ಪತ್ರಕರ್ತನ ಹತ್ಯೆ ಕೇಸ್: ರಾಮ್ ರಹೀಮ್ ಗೆ ಎಷ್ಟು ವರ್ಷ ಶಿಕ್ಷೆ?
ಸಿರ್ಸಾ, ಜನವರಿ 17: ಪತ್ರಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ನನ್ನು ಪಂಚಕುಳ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.
ರಾಮ್ ರಹೀಮ್ ನನ್ನು ಜ.11 ರಂದು ಹರ್ಯಾಣದ ಪಂಚಕುಳ ನ್ಯಾಯಲಯ ದೋಷಿ ಎಂದು ಪರಿಗಣಿಸಿ, ಶಿಕ್ಷೆಯ ಪ್ರಮಾಣವನ್ನು ಜ.17 ರಂದು ಪ್ರಕಟಿಸುವುದಾಗಿ ಹೇಳಿತ್ತು. ರಾಮ್ ರಹೀಮ್ ಒಟ್ಟಿಗೆ ಮೂವರನ್ನೂ ದೋಷಿ ಎಂದು ಪರಿಗಣಿಸಿದೆ.
ಪತ್ರಕರ್ತ ರಾಮಚಂದ್ರ ಛತ್ರಪತಿ ಎಂಬುವವರನ್ನು ಪಿತೂರಿ ಮಾಡಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರಾಮ್ ರಹೀಮ್ ಈಗಾಗಲೇ ಇಪ್ಪತ್ತು ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ತೀರ್ಪಿನ ನಿಮಿತ್ತ ಇಂದು ಹರ್ಯಾಣದ ಸಿರ್ಸಾ ಮತ್ತು ಪಂಚಕುಳದಲ್ಲಿ ಬಿಗಿಬಂದೋಬಸ್ತ್ ನಿಯೋಜಿಸಲಾಗಿತ್ತು. 51 ವರ್ಷ ವಯಸ್ಸಿನ ರಾಮ್ ರಹೀಮ್ ಸದ್ಯಕ್ಕೆ ರೋಹ್ಟಕ್ ನ ಸುನಾರಿಯಾ ಜೈಲಿನಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಮ್ ರಹೀಮ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ಡೇರಾ ಸಚ್ಛಾ ಸೌಧ ಆಶ್ರಮಗಳಲ್ಲಿ ಪುರುಷತ್ವ ಹರಣ ಮಾಡಲಾಗುತ್ತಿದೆ ಎಂಬ ಆರೋಪ ಹೊರೆಸಿ ಹಾಕಲಾಗಿದ್ದ ಪ್ರಕರಣ(castration case) ದಲ್ಲಿಇತ್ತೀಚೆಗೆ ರಾಮ್ ರಹೀಮ್ ಗೆ ಜಾಮೀನು ಸಿಕ್ಕಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications