಲ ಪ್ರಯಾಣ ಆರಂಭಿಸಿರುವ ಇಲ್ಲಿನ ಪ್ರೆಸ್ ಕಾಲೋನಿ ನಿವಾಸಿ ಸರೋಜಿನಿ ಎಂಬುವವರು ಹರ್ಷ ವ್ಯಕ್ತಪಡಿಸಿದ್ದಾರೆ. ಕುಟುಂಬ ಸಮೇತರಾಗಿ ಶಿರಡಿಗೆ ಪ್ರಯಾಣ ಬೆಳೆಸಬೇಕು ಎಂಬುದು ನಮ್ಮ ಬಹುದಿನದ ಕನಸು ಈ ಭಾರತ್ ಗೌರವ್ ಖಾಸಗಿ ರೈಲಿನ ಮೂಲಕ ನೆರವೇರಿದೆ. ಪ್ರಯಾಣಿಕರು ಕೊಯಿಮತ್ತೂರಿನಿಂದ ಒಂದೇ ರೈಲಿನಲ್ಲಿ ಶಿರಡಿ ವರೆಗೂ ತಲಪಲು ಸಾಧ್ಯವಾಗುತ್ತಿದೆ. ಮಾರ್ಗ ಮತ್ತು ವಾಹನಗಳ ಬದಲಾವಣೆ, ಹತ್ತುವುದು ಹಾಗೂ ಅಲ್ಲಲ್ಲಿ ಇಳಿಯುವ ಸಮಸ್ಯೆಯೇ ಇಲ್ಲ. ಈ ಪ್ರಯಾಣದ ಟಿಕೆಟ್ ದರ ಹಿರಿಯ ಮಹಿಳಾ ನಾಗರಿಕರಿಗೆ (ವೃದ್ಧೆ) ತೆರಿಗೆ ರಹಿತವಾಗಿ ಒಬ್ಬರಿಗೆ 7,999ರೂ. ಆಗುತ್ತದೆ ಎಂದು ತಿಳಿಸಿದ್ದಾರೆ.
ಇದೊಂದು ಉತ್ತಮ ಪ್ಯಾಕೇಜ್ ಪ್ರಯಾಣ:
ಶಿರಡಿ ಪ್ರಯಾಣ ಬೆಳೆಸುವವರಿಗೆ ಈ ಸೌಥ್ ಸ್ಟಾರ್ ರೈಲ್' ಕಂಪನಿಯ ಟಿಕೆಟ್ ದರ ಸಮಂಜಸವಾಗಿದೆ. ಇದು ಪ್ರಯಾಣದ ಒಟ್ಟು ಪ್ಯಾಕೇಜ್ ಹೊಂದಿದೆ. ದೇವರ ದರ್ಶನಕ್ಕಾಗಿ ವಿಐಪಿ ದರ್ಶನ, ವಸತಿ ವ್ಯವಸ್ಥೆ, ಜೀವವಿಮೆ, ಸ್ಲಿಪಿಂಗ್ ಕಿಟ್, ಹವಾನಿಯಂತ್ರಿತ (ಎಸಿ) ಭೋಗಿ, ಊಟ ಒಳಗೊಂಡಿದೆ. ಇಷ್ಟು ಹಣದಲ್ಲಿ ಇಷ್ಟದ ಪ್ರವಾಸ ಮಾಡುವವರಿಗೆ ಇದೊಂದು ಉತ್ತಮ ಅವಕಾಶ ಎಂದು ಮತ್ತೊಬ್ಬ ಮಹಿಳಾ ಪ್ರಯಾಣಿಕರಾದ ಹೇಮಲತಾ ಅಭಿಪ್ರಾಯಪಟ್ಟರು.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಉತ್ತರ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಕಂಪನಿಯು ಪ್ರಯಾಣದ ಉತ್ತೇಜನಕ್ಕೆಂದೆ ಕೊಯಿಮತ್ತೂರು, ಈರೋದ್ ಮತ್ತು ಮೆಟ್ಟುಪಾಲ್ಯಯಂ ಸೇರಿದಂತೆ ವಿವಿಧ ಶಿರಡಿ ಸಾಯಿಬಾಬಾ ಟ್ರಸ್ಟ ಗಳಿಗಾಗಿ ಒಟ್ಟು 250 ಟಿಕೇಟ್ ಗಳನ್ನು ಉಚಿತವಾಗಿ ಕಾಯ್ದರಿಸಿದೆ. ಇದರಿಂದ ಭಕ್ತರು, ಟ್ರಸ್ಟ ಮುಖ್ಯಸ್ತರು ಉಚಿತವಾಗಿ ಶಿರಡಿ ಶ್ರೀ ಸಾಯಿಬಾಬಾ ದರ್ಶನ ಪಡೆಯಬಹುದಾಗಿದೆ.
ರೈಲು ಶಿರಡಿ ತಲುಪುತ್ತಿದ್ದಂತೆ ದೇವಸ್ಥಾನ ಪ್ರವೇಶಿಸಿ, ದರ್ಶನ ಪ್ರಸಾದ ಪಡೆದು ಬರುವವರೆಗೂ ಪ್ರಯಾಣಿಕರಿಗಾಗಿ ನಿಲ್ದಾಣದಲ್ಲಿ ಐದು ಗಂಟೆಗೂ ಹೆಚ್ಚು ಕಾಲ ಕಾಯಲಿದೆ. ತಿಂಗಳಿಗೆ ಮೂರು ಬಾರಿ (ಟ್ರಿಪ್) ಅಂತೆ ಒಟ್ಟು ಎರಡು ವರ್ಷದವರಿಗೆ ಕಂಪನಿ ಸೇವಾ ಪೂರೈಕೆದಾರರಿಗೆ ಪ್ರಯಾಣಕ್ಕೆಂದು ನೀಡಿದೆ ಎಂದು ಅವರು ಹೇಳಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications