Rajiv Kumar: ಇವಿಎಂ ಹ್ಯಾಕಿಂಗ್ ಸಾಧ್ಯವಿಲ್ಲವೆಂದು 42 ಬಾರಿ ನ್ಯಾಯಾಲಯಗಳು ಹೇಳಿವೆ: ಸಿಇಸಿ ರಾಜೀವ್ ಕುಮಾರ್
ನವದೆಹಲಿ,ಜನವರಿ 07: ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಾಗದು ಮತ್ತು ಅವುಗಳನ್ನು ತಿರುಚಲಾಗಿದೆ ಎಂಬ ಆರೋಪಗಳು ಆಧಾರರಹಿತ ಎಂದು ನ್ಯಾಯಾಲಯಗಳು 42 ಬಾರಿ ತೀರ್ಪು ನೀಡಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಹೇಳಿದ್ದಾರೆ.
ಈ ಕುರಿತು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಮತಯಂತ್ರಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ್ದಾರೆ. ಇನ್ನೂ ಸುದ್ದಿಗೋಷ್ಟಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಅವರು, ಸುಳ್ಳಿನ ಬಲೂನುಗಳನ್ನು ನಂಬದಿರಿ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.

ಮತದಾನದ ದಿನಕ್ಕಿಂತ ಏಳರಿಂದ ಎಂಟು ದಿನಗಳ ಮೊದಲು ಮಾತ್ರ ಇವಿಎಂಗಳನ್ನು ನಿಯೋಜಿಸಲಾಗುತ್ತದೆ ಮತ್ತು ಅಭ್ಯರ್ಥಿಗಳಿಗೆ ಇವುಗಳ ಬಗ್ಗೆ ಪ್ರತಿ ಹಂತದಲ್ಲೂ ಅವರ ಏಜೆಂಟರ ಮೂಲಕ ಮಾಹಿತಿ ನೀಡಲಾಗುತ್ತದೆ. ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯಗಳು 42 ಬಾರಿ ತೀರ್ಪು ನೀಡಿವೆ. ಯಂತ್ರಗಳನ್ನು ತಿರುಚಲಾಗಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಎಂದು ರಾಜೀವ್ ಕುಮಾರ್ ಅವರು ಹೇಳಿದರು.
ಮತದಾನದ ಡೇಟಾವನ್ನು ಬದಲಾಯಿಸುವುದು ಅಸಾಧ್ಯ ಮತ್ತು ಸಂಜೆ 5 ಗಂಟೆಯ ನಂತರ ಮತದಾನ ಹೆಚ್ಚಾಗುತ್ತಿದೆ ಎಂಬ ಬಗ್ಗೆ ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಸಿಇಸಿ ಪುನರುಚ್ಚರಿಸಿದರು. ಮಾಹಿತಿಯನ್ನು ಬಹಿರಂಗಪಡಿಸುವುದು ನಮ್ಮ ಮುಖ್ಯ ಆಧಾರಸ್ತಂಭವಾಗಿದೆ. ವಿವರವಾದ ಮಾರ್ಗಸೂಚಿಗಳು ಮತ್ತು ಡೇಟಾಸೆಟ್ಗಳು ನಮ್ಮ ವೆಬ್ಸೈಟ್ನಲ್ಲಿ ಲಭ್ಯವಿವೆ" ಎಂದು ಅವರು ಹೇಳಿದರು.
ಇನ್ನೂ ನಿನ್ನೆ (ಸೋಮವಾರ) ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಮ್ಮ ದೇಶದ ಮತದಾರರ ಸಂಖ್ಯೆ 99 ಕೋಟಿಯನ್ನು ದಾಟುತ್ತಿದೆ. ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ರಾಷ್ಟ್ರವಾಗಲಿದ್ದೇವೆ. ಇದು ಮತದಾನದಲ್ಲಿ ಮತ್ತೊಂದು ದಾಖಲೆಯಾಗಲಿದೆ" ಎಂದು ಕುಮಾರ್ ತಿಳಿಸಿದರು. "ಇಂದು ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಪಂಜಾಬ್ ಎಸ್ಎಸ್ಆರ್ (ವಿಶೇಷ ಸಾರಾಂಶ ಪರಿಷ್ಕರಣೆ) ಘೋಷಿಸಿದ ನಂತರ, ನಾವು ಮೊದಲ ಬಾರಿಗೆ 99 ಕೋಟಿ ಮತದಾರರನ್ನು ದಾಟಲಿದ್ದೇವೆ. ಮಹಿಳಾ ಮತದಾರರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚಾಗುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications