ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಳ್ಳುವ ಭೀತಿಯಲ್ಲಿವೆ ಈ ಪಕ್ಷಗಳು
ನವದೆಹಲಿ, ಜುಲೈ 16: ಲೋಕಸಭೆ ಚುನಾವಣೆ 2019ರಲ್ಲಿ ಕಳಪೆ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ಪ್ರಮುಖ ಪಕ್ಷಗಳು ತಮ್ಮ ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿವೆ.
ಪ್ರಮುಖ ಪಕ್ಷ ಸಿಪಿಐ ನಂತರ ನ್ಯಾಷಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ), ತೃಣಮೂಲ ಕಾಂಗ್ರೆಸ್(ಟಿಎಂಸಿ) ಕೂಡಾ ಈ ಭೀತಿ ಎದುರಿಸುತ್ತಿರುವ ಪಕ್ಷಗಳಾಗಿವೆ. 2014ರ ಚುನಾವಣೆ ಫಲಿತಾಂಶದ ಬಳಿಕ ಬಿಎಸ್ಪಿ, ಎನ್ಸಿಪಿ ಈ ಭೀತಿ ಎದುರಿಸಿದ್ದರೂ ಸ್ಥಾನಮಾನ ಉಳಿಸಿಕೊಳ್ಳಲು ಸಾಧ್ಯವಾಯಿತು. ಆದರೆ, 2016ರಲ್ಲಿ ಚುನಾವಣಾ ಆಯೋಗವು ತನ್ನ ನೀತಿ, ನಿಯಮದಲ್ಲಿ ಬದಲಾವಣೆ ಮಾಡಿದ್ದರಿಂದ ಎರಡು ಪಕ್ಷಗಳು ಬಚಾವಾಗಿದ್ದವು.
ಏನಿದು ನಿಯಮ?: 1968ರ ಚುನಾವಣಾ ಚಿನ್ಹೆ ಕಾಯ್ದಿರಿಸುವುದು ಹಾಗೂ ಹಂಚಿಕೆ ಆದೇಶದ ಅನ್ವಯ ರಾಷ್ಟ್ರೀಯ ಪಕ್ಷ ಎನಿಸಿಕೊಂಡ ಪಕ್ಷದ ಅಭ್ಯರ್ಥಿಗಳು ಶೇ 6ರಷ್ಟು ಮತಗಳಿಕೆ ಹೊಂದಿರಬೇಕು. ಕನಿಷ್ಠ ನಾಲ್ಕ ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಈ ಸಾಧನೆ ಮಾಡಿರಬೇಕು. ಕನಿಷ್ಠ 4 ಅಭ್ಯರ್ಥಿಗಳು ಗೆಲುವು ಸಾಧಿಸಿರಬೇಕು.

ಸಿಪಿಐನ ಇಬ್ಬರು ಮಾತ್ರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ರಾಜ್ಯದ ಪಕ್ಷವಾಗಿ ಕೇರಳದಲ್ಲಿ 2016ರಲ್ಲಿ 19ರಲ್ಲಿ ಹೊಂದುವ ಮೂಲಕ ಹಾಗೂ ಮಣಿಪುರದಲ್ಲಿ 8.3% ಮತಗಳಿಸಿದ್ದು ಬಿಟ್ಟರೆ ಮಿಕ್ಕ ಕಡೆಗಳಲ್ಲಿ ಸೋಲು ಕಂಡಿದೆ. ಬಿಎಸ್ಪಿ 10 ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡಿದ್ದು, ಶೇ 2ರಷ್ಟು ಸ್ಥಾನ ಅಥವಾ 3ಕ್ಕಿಂತ ಕಡಿಮೆ ಸ್ಥಾನ ಹೊಂದಿರಬೇಕು ಎಂಬ ನಿಯಮ ಮೀರಿಲ್ಲ.
ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್, ಭಾರತೀಯ ಜನತಾ ಪಕ್ಷ, ಬಿಎಸ್ಪಿ, ಸಿಪಿಐ, ಸಿಪಿಐಎಂ, ಕಾಂಗ್ರೆಸ್(ಐಎನ್ಸಿ), ಎನ್ಸಿಪಿ, ಮೇಘಾಲಯದ ನ್ಯಾಷಲಿಸ್ಟ್ ಪೀಪಲ್ಸ್ ಪಾರ್ಟಿಗಳು ಪ್ರಮುಖ ರಾಷ್ಟ್ರೀಯ ಪಕ್ಷಗಳಾಗಿವೆ. ಏಪ್ರಿಲ್ 11 ರಿಂದ ಮೇ 19ರ ತನಕ ನಡೆದ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲಾ ಪಕ್ಷಗಳು ಸ್ಪರ್ಧಿಸಿದ್ದವು, ಮೇ 23ರಂದು ಫಲಿತಾಂಶ ಹೊರಬಂದಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications