ಉತ್ತರ ಮತ್ತು ಪೂರ್ವದ 6 ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ!
ನವದೆಹಲಿ, ಆಗಸ್ಟ್ 18 : ಭಾರತದಲ್ಲಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27.02 ಲಕ್ಷಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಉತ್ತರ ಮತ್ತು ಪೂರ್ವ ಭಾರತದ ಕೆಲವು ರಾಜ್ಯಗಳಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.
Recommended Video
ಜುಲೈ 24 ರಿಂದ ಆಗಸ್ಟ್ 16ರ ತನಕ ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ 6 ರಾಜ್ಯಗಳಲ್ಲಿ ಹೆಚ್ಚಾಗುತ್ತಿದೆ. ಉತ್ತರ ಮತ್ತು ಪೂರ್ವ ಭಾರತದ 6 ರಾಜ್ಯಗಳಲ್ಲಿ ಸೋಂಕಿತರು ಹೆಚ್ಚಾಗುತ್ತಿದ್ದಾರೆ.
ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 2.6ರಷ್ಟು ಹೆಚ್ಚಾಗಿದೆ. ಈ ರಾಜ್ಯಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಲಾಗಿದ್ದು, ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.
ಜುಲೈ 24ರಂದು ಕೋವಿಡ್ ಸೋಂಕಿತರ ಸಂಖ್ಯೆಲ್ಲಿ ಈ ರಾಜ್ಯಗಳ ಪಾಲು ಶೇ 15.6ರಷ್ಟಿತ್ತು. ಈಗ ಅದು ಶೇ 20ಕ್ಕೆ ಏರಿಕೆಯಾಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,58,216ಕ್ಕೆ ಏರಿಕೆಯಾಗಿದೆ.

ಸೋಂಕಿತರು ಇರುವ ಟಾಪ್ ರಾಜ್ಯಗಳು
ಕೊರೊನಾ ವೈರಸ್ ಸೋಂಕಿತರು ಇರುವ ಟಾಪ್ 5 ರಾಜ್ಯಗಳಲ್ಲಿ ಮಹಾರಾಷ್ಟ್ರ (6,04,358) ಮೊದಲ ಸ್ಥಾನದಲ್ಲಿದೆ. ತಮಿಳುನಾಡು (3,43,945), ಆಂಧ್ರ ಪ್ರದೇಶ (2,96,609), ಕರ್ನಾಟಕ (2,33,283) ಮತ್ತು ಉತ್ತರ ಪ್ರದೇಶ (1,58,216).

1 ಲಕ್ಷದ ಗಡಿದಾಟಿದ ಯುಪಿ, ಪ. ಬಂಗಾಳ
ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಡಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,19,578ಕ್ಕೆ ಏರಿಕೆಯಾಗಿದೆ.

ಬಿಹಾರ, ಅಸ್ಸಾಂ ರಾಜ್ಯಗಳು
ಬಿಹಾರ (1,06,618) ಮತ್ತು ಅಸ್ಸಾಂ (79,668) ರಾಜ್ಯಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ತೆಲಂಗಾಣ ರಾಜ್ಯದಲ್ಲಿಯೂ ಸೋಮವಾರ 1,682 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 93,937ಕ್ಕೆ ಏರಿಕೆಯಾಗಿದೆ.

ಜಾರ್ಖಂಡ್, ಒಡಿಶಾ
ಜಾರ್ಖಂಡ್ನಲ್ಲಿ 24,067 ಪ್ರಕರಣಗಳು, ಒಡಿಶಾದಲ್ಲಿ 62,294 ಕೋವಿಡ್ ಸೋಂಕಿತರ ಸಂಖ್ಯೆ ದಾಖಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸಾವಿರಾರು ಕಾರ್ಮಿಕರು ವಾಪಸ್ ಹೋದಾಗಲೂ ಹೆಚ್ಚಾಗದ ಸೋಂಕಿತರ ಸಂಖ್ಯೆ ಜುಲೈ ನಂತರ ಹೆಚ್ಚಾಗುತ್ತಿದೆ.
-
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications