ಭಾರತದಲ್ಲಿ ಶೇ.90 ರಷ್ಟು ಜಿಲ್ಲೆಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣ ಕುಸಿತ
ನವದೆಹಲಿ, ಜೂ.21: ದೇಶಾದ್ಯಂತ ಪ್ರತಿದಿನ 50,000 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾದರೂ, ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ 650 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುಮಾರು 90 ಪ್ರತಿಶತದಷ್ಟು ಜಿಲ್ಲೆಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಕುಸಿತದ ಹಂತದಲ್ಲಿದೆ.
ಜೂನ್ 12 ರಿಂದ ಜೂನ್ 19 ರ ವಾರದಲ್ಲಿ, ದೇಶದ 70 ಜಿಲ್ಲೆಗಳಲ್ಲಿ ಮಾತ್ರ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ 27 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಹೆಚ್ಚಳ 100 ಕ್ಕಿಂತ ಹೆಚ್ಚಾಗಿದೆ. 18 ಜಿಲ್ಲೆಗಳಲ್ಲಿ ಏರಿಕೆ ಒಂದೇ ಅಂಕೆಗಳಲ್ಲಿತ್ತು.
ಆದಾಗ್ಯೂ, ಈ 70 ಜಿಲ್ಲೆಗಳಲ್ಲಿ 23 ಜಿಲ್ಲೆಗಳು ಪಶ್ಚಿಮ ಬಂಗಾಳದ್ದು ಆಗಿದೆ. ಕಳೆದ ಒಂದು ವಾರದಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾದ ಏಕೈಕ ಪ್ರಮುಖ ರಾಜ್ಯ ಇದಾಗಿದೆ. ಇದಕ್ಕೂ ಮೊದಲು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳಲ್ಲಿ ತೀವ್ರ ಕುಸಿತ ಕಂಡಿದೆ. ಸಕ್ರಿಯ ಪ್ರಕರಣಗಳು ಕೇವಲ 20 ದಿನಗಳಲ್ಲಿ 1.32 ಲಕ್ಷದಿಂದ 15,000 ಕ್ಕಿಂತ ಕಡಿಮೆಯಾಗಿದೆ. ಆದರೆ ಆ ಬಳಿಕ ಸಕ್ರಿಯ ಪ್ರಕರಣಗಳು ಏರಿಕೆಯಾಗಿದೆ. ಜೂನ್ 19 ರ ಶನಿವಾರದ ವೇಳೆಗೆ, ರಾಜ್ಯವು 23,000 ಸಕ್ರಿಯ ಪ್ರಕರಣಗಳನ್ನು ಹೊಂದಿತ್ತು.

ಆದಾಗ್ಯೂ, ಪಶ್ಚಿಮ ಬಂಗಾಳದಲ್ಲಿ ಸಕ್ರಿಯ ಪ್ರಕರಣಗಳ ಹೆಚ್ಚಳವು ಹೆಚ್ಚಿನ ಪ್ರಕರಣಗಳ ಪತ್ತೆಯಿಂದಾಗಿಲ್ಲ. ಹೊಸ ಕೊರೊನಾ ಪ್ರಕರಣಗಳು ಸತತವಾಗಿ ಕುಸಿಯುತ್ತಿವೆ. ರಾಜ್ಯದಲ್ಲಿ ದಿನಕ್ಕೆ 3,000 ಕ್ಕಿಂತ ಕಡಿಮೆ ಸೋಂಕುಗಳು ವರದಿಯಾಗುತ್ತಿದೆ.
ಆದರೆ ಕಳೆದ ಒಂದು ವಾರದಲ್ಲಿ, ಚೇತರಿಸಿಕೊಂಡವರ ಸಂಖ್ಯೆ ತೀವ್ರವಾಗಿ ಇಳಿದಿದೆ. ಇದು ಸಕ್ರಿಯ ಪ್ರಕರಣಗಳ ಏರಿಕೆಗೆ ಕಾರಣವಾಗಿದೆ. ಉದಾಹರಣೆಗೆ, ಶನಿವಾರ, ರಾಜ್ಯದಲ್ಲಿ 2,486 ಹೊಸ ಸೋಂಕುಗಳು ವರದಿಯಾಗಿದ್ದರೆ, ಕೇವಲ 2,100 ಜನರು ಮಾತ್ರ ಚೇತರಿಸಿಕೊಂಡಿದ್ದಾರೆ.
ಕಳೆದ ಒಂದು ವಾರದಲ್ಲಿ ಸಕ್ರಿಯ ಪ್ರಕರಣಗಳ ಹೆಚ್ಚಳ ಕಂಡ ಇತರ ರಾಜ್ಯಗಳು ಮಣಿಪುರ ಮತ್ತು ಮಿಜೋರಾಂ. ಆದರೆ ಈ ಎರಡೂ ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಸಾವಿರದಷ್ಟಿದೆ. ಪಶ್ಚಿಮ ಬಂಗಾಳದ ಕೋಲ್ಕತಾ, ಪೂರ್ವ ಮೇದಿನಪುರ ಮತ್ತು ಉತ್ತರ 24 ಪರಗಣದಲ್ಲಿ ಸಕ್ರಿಯ ಪ್ರಕರಣಗಳಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ದಾಖಲಾಗಿದೆ.
ಮಹಾರಾಷ್ಟ್ರದಲ್ಲಿ ಕಳೆದ ಒಂದು ವಾರದಲ್ಲಿ ಆರು ಜಿಲ್ಲೆಗಳು ಸಕ್ರಿಯ ಪ್ರಕರಣಗಳ ಹೆಚ್ಚಳ ಕಂಡು ಬಂದಿದೆ. ಮುಂಬೈ, ಪಾಲ್ಘರ್, ಬುಲ್ಖಾನಾ, ಸಾಂಗ್ಲಿ, ಔರಂಗಾಬಾದ್ ಮತ್ತು ಪರಭಾನಿ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಏರಿಕೆ ಕಂಡುಬಂದಿದೆ. ಇದೀಗ 21,000 ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಮುಂಬೈ, ಕಳೆದ ಒಂದು ವಾರದಲ್ಲಿ 777 ಸಕ್ರಿಯ ಪ್ರಕರಣಗಳ ಹೆಚ್ಚಳ ಕಂಡಿದೆ.
(ಒನ್ಇಂಡಿಯಾ ಸುದ್ದಿ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications