Rajiv Kumar: ಇವಿಎಂ ಹ್ಯಾಕಿಂಗ್ ಸಾಧ್ಯವಿಲ್ಲವೆಂದು 42 ಬಾರಿ ನ್ಯಾಯಾಲಯಗಳು ಹೇಳಿವೆ: ಸಿಇಸಿ ರಾಜೀವ್ ಕುಮಾರ್
ನವದೆಹಲಿ,ಜನವರಿ 07: ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಾಗದು ಮತ್ತು ಅವುಗಳನ್ನು ತಿರುಚಲಾಗಿದೆ ಎಂಬ ಆರೋಪಗಳು ಆಧಾರರಹಿತ ಎಂದು ನ್ಯಾಯಾಲಯಗಳು 42 ಬಾರಿ ತೀರ್ಪು ನೀಡಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಹೇಳಿದ್ದಾರೆ.
ಈ ಕುರಿತು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಮತಯಂತ್ರಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ್ದಾರೆ. ಇನ್ನೂ ಸುದ್ದಿಗೋಷ್ಟಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಅವರು, ಸುಳ್ಳಿನ ಬಲೂನುಗಳನ್ನು ನಂಬದಿರಿ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.

ಮತದಾನದ ದಿನಕ್ಕಿಂತ ಏಳರಿಂದ ಎಂಟು ದಿನಗಳ ಮೊದಲು ಮಾತ್ರ ಇವಿಎಂಗಳನ್ನು ನಿಯೋಜಿಸಲಾಗುತ್ತದೆ ಮತ್ತು ಅಭ್ಯರ್ಥಿಗಳಿಗೆ ಇವುಗಳ ಬಗ್ಗೆ ಪ್ರತಿ ಹಂತದಲ್ಲೂ ಅವರ ಏಜೆಂಟರ ಮೂಲಕ ಮಾಹಿತಿ ನೀಡಲಾಗುತ್ತದೆ. ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯಗಳು 42 ಬಾರಿ ತೀರ್ಪು ನೀಡಿವೆ. ಯಂತ್ರಗಳನ್ನು ತಿರುಚಲಾಗಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಎಂದು ರಾಜೀವ್ ಕುಮಾರ್ ಅವರು ಹೇಳಿದರು.
ಮತದಾನದ ಡೇಟಾವನ್ನು ಬದಲಾಯಿಸುವುದು ಅಸಾಧ್ಯ ಮತ್ತು ಸಂಜೆ 5 ಗಂಟೆಯ ನಂತರ ಮತದಾನ ಹೆಚ್ಚಾಗುತ್ತಿದೆ ಎಂಬ ಬಗ್ಗೆ ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಸಿಇಸಿ ಪುನರುಚ್ಚರಿಸಿದರು. ಮಾಹಿತಿಯನ್ನು ಬಹಿರಂಗಪಡಿಸುವುದು ನಮ್ಮ ಮುಖ್ಯ ಆಧಾರಸ್ತಂಭವಾಗಿದೆ. ವಿವರವಾದ ಮಾರ್ಗಸೂಚಿಗಳು ಮತ್ತು ಡೇಟಾಸೆಟ್ಗಳು ನಮ್ಮ ವೆಬ್ಸೈಟ್ನಲ್ಲಿ ಲಭ್ಯವಿವೆ" ಎಂದು ಅವರು ಹೇಳಿದರು.
ಇನ್ನೂ ನಿನ್ನೆ (ಸೋಮವಾರ) ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಮ್ಮ ದೇಶದ ಮತದಾರರ ಸಂಖ್ಯೆ 99 ಕೋಟಿಯನ್ನು ದಾಟುತ್ತಿದೆ. ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ರಾಷ್ಟ್ರವಾಗಲಿದ್ದೇವೆ. ಇದು ಮತದಾನದಲ್ಲಿ ಮತ್ತೊಂದು ದಾಖಲೆಯಾಗಲಿದೆ" ಎಂದು ಕುಮಾರ್ ತಿಳಿಸಿದರು. "ಇಂದು ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಪಂಜಾಬ್ ಎಸ್ಎಸ್ಆರ್ (ವಿಶೇಷ ಸಾರಾಂಶ ಪರಿಷ್ಕರಣೆ) ಘೋಷಿಸಿದ ನಂತರ, ನಾವು ಮೊದಲ ಬಾರಿಗೆ 99 ಕೋಟಿ ಮತದಾರರನ್ನು ದಾಟಲಿದ್ದೇವೆ. ಮಹಿಳಾ ಮತದಾರರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚಾಗುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications