ಜೀವ ಉಳಿಸಲು ಕೋವಿಡ್ ಲಸಿಕೆ ಅತ್ಯಗತ್ಯ - ಪಿಎಂ ಮೋದಿ
ನವದೆಹಲಿ, ಮೇ 26: ಕೋವಿಡ್19 ಅನೇಕ ಮಂದಿಯ ಮನೆ ಬಾಗಿಲಿಗೆ ಸಂಕಟವನ್ನು ತಂದೊಡ್ಡಿದೆ. ಭಾರಿ ಆರ್ಥಿಕ ಪರಿಣಾಮವನ್ನು ಉಂಟುಮಾಡಿದೆ ಎಂದು ಹೇಳಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೋವಿಡ್ನಿಂದ ಜೀವ ಉಳಿಸಲು ಲಸಿಕೆ ಪಡೆಯವುದು ಅತ್ಯಗತ್ಯ ಎಂದು ಹೇಳಿದ್ದಾರೆ.
ಬುದ್ಧ ಪೂರ್ಣಿಮಾ ಹಿನ್ನೆಲೆ ನಡೆದ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಸಾಂಕ್ರಾಮಿಕ ರೋಗವು ಎಲ್ಲಾ ರಾಷ್ಟ್ರಗಳ ಮೇಲೆ ಪರಿಣಾಮ ಬೀರಿದೆ. ಆದರೆ ಅದರ ವಿರುದ್ಧ ಹೋರಾಡುವ ನಮ್ಮ ಕಾರ್ಯತಂತ್ರವನ್ನು ಬಲಪಡಿಸುವ ಅನೇಕ ಗಮನಾರ್ಹ ಬೆಳವಣಿಗೆಗಳು ನಮ್ಮ ದೇಶದಲ್ಲಿ ನಡೆದಿವೆ. ಬಹು ಮುಖ್ಯವಾಗಿ, ನಮ್ಮಲ್ಲಿ ಲಸಿಕೆ ಇದೆ, ಇದು ಜೀವಗಳನ್ನು ಉಳಿಸಲು ಮತ್ತು ಸಾಂಕ್ರಾಮಿಕ ರೋಗವನ್ನು ಸೋಲಿಸಲು ಅತೀ ಮುಖ್ಯ ಎಂದು ಹೇಳಿದರು.
ಕೋವಿಡ್ ಪತ್ತೆಯಾದ ಒಂದು ವರ್ಷದೊಳಗೆ ಕೋವಿಡ್ ಲಸಿಕೆಯನ್ನು ಉತ್ಪಾದಿಸಿರುವುದು ಮಾನವನ ದೃಢತೆಯ ಶಕ್ತಿಯನ್ನು ತೋರಿಸುತ್ತದೆ. ಲಸಿಕೆಗಳನ್ನು ಅಭಿವೃದ್ಧಿಪಡಿಸಿದ ನಮ್ಮ ಭಾರತದ ವಿಜ್ಞಾನಿಗಳ ಬಗ್ಗೆ ದೇಶವೇ ಹೆಮ್ಮೆಪಡುತ್ತದೆ. ಇತರರನ್ನು ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಕ್ಕಾಗಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ನಾನು ನಮಸ್ಕರಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಲ್ಲಿ ಬಳಲುತ್ತಿರುವ ಮತ್ತು ಮೃತಪಟ್ಟವರ ಬಗ್ಗೆ ಸಂತಾಪ ಸೂಚಿಸುತ್ತಾ, ಮೃತ ಕುಟುಂಬದ ದುಃಖದೊಂದಿಗೆ ನಾನೂ ಭಾಗಿಯಾಗುತ್ತೇನೆ ಎಂದು ಕೂಡಾ ಹೇಳಿದ್ದಾರೆ.
ಇನ್ನು ಹವಾಮಾನ ಬದಲಾವಣೆ ಮತ್ತು ಭಯೋತ್ಪಾದನೆಯ ವಿಷಯಗಳ ಬಗ್ಗೆಯೂ ಮಾತನಾಡಿದ ಮೋದಿ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವಾಗ ನಾವು ಇತರ ಸವಾಲುಗಳ ಬಗ್ಗೆ ಮರೆಯಬಾರದು. ಆ ಕಡೆಯೂ ಗಮನ ಹರಿಸಬೇಕು ಎಂದು ಹೇಳಿದರು.
ವರ್ಚುವಲ್ ಕಾರ್ಯಕ್ರಮದಲ್ಲಿ ನೇಪಾಳ ಮತ್ತು ಶ್ರೀಲಂಕಾದ ಪ್ರಧಾನ ಮಂತ್ರಿಗಳು ಅಂತಾರಾಷ್ಟ್ರೀಯ ಬೌದ್ಧ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹಾಜರಾಗಿದ್ದರು. ಪ್ರಧಾನಿ ಮೋದಿ, ನಾವು ಮಾನವೀಯತೆಯನ್ನು ನಂಬುವವವರು, ನಾವೆಲ್ಲರೂ ಒಗ್ಗೂಡಿ ಭಯೋತ್ಪಾದನೆಯನ್ನು ಸೋಲಿಸಬೇಕು ಎಂದು ಕರೆ ನೀಡಿದರು.

ಗೌತಮ ಬುದ್ಧನ ಜೀವನವು ಶಾಂತಿ, ಸಾಮರಸ್ಯ ಮತ್ತು ಸಹಬಾಳ್ವೆಯ ಕುರಿತಾಗಿದೆ. ವಿಶ್ವದಾದ್ಯಂತ ದ್ವೇಷ, ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವುವ ಶಕ್ತಿಗಳು ಇನ್ನೂ ಇದೆ. ಇಂತಹ ಶಕ್ತಿಗಳು ಪ್ರಜಾಪ್ರಭುತ್ವ ತತ್ವಗಳನ್ನು ನಂಬುವುದಿಲ್ಲ ಎಂದರು.
ಇನ್ನು ಈ ವೇಳೆ ಹವಾಮಾನ ಬದಲಾವಣೆಯ ವಿಷಯವನ್ನು ಉಲ್ಲೇಖಿಸಿದ ಮೋದಿ, ಪ್ರಸ್ತುತ ಪೀಳಿಗೆಯ ಅಜಾಗರೂಕ ಜೀವನಶೈಲಿ ಭವಿಷ್ಯದ ಪೀಳಿಗೆಗೆ ಅಪಾಯವನ್ನುಂಟುಮಾಡುತ್ತಿದೆ. ಬುದ್ಧ ಅತ್ಯುನ್ನತವಾದ ಜೀವನ ವಿಧಾನಕ್ಕೆ ಒತ್ತು ನೀಡಿದ್ದಾರೆ ಎಂದು ಹೇಳಿದರು.
(ಒನ್ಇಂಡಿಯಾ ಸುದ್ದಿ)
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications