ಭಾರತದಲ್ಲಿ ಕೋವಿಡ್-19 ಆರ್ಭಟ: ಅನ್ ಲಾಕ್ ಗೆ ಇದು ಸಕಾಲವೇ?
ನವದೆಹಲಿ, ಜೂನ್ 8: ಅದು ಮಾರ್ಚ್ 25, 2020.. ಆಗಿನ್ನೂ ಭಾರತದಲ್ಲಿದ್ದದ್ದು ಬೆರಳೆಣಿಕೆಯಷ್ಟು ಕೊರೊನಾ ವೈರಸ್ ಸೋಂಕಿತರು ಮಾತ್ರ. ಆದರೂ, ಅವತ್ತು ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟುವ ಸಲುವಾಗಿ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು.
Recommended Video
ಇಂದು ಭಾರತದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ 2.50 ಲಕ್ಷ ದಾಟಿದೆ. ಇಂತಹ ಸಮಯದಲ್ಲಿ ಕೇವಲ ಕಂಟೇನ್ಮೆಂಟ್ ಝೋನ್ ಗಳಲ್ಲಿ ಮಾತ್ರ ಲಾಕ್ ಡೌನ್ ಮುಂದುವರೆಯಲಿದ್ದು, ಉಳಿದ ಪ್ರದೇಶಗಳನ್ನು 'ಅನ್ ಲಾಕ್' ಮಾಡಲಾಗಿದೆ.
ಕಳೆದ ನಾಲ್ಕೈದು ದಿನಗಳಿಂದ ಭಾರತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಹಾಗ್ನೋಡಿದ್ರೆ, ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಇಟಲಿಯಲ್ಲಿದ್ದ ಪರಿಸ್ಥಿತಿ ಇದೀಗ ಭಾರತದಲ್ಲಿದೆ. ಅಂದು ಇಟಲಿಯನ್ನ ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿತ್ತು. ಆದರೆ, ಭಾರತದಲ್ಲಿ ಈಗ ಹೆಚ್ಚು ಸಕ್ರಿಯ ಸೋಂಕಿತರಿದ್ದರೂ 'ಅನ್ ಲಾಕ್' ಪ್ರಕ್ರಿಯೆ ಆರಂಭವಾಗಿದೆ. ಅನ್ ಲಾಕ್ ಮಾಡಲು ಇದು ಸಕಾಲವೇ.?

ಹೀಗೂ ಉಂಟು.!
ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿರುವ ದೇಶಗಳ ಪೈಕಿ ಭಾರತ ಸದ್ಯ ಆರನೇ ಸ್ಥಾನದಲ್ಲಿದೆ. ಪ್ರತಿ ದಿನದ ಹೊಸ ಸೋಂಕಿತರ ಪ್ರಮಾಣ ತಾಳೆ ಹಾಕಿ ನೋಡಿದರೆ, ಅಮೇರಿಕಾ ಮತ್ತು ಬ್ರೆಜಿಲ್ ಬಿಟ್ಟರೆ.. ಹೆಚ್ಚು ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿರುವುದು ನಮ್ಮ ಭಾರತದಲ್ಲೇ.!

ಕೆಲವೇ ದಿನಗಳಲ್ಲಿ ನಾಲ್ಕನೇ ಸ್ಥಾನಕ್ಕೆ.?
ಟಾಪ್ 5 ದೇಶಗಳ ಪಟ್ಟಿಯಲ್ಲಿ ಯು.ಕೆ ಮತ್ತು ಸ್ಪೇನ್ ಕೂಡ ಇದೆ. ಆದರೆ, ಯು.ಕೆ ಮತ್ತು ಸ್ಪೇನ್ ನಲ್ಲೀಗ ಹೊಸ ಸೋಂಕಿತರ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಹೀಗೇ ಮುಂದುವರೆದರೆ ಕೆಲವೇ ದಿನಗಳಲ್ಲಿ ಒಟ್ಟಾರೆ ಕೊರೊನಾ ವೈರಸ್ ಸೋಂಕಿತರ ಜಾಗತಿಕ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನಕ್ಕೇರಲಿದೆ.

ಯೂರೋಪ್ ನಲ್ಲಿ ಫ್ರೆಶ್ ಕೇಸ್ ಗಳು ಕಮ್ಮಿಯಾಗಿವೆ
ಬಹುತೇಕ ಯೂರೋಪಿಯನ್ ರಾಷ್ಟ್ರಗಳು ಸದ್ಯ 'ಲಾಕ್ ಡೌನ್' ನಿಂದ 'ಆನ್ ಲಾಕ್' ಆಗುತ್ತಿವೆ. ಆದರೆ, ಆ ಎಲ್ಲಾ ರಾಷ್ಟ್ರಗಳಲ್ಲಿ ಹೊಸದಾಗಿ ಸೋಂಕಿತರು ಹೆಚ್ಚಾಗಿ ಕಂಡುಬರುತ್ತಿಲ್ಲ. ಇಟಲಿ, ಜರ್ಮನಿ, ಫ್ರಾನ್ಸ್, ನೆದರ್ ಲ್ಯಾಂಡ್ಸ್, ಸ್ವೀಡನ್, ಬೆಲ್ಜಿಯಂ, ಸ್ವಿಟ್ಜರ್ಲ್ಯಾಂಡ್ ನಲ್ಲಿ ಫ್ರೆಶ್ ಕೇಸ್ ಗಳು ಬೆರಳೆಣಿಕೆಯಷ್ಟಾಗಿದೆ.

ಇದು ಸರಿಯೇ.?
ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಹರ್ಯಾಣ, ಕೇರಳದಲ್ಲಿ ಹೆಚ್ಚು ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಸಮಯದಲ್ಲಿ ಭಾರತ ಅನ್ ಲಾಕ್ ಆಗುತ್ತಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಹಲವರ ತಲೆಯಲ್ಲಿ ಕೊರೆಯುತ್ತಿದೆ.

ಸೋಂಕಿತರ ಸಂಖ್ಯೆ ಹೆಚ್ಚಾದರೆ.?
ಅನ್ ಲಾಕ್ 1.0 ನಲ್ಲಿ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಿರುವ ಕಾರಣ, ಆರ್ಥಿಕ ಚಟುವಟಿಕೆ ಹೆಜ್ಜಾಗಲಿದೆ. ಇದರಿಂದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುವ ಅಪಾಯ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ, ರೋಗಿಗಳ ವೈದ್ಯಕೀಯ ಅಗತ್ಯಗಳನ್ನು ಪೂರೈಸಲು ರಾಜ್ಯಗಳು ತೊಂದರೆ ಎದುರಿಸುವ ಸಂಭವವೂ ಇದೆ.

ಬೆಡ್ ಗಳ ಕೊರತೆ
ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಈಗಾಗಲೇ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಎದುರಾಗಿದೆ. ಬಿಹಾರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಕೆಲ ವೈದ್ಯಕೀಯ ಮೂಲಸೌಕರ್ಯಗಳೇ ಇಲ್ಲದಂತಾಗಿದೆ. ಇನ್ನೂ ಹಲವು ರಾಜ್ಯಗಳಲ್ಲಿ ಟೆಸ್ಟಿಂಗ್ ಕಿಟ್ ಗಳ ಸಮರ್ಪಕ ಪೂರೈಕೆ ಸಾಧ್ಯವಾಗುತ್ತಿಲ್ಲ.

ಇದು ಸಕಾಲವೇ.?
ಅತ್ತ ಕಂಟೇನ್ಮೆಂಟ್ ಝೋನ್ ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ದೆಹಲಿಯೊಂದರಲ್ಲೇ 200 ಕ್ಕೂ ಹೆಚ್ಚು ಕಂಟೇನ್ಮೆಂಟ್ ಝೋನ್ ಗಳಿವೆ. ಇಂಥಾ ಸಮಯದಲ್ಲಿ ದೇಶ ಅನ್ ಲಾಕ್ ಆಗಿದ್ದು ಸರಿಯೇ.? ಅನ್ ಲಾಕ್ ಮಾಡಲು ಇದು ಸಕಾಲವೇ.? ನೀವೇ ಯೋಚಿಸಿ...
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications