ಜೋಶಿಮಠ ಮುಳುಗಡೆ ಭೀತಿ ಬೆನ್ನಲೇ ಯುಪಿಯ ಅಲಿಗಢದ ಮನೆಗಳಲ್ಲಿ ಬಿರುಕುಗಳು
ಲಕ್ನೋ, ಜ.10: ಉತ್ತರಾಖಂಡ್ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುವ ಭೀತಿ ಆವರಿಸಿಕೊಂಡಿದೆ. ಇದರ ನಡುವೆಯೇ, ಉತ್ತರ ಪ್ರದೇಶದಲ್ಲಿಯೂ ಇಂತಹ ಆತಂಕ ಮನೆ ಮಾಡಿದೆ.
ಉತ್ತರ ಪ್ರದೇಶದ ಅಲಿಘರ್ನ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.
"ಕಳೆದ ಹಲವು ದಿನಗಳಿಂದ ನಮ್ಮ ಕೆಲವು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದರಿಂದ ಭಯಭೀತರಾಗಿದ್ದೇವೆ. ಹೀಗಾಗಿ ನಾವು ನಗರಸಭೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದೇವೆ. ಆದರೆ, ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಬರೀ ಭರವಸೆ ನೀಡುತ್ತಿದ್ದಾರೆ. ನಮಗೆಲ್ಲಾ ಮನೆಗಳು ಕುಸಿದು ಬೀಳುವ ಆತಂಕವಿದೆ" ಎಂದು ಸ್ಥಳೀಯರೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಸ್ಥಳೀಯರ ಆರೋಪವೆಂದರೇ, ಸರ್ಕಾರದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ ಪೈಪ್ಲೈನ್ ಹಾಕಲಾಗಿದ್ದು, ಈಗ ಅದು ಸೋರಿಕೆಯಾಗುತ್ತಿದೆ . ಇದರಿಮದ ನಗರದಲ್ಲಿ ಬಿರುಕುಗಳು ಉಂಟಾಗಲು ಕಾರಣವಾಗಿದೆ ಎಂದಿದ್ದಾರೆ.
Aligarh, Uttar Pradesh | Just received information that cracks have developed in few houses in Aligarh. Will send our team and a probe will be conducted into why this has happened: Rakesh Kumar Yadav, Additional Commissioner, Municipal Corporation pic.twitter.com/T8j8H5heRZ
— ANI UP/Uttarakhand (@ANINewsUP) January 10, 2023
"ಈ ಬಿರುಕುಗಳು ಕಾಣಿಸಿಕೊಂಡು 3 ರಿಂದ 4 ದಿನಗಳಾಗಿವೆ. ನಾವು ಈ ಬಗ್ಗೆ ಇಲಾಖೆಗೆ ತಿಳಿಸಿದ್ದೇವೆ, ಆದರೆ ಇದುವರೆಗೆ ಯಾವುದೇ ನೆರವು ನೀಡಲಾಗಿಲ್ಲ. ನಾವು ಭಯಭೀತರಾಗಿ ಬದುಕುತ್ತಿದ್ದೇವೆ" ಎಂದು ಸ್ಥಳೀಯರಾದ ಅಫ್ಶಾ ಮಶ್ರೂರ್ ತಿಳಿಸಿದ್ದಾರೆ.
ಇತ್ತ, ಈ ಬಗ್ಗೆ ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ರಾಕೇಶ್ ಕುಮಾರ್ ಯಾದವ್, ಸಮಸ್ಯೆಯನ್ನು ತಿಳಿದುಕೊಂಡು ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
"ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಬಿರುಕುಗಳು ಕಂಡುಬಂದಿವೆ ಎಂಬ ಮಾಹಿತಿ ನಮಗೆ ಬಂದಿದೆ. ಈ ವಿಷಯ ಇನ್ನೂ ಸಂಪೂರ್ಣ ನಮ್ಮ ಗಮನಕ್ಕೆ ಬಂದಿಲ್ಲ, ನಾವು ನಮ್ಮ ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತೇವೆ. ಈ ಬಗ್ಗೆ ನಗರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು" ಎಂದು ರಾಕೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications