ಕೋವಿಡ್ 2ನೇ ಅಲೆ; ಭಾರತದಲ್ಲಿ 9 ದಿನದಲ್ಲಿ 20 ಸಾವಿರ ಸಾವು
ನವದೆಹಲಿ, ಏಪ್ರಿಲ್ 28; ಕೋವಿಡ್ 2ನೇ ಅಲೆ ಭಾರತದಲ್ಲಿ ಭಾರೀ ಆತಂಕವನ್ನು ಉಂಟು ಮಾಡಿದೆ. ಏಪ್ರಿಲ್ 20 ರಿಂದ 28ರ ಅವಧಿಯಲ್ಲಿ ದೇಶದಲ್ಲಿ 20 ಸಾವಿರ ಜನರು ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಭಾರತದಲ್ಲಿ ಏಪ್ರಿಲ್ 1 ರಿಂದ 28ರ ತನಕ 38,260 ಜನರು ಮೃತಪಟ್ಟಿದ್ದಾರೆ. ಆದರೆ, ಕಳೆದ 9 ದಿನಗಳಲ್ಲಿ ಮೃತಪಟ್ಟವರ ಸಂಖ್ಯೆ 20,657.
ಕಳೆದ ಒಂದು ವಾರದಲ್ಲಿ ದೇಶದಲ್ಲಿ ಹೊಸ ಕೋವಿಡ್ ಪ್ರಕರಣ ಮತ್ತು ಸಾವಿನ ಸಂಖ್ಯೆ ಹೊಸ ದಾಖಲೆಯನ್ನು ಬರೆದಿದೆ. ಬುಧವಾರ ಒಂದೇ ದಿನ 3,60,960 ಹೊಸ ಕೋವಿಡ್ ಪ್ರಕರಣ ದೇಶದಲ್ಲಿ ದಾಖಲಾಗಿದೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ. ಪ್ರತಿ ದಿನದ ಸಾವಿನ ಸಂಖ್ಯೆ 3 ಸಾವಿರದ ಗಡಿ ದಾಟಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,293 ಜನರು ಸಾವನ್ನಪ್ಪಿದ್ದಾರೆ.

ಯಾವ ರಾಜ್ಯದಲ್ಲಿ ಎಷ್ಟು?
ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಅತಿ ಹೆಚ್ಚು ಸಾವಿನ ಪ್ರಕರಣ ದಾಖಲಾಗಿದೆ. ಮಂಗಳವಾರ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಅತಿ ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರ 895, ದೆಹಲಿ 381, ಉತ್ತರ ಪ್ರದೇಶದಲ್ಲಿ 264, ಛತ್ತೀಸ್ಗಢ್ನಲ್ಲಿ 246 ಜನರು ಮೃತಪಟ್ಟಿದ್ದಾರೆ.

ಕೋವಿಡ್ 2ನೇ ಅಲೆ ಸಾವುಗಳು
ಕರ್ನಾಟಕ 180, ಗುಜರಾತ್ 170, ಜಾರ್ಖಂಡ್ 131, ರಾಜಸ್ಥಾನ 121, ಪಂಜಾಬ್ 100, ಮಧ್ಯ ಪ್ರದೇಶ 98 ಜನರು ಮೃತಪಟ್ಟಿದ್ದಾರೆ. 10 ರಾಜ್ಯಗಳಿಂದ ಒಟ್ಟು 78.53 ಶೇ ಸಾವಿನ ಪ್ರಕರಣಗಳು ದಾಖಲಾಗಿವೆ.

1 ಸಾವಿರದ ಗಡಿ ದಾಟಿದ ಸಾವು
ಭಾರತದಲ್ಲಿ ಏಪ್ರಿಲ್ 1 ರಿಂದ 13ರ ತನಕ ಪ್ರತಿದಿನ 1000 ಜನರು ಸಾವನ್ನಪ್ಪುತ್ತಿದ್ದರು. ಏಪ್ರಿಲ್ 18ರಂದು 1500 ಜನರು ಸಾವನ್ನಪ್ಪಿದರು. ಏಪ್ರಿಲ್ 14 ರಿಂದ 17ರ ತನಕ ಪ್ರತಿ ದಿನ 1500ಕ್ಕಿಂತ ಕಡಿಮೆ ಜನರು ಮರಣ ಹೊಂದಿದ್ದಾರೆ.

ಪ್ರತಿ ನಿಮಿಷಕ್ಕೆ ಇಬ್ಬರ ಸಾವು
ಏಪ್ರಿಲ್ 21ರಂದು ಭಾರತದಲ್ಲಿ 2023 ಜನರು ಸಾವನ್ನಪ್ಪಿದರು. ಬಳಿಕ ಪ್ರತಿದಿನ 2000ಕ್ಕೂ ಅಧಿಕ ಸಾವುಗಳು ವರದಿಯಾಗುತ್ತಿದೆ. 2020ರ ಜೂನ್ನಲ್ಲಿ ದೇಶದಲ್ಲಿ ಪ್ರತಿದಿನ 2 ಸಾವಿರ ಜನರು ಸಾವನ್ನಪ್ಪುತ್ತಿದ್ದರು. ಆದರೆ, ಅದು ಮಹಾರಾಷ್ಟ್ರ ಮತ್ತು ದೆಹಲಿಗೆ ಮಾತ್ರ ಸೀಮಿತವಾಗಿತ್ತು. ಏಪ್ರಿಲ್ನಲ್ಲಿ ಭಾರತದಲ್ಲಿ 57.75 ಲಕ್ಷ ಪ್ರಕರಣ ದಾಖಲಾಗಿದೆ. ಏಪ್ರಿಲ್ 20ರ ತನಕ 26.76 ಲಕ್ಷ ಪ್ರಕರಣಗಳು ಇತ್ತು.
-
Popular Indian Foods: ಈ 5 ಆಹಾರಗಳು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಗಳು! -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
Mangoes: ಮಾವಿನಹಣ್ಣು ಖರೀದಿ ಮಾಡುವಾಗ 3 ತಪ್ಪು ಮಾಡ್ಬೇಡಿ! ಈ 6 ಟ್ರಿಕ್ಸ್ ತಿಳ್ಕೊಂಡಿರಿ -
Vastu vs Horoscope: ಮನೆ ವಾಸ್ತು ಪರ್ಫೆಕ್ಟ್ ಆದರೂ ಏಕೆ ಕಿರಿಕಿರಿ? ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ












Click it and Unblock the Notifications