ದೇಶಾದ್ಯಂತ ಪೊಲೀಸರ ವಿರುದ್ಧ ದೂರಿನ ವಿಚಾರಣೆಗೆ ಪ್ರಾಧಿಕಾರ ರಚನೆ
ನವದೆಹಲಿ,ಜುಲೈ. 19: ಒಟ್ಟು 24 ರಾಜ್ಯಗಳು ಮತ್ತು ಏಳು ಕೇಂದ್ರಾಡಳಿತ ಪ್ರದೇಶಗಳು ಪೋಲೀಸ್ ದುರ್ವರ್ತನೆಯ ದೂರುಗಳನ್ನು ವಿಚಾರಣೆ ಮಾಡಲು ಪರಿಹಾರ ಕಾರ್ಯವಿಧಾನದ ಕುರಿತು ಪೊಲೀಸ್ ದೂರು ಪ್ರಾಧಿಕಾರಗಳನ್ನು ರಚಿಸಿವೆ ಎಂದು ಗೃಹ ಸಚಿವಾಲಯ ಮಂಗಳವಾರ ಲೋಕಸಭೆಗೆ ತಿಳಿಸಿದೆ.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಸದ ಅಸಾದುದ್ದೀನ್ ಓವೈಸಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರವನ್ನು ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಈ ಮಾಹಿತಿ ನೀಡಿದ್ದಾರೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್ಗಢ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಪೊಲೀಸ್ ದೂರು ಪ್ರಾಧಿಕಾರಗಳನ್ನು ರಚಿಸಿವೆ.

ಬಿಹಾರವು ಪ್ರತಿ ಜಿಲ್ಲೆಗೆ ಜಿಲ್ಲಾ ಉತ್ತರದಾಯಿತ್ವ ಪ್ರಾಧಿಕಾರವನ್ನು ರಚಿಸಿದೆ. ಪೊಲೀಸ್ ಎಂಬುದು ಭಾರತದ ಸಂವಿಧಾನದ ಏಳನೇ ಶೆಡ್ಯೂಲ್ನ ಪಟ್ಟಿ 1 (ರಾಜ್ಯ ಪಟ್ಟಿ) ರಲ್ಲಿ ಇರುವ ರಾಜ್ಯ ವಿಷಯವಾಗಿದೆ. ಪ್ರಾಥಮಿಕವಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತದ ಜವಾಬ್ದಾರಿಯು ಪೊಲೀಸ್ ಪಡೆಗಳನ್ನು ದಕ್ಷವಾಗಿಸುವುದು. ಸಮರ್ಥ ಹಾಗೂ ಅದರ ಕಾರ್ಯನಿರ್ವಹಣೆಯು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕವಾಗಿ ಮಾಡುವುದಾಗಿದೆ ಎಂದು ಸಚಿವ ನಿತ್ಯಾನಂದ ರೈ ಅವರು ಹೇಳಿದರು.
ರಾಜ್ಯಗಳ ಪೊಲೀಸ್ ಪಡೆಗಳು ಈ ವಿಷಯದಲ್ಲಿ ಅಸ್ತಿತ್ವದಲ್ಲಿರುವ ಕಾನೂನು ಮತ್ತು ಸಾಂಸ್ಥಿಕ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುತ್ತವೆ. 1996ರ ರಿಟ್ ಅರ್ಜಿ (ಸಿವಿಲ್) 310ರ ವಿಷಯದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಪ್ರಕಾಶ್ ಸಿಂಗ್ ಮತ್ತು ಯೂನಿಯನ್ ಆಫ್ ಇಂಡಿಯಾ ಹಾಗೂ ಪೊಲೀಸ್ ದೂರುಗಳ ಪ್ರಾಧಿಕಾರವನ್ನು ರಚಿಸುವಂತೆ ನಿರ್ದೇಶಿಸಿದೆ. ಪೊಲೀಸ್ ರಾಜ್ಯಕ್ಕೆ ಒಳಪಟ್ಟಿರುವುದರಿಂದ ಈ ಮೇಲಿನ ತೀರ್ಪನ್ನು ಅದರ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ರವಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪೊಲೀಸರ ದುರ್ವರ್ತನೆಗಳ ದೂರುಗಳ ವಿಚಾರಣೆಗೆ ಪರಿಹಾರ ಕಾರ್ಯವಿಧಾನದ ಕುರಿತು ಇದುವರೆಗೆ ಪೊಲೀಸ್ ದೂರು ಪ್ರಾಧಿಕಾರಗಳನ್ನು ರಚಿಸಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹೆಸರನ್ನು ತಿಳಿಸಲು ಗೃಹ ಸಚಿವರು ಸಂತೋಷ ಪಡುತ್ತಾರೆಯೇ ಎಂದು ಓವೈಸಿ ಕೇಳಿದಾಗ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಈ ಉತ್ತರ ನೀಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications