ಎಲ್ಲಾ ಕೊರೊನಾ ರೂಪಾಂತರಿಗಳ ವಿರುದ್ಧ ಹೋರಾಡಲಿದೆ ಈ ಎರಡು ಲಸಿಕೆ
ನವದೆಹಲಿ, ಜೂನ್ 26: ಕೊರೊನಾ ರೂಪಾಂತರಿಗಳ ವಿರುದ್ಧ ಈ ಎರಡು ಲಸಿಕೆ ಹೋರಾಡಲಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಎಲ್ಲಾ ಕೊರೊನಾ ರೂಪಾಂತರಿಗಳ ವಿರುದ್ಧ ಕಾರ್ಯನಿರ್ವಹಿಸಲಿವೆ ಎಂದು ಐಸಿಎಂಆರ್ನ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 48 ಡೆಲ್ಟಾ ಕೇಸ್ ಗಳು ಪತ್ತೆಯಾಗಿವೆ. ಆದರೆ ಮುಖ್ಯವಾಗಿ, ಅವುಗಳನ್ನು ಬಹಳ ಸ್ಥಳೀಕರಿಸಲಾಗಿದೆ. ಈ ವೈರಸ್ ಅನ್ನು ಈಗ ಪ್ರತ್ಯೇಕಿಸಲಾಗಿದೆ ಎಂದು ಅವರು ತಿಳಿಸಿದರು.

ಆಲ್ಫಾ, ಬೀಟಾ, ಗಾಮಾ ಮತ್ತು ಡೆಲ್ಟಾಕ್ಕಾಗಿ ಅದೇ ಪರೀಕ್ಷೆಯನ್ನು ಮಾಡುತ್ತಿದ್ದೇವೆ. ಲಸಿಕೆ ಪರಿಣಾಮವನ್ನು ಪರೀಕ್ಷಿಸಲು ಪ್ರಯೋಗಾಲಯ ಪರೀಕ್ಷೆಯನ್ನು ಎದುರು ನೋಡುತ್ತಿದ್ದೇವೆ ಮತ್ತು ಸುಮಾರು 7 ರಿಂದ 10 ದಿನಗಳ ಅವಧಿಯಲ್ಲಿ ನಾವು ಫಲಿತಾಂಶಗಳನ್ನು ತಿಳಿಯಬೇಕಾಗಿದೆ ಎಂದು ಅವರು ಹೇಳಿದರು.
ಪ್ರಸ್ತುತ 12 ರಾಷ್ಟ್ರಗಳಿರುವ ಡೆಲ್ಟಾ ಪ್ಲಸ್, ಸಾರ್ಸ್ ಕೋವ್ 2 ರೂಪಾಂತರಗಳಾದ ಅಲ್ಫಾ,ಬೀಟಾ, ಗಾಮ ಸೇರಿದಂತೆ ಎಲ್ಲಾ ನಾಲ್ಕು ಕೊರೊನಾ ರೂಪಾಂತರ ವಿರುದ್ಧ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳು ಕಾರ್ಯನಿರ್ವಹಸಲಿವೆ ಎಂದರು.
ಭಾರತದಲ್ಲಿ ಮೊದಲು ಡೆಲ್ಟಾ (B.1.617.2) ರೂಪಾಂತರ ಪತ್ತೆಯಾಗಿ, ದೇಶದಲ್ಲಿ ಕಳವಳಕಾರಿ ಪರಿಸ್ಥಿತಿಗೆ ಕಾರಣವಾಯಿತು. ಕೊರೊನಾ ಎರಡನೇ ಅಲೆಯಲ್ಲಿ ಏರಿದ ಸಾವು ನೋವಿಗೂ ಈ ರೂಪಾಂತರವೇ ಕಾರಣವಾಗಿತ್ತು.
ಇದೀಗ ಇದೇ ರೂಪಾಂತರದಿಂದ ಮತ್ತೊಂದು ರೂಪಾಂತರ ಸೃಷ್ಟಿಯಾಗಿದೆ. ಅದೇ ಡೆಲ್ಟಾ ಪ್ಲಸ್ (B.1.617.2.1/(AY.1). ಈ ಸೋಂಕು ಪತ್ತೆಯಾದ ಆರಂಭಿಕ ದಿನಗಳಲ್ಲಿ ಇದು ಕಳವಳಕಾರಿ ಸೋಂಕು ಎಂದು ಪರಿಗಣಿಸಿರಲಿಲ್ಲ. ಆದರೆ ಕೆಲವೇ ದಿನಗಳ ಅಂತರದಲ್ಲಿ ದೇಶದಲ್ಲಿ 52 ಪ್ರಕರಣಗಳು ಪತ್ತೆಯಾಗಿವೆ.
ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು, ಜಮ್ಮು, ಪಂಜಾಬ್, ಆಂಧ್ರಪ್ರದೇಶದಲ್ಲಿ ಈ ಪ್ರಕರಣ ಪತ್ತೆಯಾಗಿದೆ.
"ದೇಶದ 28 ಕಡೆಗಳಲ್ಲಿ INSACOG ಪ್ರಯೋಗಾಲಯಗಳಿದ್ದು, ಹೊಸ ರೂಪಾಂತರ ಸೋಂಕಿನ ಹರಡುವಿಕೆ ವೇಗ, ಶ್ವಾಸಕೋಶದ ಮೇಲೆ ಬೀರುವ ಪ್ರಭಾವ, ಮೊನೊಕ್ಲೋನಲ್ ಪ್ರತಿಕಾಯ ವ್ಯವಸ್ಥೆ ಇಳಿಮುಖಗೊಳಿಸುವಲ್ಲಿ ಹೊಸ ವೈರಸ್ ಪಾತ್ರದ ಬಗ್ಗೆ ಪರಿಶೋಧನೆ ನಡೆಸಲಾಗುತ್ತದೆ," ಎಂದು ಕೇಂದ್ರ ಆರೋಗ್ಯ ಸಚಿವಾಲಯ ಘೋಷಿಸಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications