ಕೊರೊನಾ ಮೂರನೇ ಅಲೆ ಭೀತಿ ನಡುವೆ ಏರಿದೆ ಸೋಂಕಿನ 'ಆರ್' ದರ
ನವದೆಹಲಿ, ಸೆಪ್ಟೆಂಬರ್ 4: ಸಂಭಾವ್ಯ ಕೊರೊನಾ ಮೂರನೇ ಅಲೆ ಎಚ್ಚರಿಕೆ ನಡುವೆ ಹಲವು ರಾಜ್ಯಗಳಲ್ಲಿ ಸೋಂಕಿನ ಹರಡುವಿಕೆ ತಡೆಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಕ್ಟೋಬರ್ ತಿಂಗಳಿನಲ್ಲಿ ಕೊರೊನಾ ಮೂರನೇ ಅಲೆ ಉತ್ತುಂಗಕ್ಕೆ ಹೋಗುವುದಾಗಿ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಇದರ ಜೊತೆಜೊತೆಗೆ ಮತ್ತೆ ಕೊರೊನಾ ಸೋಂಕಿನ ಪುನರುತ್ಪತ್ತಿ ದರ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಆಗಸ್ಟ್ ತಿಂಗಳಿನ ಕೊನೆಯ ವಾರದಲ್ಲಿ ದೇಶದಲ್ಲಿ ಕೊರೊನಾ ಸೋಂಕಿನ ಪುನರುತ್ಪತ್ತಿ ದರ ಏರಿಕೆಯಾಗಿದ್ದು, 1.17ಗೆ ತಲುಪಿದೆ. ಆಗಸ್ಟ್ 14-17ರವರೆಗೆ ಸೋಂಕಿನ ಪುನರುತ್ಪತ್ತಿ ದರ 0.89 ಇದ್ದದ್ದು ಕೊನೆಯ ವಾರದಲ್ಲಿ ಏಕಾಏಕಿ 1.17ಗೆ ಏರಿಕೆಯಾಗಿದೆ ಎಂದು ಚೆನ್ನೈನ ಇನ್ಸ್ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸಸ್ ಸಂಶೋಧಕರು ತಿಳಿಸಿದ್ದಾರೆ. ಈ ಅಂಕಿ ಅಂಶ ಸೋಂಕು ಹೆಚ್ಚಳದ ಸೂಚನೆಯನ್ನು ನೀಡುತ್ತಿದೆ.
ಕೊರೊನಾ ಸೋಂಕು ಹರಡುವಿಕೆ ವೇಗವನ್ನು ಈ ಪುನರುತ್ಪತ್ತಿ ದರ ಸಾಂಕೇತಿಸುತ್ತದೆ. ಈ ದರ ಸದ್ಯ ಒಂದಕ್ಕಿಂತ ಹೆಚ್ಚಾಗಿರುವುದು ಚಿಂತೆಗೆ ಎಡೆಮಾಡಿಕೊಟ್ಟಿದೆ ಎಂದು ಸಂಶೋಧಕಿ ಸೀತಾಭ್ರಾ ಸಿನ್ಹಾ ಆತಂಕ ವ್ಯಕ್ತಪಡಿಸಿದ್ದಾರೆ.

ಹಲವು ರಾಜ್ಯಗಳಲ್ಲಿ ಆಗಸ್ಟ್ ಕೊನೆಯ ವಾರದಲ್ಲಿ ಪುನರುತ್ಪತ್ತಿ ದರ ಒಂದಕ್ಕಿಂತ ಹೆಚ್ಚಾಗಿರುವುದು ಕಂಡುಬಂದಿದೆ. ಇದರಿಂದ ರಾಷ್ಟ್ರೀಯ ಮಟ್ಟದ ಸರಾಸರಿಯಲ್ಲಿಯೂ ಏರಿಕೆ ದಾಖಲಾಗಿದೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಈ ದರ ಅತಿ ಹೆಚ್ಚಾಗಿದೆ. ಮಿಜೋರಾಂ ಹಾಗೂ ಜಮ್ಮು, ಕಾಶ್ಮೀರದಲ್ಲಿ ಆರ್ ದರ ಹಿಂದಿಗಿಂತ ಏರಿಕೆಯಾಗಿದೆ.
ಏನಿದು 'ಆರ್' ದರ?
ದೇಶದಲ್ಲಿ ಕೊರೊನಾ ಸೋಂಕು ಯಾವ ವೇಗದಲ್ಲಿ ಹರಡುತ್ತಿದೆ ಎಂಬುದನ್ನು ಈ "ಪುನರುತ್ಪತ್ತಿ ದರ" ಸಾಂಕೇತಿಸುತ್ತದೆ. ಒಬ್ಬ ವ್ಯಕ್ತಿಯಿಂದ ಎಷ್ಟು ಮಂದಿಗೆ ಸೋಂಕು ಹರಡಬಹುದು ಎಂಬ ಸರಾಸರಿ ಅಂದಾಜನ್ನು ಇದು ಹೇಳುತ್ತದೆ. ಆರ್ ಮಟ್ಟ ತಗ್ಗುವುದು ಸೋಂಕಿನ ಹರಡುವಿಕೆಯೂ ಕ್ಷೀಣಿಸುತ್ತಿದೆ ಎಂಬುದನ್ನು ಸೂಚಿಸುತ್ತದೆ. ಆರ್ ದರ ಒಂದಕ್ಕಿಂತ ಹೆಚ್ಚಿದ್ದರೆ, ಸೋಂಕಿತರ ಸಂಖ್ಯೆ ಪ್ರತಿ ಸುತ್ತಿನಲ್ಲೂ ಹೆಚ್ಚುತ್ತಿದೆ ಮತ್ತು ತಾಂತ್ರಿಕವಾಗಿ, ಇದನ್ನು ಸಾಂಕ್ರಾಮಿತ ಹಂತ ಎಂದು ಕರೆಯಲಾಗುತ್ತದೆ. ಎಷ್ಟು ಪರಿಣಾಮಕಾರಿಯಾಗಿ ಸೋಂಕು ಹರಡುತ್ತಿದೆ ಎಂಬುದನ್ನು ಇದು ಸೂಚಿಸುತ್ತದೆ.

ಹೆಚ್ಚು ಪುನರುತ್ಪತ್ತಿ ದರ ಹೊಂದಿರುವ ರಾಜ್ಯಗಳು
ಕೇರಳದಲ್ಲಿ ಆರ್ ದರ 1.33 ಇದೆ. ದೇಶದಲ್ಲೇ ಅತಿ ಹೆಚ್ಚಿನ ಸಕ್ರಿಯ ಪ್ರಕರಣಗಳಿರುವ ರಾಜ್ಯ ಕೇರಳ ಆಗಿದೆ. ಮಿಜೋರಾಂನಲ್ಲಿ ಈ ದರ 1.36 ಇದ್ದು, ಜಮ್ಮು ಹಾಗೂ ಕಾಶ್ಮೀರದಲ್ಲಿ 1.25 ಇದೆ. ಆಂಧ್ರದಲ್ಲಿ 1.09 ಹಾಗೂ ಮಹಾರಾಷ್ಟ್ರದಲ್ಲಿ 1.06 ಸೋಂಕಿನ ಪುನರುತ್ಪತ್ತಿ ದರ ಇದೆ.
ಎರಡನೇ ಅಲೆಯಲ್ಲಿ ಹೇಗಿತ್ತು ಆರ್ ದರ?
ಕೊರೊನಾ ಎರಡನೇ ಅಲೆ, ಅಂದರೆ ಮಾರ್ಚ್ನಿಂದ ಮೇ ತಿಂಗಳವರೆಗೆ ದೇಶದಲ್ಲಿ ಸೋಂಕಿನ ಪುನರುತ್ಪತ್ತಿ ದರವು 1.37 ದಾಖಲಾಗಿತ್ತು. ಮೇ 15 ರಿಂದ ಜೂನ್ 26ರವರೆಗೆ ಈ ದರ 0.78 ಆಗಿತ್ತು. ಜೂನ್ 20-ಜುಲೈ 7ರಲ್ಲಿ ನಿಧಾನಗತಿಯಲ್ಲಿ ಏರಿಕೆಯಾಗಿದ್ದು, ಆಗ ಇದರ ದರ 0.88ಗೆ ಬಂದು ನಿಂತಿತ್ತು. ಜುಲೈ 22ರವರೆಗೆ 0.95, ಜುಲೈ 24-27ರವರೆಗೆ 0.96 ಆಗಿದೆ.
ಜುಲೈ 27ರ ನಂತರ ಈ ದರ 1ರ ಸಮೀಪ ಬಂದಿದೆ.
ಆಗಸ್ಟ್ 6-9ರವರೆಗೆ 0.92, ಆಗಸ್ಟ್ 12-14ರವರೆಗೆ 0.99 ಇದೆ. ಆಗಸ್ಟ್ 14-17ರವರೆಗೆ 0.89 ಆಗಿದೆ. ಆನಂತರ 1.3 ಆಗಿದೆ.
ಈಚೆಗೆ ಚೆನ್ನೈನ ಇದೇ ಸಂಶೋಧನಾ ಸಂಸ್ಥೆ, ಭಾರತದಲ್ಲಿ ಸೋಂಕಿನ "R" ದರ ಕೊರೊನಾ ಮೂರನೇ ಅಲೆ ಕುರಿತು ಎಚ್ಚರಿಕೆ ಗಂಟೆ ಬಾರಿಸುತ್ತಿರುವುದಾಗಿ ತಿಳಿಸಿತ್ತು. ಈ ಆರ್ ದರ 1ಕ್ಕಿಂತ ಕಡಿಮೆಯಿದ್ದರೆ ಅಪಾಯವಿಲ್ಲ ಎಂದು ಪರಿಗಣಿಸಬಹುದು. ಆದರೆ ಇದನ್ನು ಮೀರಿದರೆ ಪ್ರಕರಣಗಳ ಸಂಖ್ಯೆಯೂ ಏಕಾಏಕಿ ಏರಿಕೆಯಾಗುವುದು ಖಚಿತ. ಮುಂದಿನ ಕೆಲವು ವಾರಗಳಲ್ಲಿ ಈ ದರ ಇನ್ನಷ್ಟು ಹೆಚ್ಚಳವಾಗಲಿದ್ದು, ರಾಜ್ಯದ ಈಶಾನ್ಯ ಭಾಗದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ ಎಂದು ಅಂದಾಜು ಮಾಡಿತ್ತು.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications