ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಳ್ಳುವ ಭೀತಿಯಲ್ಲಿ ಸಿಪಿಐ
ನವದೆಹಲಿ, ಜೂನ್ 07: ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯೋ ಸುನಾಮಿಯೋ ಎಡಪಕ್ಷಗಳಿಗೆ ಸರಿಯಾದ ಹೊಡೆತವಂತೂ ಬಿದ್ದಿದೆ. ಪುರಾತನ ಪಕ್ಷ ಕಾಂಗ್ರೆಸ್ಸಿಗೆ ವಿಪಕ್ಷ ಸ್ಥಾನ ಮಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಪ್ರಮುಖ ಪಕ್ಷಗಳಾದ ಸಿಪಿಐಗೆ ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.
2014ರ ಲೋಕಸಭೆ ಚುನಾವಣೆ ಬಳಿಕ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಹಾಗೂ ನ್ಯಾಷಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಗಳಿಗೆ ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಳ್ಳುವ ಭೀತಿ ಎದುರಾಗಿತ್ತು. ಆದರೆ, 2016ರಲ್ಲಿ ಚುನಾವಣಾ ಆಯೋಗವು ತನ್ನ ನೀತಿ, ನಿಯಮದಲ್ಲಿ ಬದಲಾವಣೆ ಮಾಡಿದ್ದರಿಂದ ಎರಡು ಪಕ್ಷಗಳು ಬಚಾವಾಗಿದ್ದವು.
1968ರ ಚುನಾವಣಾ ಚಿನ್ಹೆ ಕಾಯ್ದಿರಿಸುವುದು ಹಾಗೂ ಹಂಚಿಕೆ ಆದೇಶದ ಅನ್ವಯ ರಾಷ್ಟ್ರೀಯ ಪಕ್ಷ ಎನಿಸಿಕೊಂಡ ಪಕ್ಷದ ಅಭ್ಯರ್ಥಿಗಳು ಶೇ 6ರಷ್ಟು ಮತಗಳಿಕೆ ಹೊಂದಿರಬೇಕು. ಕನಿಷ್ಠ ನಾಲ್ಕ ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಈ ಸಾಧನೆ ಮಾಡಿರಬೇಕು. ಕನಿಷ್ಠ 4 ಅಭ್ಯರ್ಥಿಗಳು ಗೆಲುವು ಸಾಧಿಸಿರಬೇಕು.

ಆದರೆ, ಸಿಪಿಐನ ಇಬ್ಬರು ಮಾತ್ರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ರಾಜ್ಯದ ಪಕ್ಷವಾಗಿ ಕೇರಳದಲ್ಲಿ 2016ರಲ್ಲಿ 19ರಲ್ಲಿ ಹೊಂದುವ ಮೂಲಕ ಹಾಗೂ ಮಣಿಪುರದಲ್ಲಿ 8.3% ಮತಗಳಿಸಿದ್ದು ಬಿಟ್ಟರೆ ಮಿಕ್ಕ ಕಡೆಗಳಲ್ಲಿ ಸೋಲು ಕಂಡಿದೆ.
ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ, ಬಿ ಎಸ್ಪಿ, ಸಿಪಿಐ, ಸಿಪಿಐಎಂ, ಕಾಂಗ್ರೆಸ್, ಎನ್ ಸಿಪ್ ಪ್ರಮುಖ ರಾಷ್ಟ್ರೀಯ ಪಕ್ಷಗಳಾಗಿ ಏಪ್ರಿಲ್ 11 ರಿಂದ ಮೇ 19ರ ತನಕ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದವು.
'ಚುನಾವಣಾ ಆಯೋಗ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ, ರಾಷ್ಟ್ರೀಯ ಸ್ಥಾನಮಾನ ಸಿಗದಿದ್ದರೂ ನಮ್ಮ ಕಾರ್ಯ ಮುಂದುವರೆಸುತ್ತೇವೆ' ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎಸ್ ಸುಧಾಕರ್ ರೆಡ್ಡಿ ಹೇಳಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications