ಕೊವಿಡ್ 19: ಧೂಮಪಾನಿಗಳಿಗೆ ಎಚ್ಚರಿಕೆ ನೀಡಿದ ಇಲಾಖೆ
ನವದೆಹಲಿ, ಜುಲೈ 29: ಕೊರೊನಾವೈರಸ್ ಸಾಂಕ್ರಾಮಿಕ ಸೋಂಕಿನ ಶಂಕಿತ ವ್ಯಕ್ತಿಗಳು ಧೂಮಪಾನಿಗಳಾಗಿದ್ದರೆ ಅವರುಗಳ ಮೇಲೆ ಸೋಂಕು ಕ್ಷಿಪ್ರವಾಗಿ ಇನ್ನಷ್ಟು ಪರಿಣಾಮ ಬೀರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಸಿದೆ.
Recommended Video
ಧೂಮಪಾನಿಗಳಲ್ಲಿ ಕೈಯಿಂದ ತುಟಿಗೆ ಬಾಯಿಗೆ ವೈರಾಣು ಹಬ್ಬುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲದೆ, ಧೂಮಪಾನಿಗಳಿಗೆ ಶ್ವಾಸಕೋಶ ಮತ್ತು ಹೃದಯ ಸೋಂಕಿನ ಅಪಾಯದ ತೀವ್ರತೆಗಳು ಹೆಚ್ಚಿವೆ, ಇದರಿಂದ ಅವರುಗಳು ಉಸಿರಾಟದ ತೊಂದರೆಗಳಿಗೂ ಸಿಲುಕಲಿದ್ದಾರೆ. ಧೂಮಪಾನಿಗಳಿಗೆ ಮೊದಲೇ ಶ್ವಾಸಕೋಶಗಳು ಹಾನಿಗೊಳಗಾಗಿರುವುದರಿಂದ ಅವರಿಗೆ ಕೊರೋನಾ ಸೋಂಕು ತಗುಲಿದರೆ ಅದು ಅವರ ಮೇಲೆ ಇನ್ನಷ್ಟು ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಅಲ್ಲದೆ ಪರೋಕ್ಷ ಧೂಮಪಾನವೂ ಕೂಡ ಶ್ವಾಸಕೋಶ ಮತ್ತು ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅದು ಹೃದಯ ಮತ್ತು ಉಸಿರಾಟದ ಸೋಂಕಿಗೂ ಒಳಗಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಧೂಮಪಾನಿಗಳು ಧೂಮಪಾನ ಮಾಡದಂತವರ ಬಳಿ ಸೇರದಿರುವುದು ಅತಿ ಮುಖ್ಯ

ಧೂಮಪಾನ ಶ್ವಾಸಕೋಶದ ಕಾರ್ಯವನ್ನು ದುರ್ಬಲಗೊಳಿಸಿ, ರೋಗನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಧೂಮಪಾನಿಗಳಿಗೆ ಕೋವಿಡ್ ಸೋಂಕು ತಗುಲಿದರೆ ಅವರಲ್ಲಿ ಆರೋಗ್ಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿದ್ದು, ಅಂತವರು ಮರಣ ಹೊಂದುವ ಸಾಧ್ಯತೆಗಳು ಹೆಚ್ಚಿರುತ್ತದೆ.
ಸಿಗರೇಟ್, ಬೀಡಿಯಲ್ಲದೆ, ಹುಕ್ಕಾ, ಪೈಪ್ ಮುಂತಾದ ಯಾವುದೇ ರೀತಿ ಬಳಕೆ ಕೂಡಾ ವ್ಯಕ್ತಿಯಿಂದ ಸಮುದಾಯಕ್ಕೆ ಸೋಂಕು ಹರಡಿಸಬಹುದು ಎಂದು ಹೇಳಲಾಗಿದೆ.

ಧೂಮಪಾನ ಮಾಡದಿದ್ದರೆ ಶ್ವಾಸಕೋಶ, ಹೃದಯ ಮತ್ತು ದೇಹದ ಇತರೆ ಅಂಗಗಳಿಗೂ ಅನುಕೂಲವಾಗುತ್ತದೆ. ಸಾಂಕ್ರಮಿಕವಲ್ಲದ ರೋಗಗಳಾದ(NCDs) ಹೃದಯಸಂಬಂಧಿ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಕಾಯಿಲೆ,ಡಯಾಬಿಟಿಸ್ ಕೂಡಾ ಈ ಸಂದರ್ಭದಲ್ಲಿ ಮಾರಕವಾಗಿ ಪರಿಣಮಿಸುತ್ತವೆ. ದೇಶದಲ್ಲಿ ಶೇ 63ರಷ್ಟು ಮಂದಿ Non-communicable Diseases ಗೆ ತುತ್ತಾಗಿ ಮರಣ ಹೊಂದುತ್ತಿದ್ದಾರೆ. ಹೀಗಾಗಿ, ಧೂಮಪಾನಿಗಳಿಗೆ ಕೋವಿಡ್ ಸೋಂಕು ತಗುಲದೇ ಇದ್ದರೂ ಸಹ ಧೂಮಪಾನವನ್ನು ವರ್ಜಿಸಲು ಇದು ಸೂಕ್ತವಾದ ಸಮಯ ಎಂದು ಇಲಾಖೆ ಹೇಳಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications