ನರೋಡಾ ಹತ್ಯಾಕಾಂಡ, ಸಾಕ್ಷಿಯಾಗುವಂತೆ ಅಮಿತ್ ಶಾಗೆ ಸಮನ್ಸ್
ಅಹ್ಮದಾಬಾದ್, ಸೆ.12: ಗೋಧ್ರಾತ್ತರ ಹಿಂಸಾಚಾರ ಪ್ರಕರಣದಿಂದ ಬಚಾವಾಗಿರುವ ಬಿಜೆಪಿಯ ಹಾಲಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಇಲ್ಲಿನ ಎಸ್ ಐಟಿ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ. ನರೋಡಾ ಗಾಮ್ ಹಿಂಸಾಚಾರ ಪ್ರಕರಣದ ಸಂಬಂಧ ಸಾಕ್ಷಿಯಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
2002ರಲ್ಲಿ ನಡೆದ ಈ ಪ್ರಕರಣದ ಸಂಬಂಧ ಸೆಪ್ಟೆಂಬರ್ 18ರಂದು ವಿಚಾರಣೆ ನಡೆಯಲಿದ್ದು, ಅಮಿತ್ ಶಾ ಹಾಜರಾಗಬೇಕೆಂದು ವಿಶೇಷ ನ್ಯಾಯಾಲಯ ಆದೇಶಿಸಿದೆ. ನರೋಡ ಪಟಿಯಾ ಹಿಂಸಾಚಾರ ಪ್ರಕರಣದ ಸಂಬಂಧ ಜೀವಾವಧಿ ಶಿಕ್ಷೆಗೊಳಗಾಗಿರುವ ಮಾಜಿ ಬಿಜೆಪಿ ಸಚಿವೆ, ಮಾಯಾ ಕೊಡ್ನಾನಿ ಮನವಿ ಮೇರೆಗೆ ಈ ಸಮನ್ಸ್ ಜಾರಿಯಾಗಿದೆ.

ಅಮಿತ್ ಶಾ ಅವರು ಕೋರ್ಟಿಗೆ ಹಾಜರಾಗಿ ಮಾಜಿ ಸಚಿವೆ ಮಾಯಾ ಪರ ಸಾಕ್ಷಿ ಹೇಳಿದರೆ, ಮಾಯಾ ಅವರು ಈ ಕೇಸಿನಿಂದ ಹೊರ ಬರಬಹುದಾಗಿದೆ.
ಗುಜರಾತಿನಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಮಾಯಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು.
ವೃತ್ತಿಯಿಂದ ಸ್ತ್ರೀರೋಗ ತಜ್ಞೆಯಾಗಿರುವ ಮಾಯಾ ಅವರು ಘಟನೆ ನಡೆದ ದಿನದಂದು ಅಹ್ಮದಾಬಾದ್ ನಗರದ ಅಸರ್ವ ಪ್ರದೇಶದಲ್ಲಿ ನರ್ಸಿಂಗ್ ಹೋಂನಲ್ಲಿದ್ದರು ಎಂದು ವಾದಿಸಲಾಗಿದ್ದು, ಇದಕ್ಕೆ ಅಮಿತ್ ಹಾಗೂ ಇತರೆ 13 ಮಂದಿಗೆ ಸಮನ್ಸ್ ನೀಡುವಂತೆ ಮಾಯಾ ಕೋರಿದ್ದರು.
ನರೋಡಾ ಪಾಟಿಯಾ ಹತ್ಯಾಕಾಂಡ: ಈ ದುರ್ಘಟನೆಯಲ್ಲಿ 97 ಮುಸ್ಲಿಮರ ಹತ್ಯೆಯಾಗಿತ್ತು. ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರ ಗುಂಪೇ ಹೊಣೆಯೆಂದು ಆರೋಪಿಸಲಾಗಿತ್ತು. ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ, ವಿಹಿಂಪದ ಮಾಜಿ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಚುಮಾಲ್ ಸೇರಿದಂತೆ 62 ಮಂದಿ ಇಲ್ಲಿ ಆರೋಪಿಗಳಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications