ಕಾಶ್ಮೀರದಲ್ಲಿ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಪಾಕ್ ರಾಷ್ಟ್ರಗೀತೆ
ಜಮ್ಮು-ಕಾಶ್ಮೀರದಲ್ಲಿ ವಾರದ ಹಿಂದೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಟಗಾರರು ಪಾಕಿಸ್ತಾನದ ರಾಷ್ಟ್ರಗೀತೆ ಹಾಡಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ
ಶ್ರೀನಗರ, ಏಪ್ರಿಲ್ 6: ಕಾಶ್ಮೀರದ ಗಂದರ್ ಬಾಲ್ ಜಿಲ್ಲೆಯ ಸ್ಥಳೀಯ ಕ್ರಿಕೆಟ್ ತಂಡದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನದ ರಾಷ್ಟ್ರಗೀತೆ ಹಾಡಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ದೊರಕಿದ್ದು, ಆಟಗಾರರು ಪಾಕಿಸ್ತಾನ ತಂಡದ ಜೆರ್ಸಿ ಕೂಡ ತೊಟ್ಟಿರುವುದು ಕಂಡುಬಂದಿದೆ. ಎರಡು ಹಳ್ಳಿಗಳ ಮಧ್ಯೆ ಕಳೆದ ವಾರ ಈ ಪಂದ್ಯ ನಡೆದಿದೆ. ಈ ಬಗ್ಗೆ ವಿಚಾರಣೆ ನಡೆಸಲು ಬುಧವಾರ ತಂಡದ ಆಟಗಾರರನ್ನು ಕರೆಸಿ, ಆ ನಂತರ ಪ್ರಕರಣ ದಾಖಲಿಸಲಾಗಿದೆ.
ಭಾರತವು ಪಾಕಿಸ್ತಾನದ ಜತೆಗೆ ಕ್ರಿಕೆಟ್ ನಲ್ಲಿ ಮುಖಾಮುಖಿ ಆದಾಗ ಪಾಕ್ ತಂಡವನ್ನು ಬೆಂಬಲಿಸಿದ ಕಾರಣಕ್ಕೆ ಹಲವು ಬಾರಿ ಸಂಘರ್ಷಕ್ಕೆ ಕಾರಣವಾಗಿದೆ. ಪಾಕಿಸ್ತಾನದ ರಾಷ್ಟ್ರಗೀತೆ ಹಾಡುವುದು ಮತ್ತು ರಾಷ್ಟ್ರ ಧ್ವಜ ಹಾರಿಸುವಂತಹ ಘಟನೆ ಕಣಿವೆ ರಾಜ್ಯದಲ್ಲಿ ಈ ಹಿಂದೆ ಹಲವು ಬಾರಿ ನಡೆದಿದೆ. ಇಂತಹ ಘಟನೆಗಳು ನಡೆದಾಗ ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ.[ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ 800 ಕೋಟಿ ರು ಸುಪಾರಿ!]

ಈ ಬಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಐಎಸ್ ಐಎಸ್ ಹಾಗೂ ಪಾಕಿಸ್ತಾನ ಧ್ವಜ ಹಾರಿಸುವಂಥ ಘಟನೆಗಳು ಮುಂದುವರಿದರೆ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕಳೆದ ಫೆಬ್ರವರಿಯಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಳೀಯ ಕಾಶ್ಮೀರಿಗಳಿಗೆ ಎಚ್ಚರಿಕೆ ನೀಡಿದ್ದರು.
"ನಾವು ಸ್ಥಳೀಯರಲ್ಲಿ ಮನವಿ ಮಾಡುತ್ತಿದ್ದೇವೆ. ಶಸ್ತ್ರಾಸ್ತ್ರ ಕೈಗೆತ್ತಿಕೊಂಡರೆ, ಸ್ಥಳೀಯ ಹುಡುಗರನ್ನು ಬಳಸಿಕೊಂಡರೆ, ಭಯೋತ್ಪಾದನೆ ಚಟುವಟಿಕೆ ಮುಂದುವರಿಸಿದರೆ, ಪಾಕಿಸ್ತಾನ-ಐಎಸ್ ಐಎಸ್ ಧ್ವಜಗಳನ್ನು ಪ್ರದರ್ಶಿಸಿದರೆ ಅಂಥವರನ್ನು ರಾಷ್ಟ್ರ ವಿರೋಧಿಗಳಾಗಿ ಪರಿಗಣಿಸುತ್ತೀವಿ" ಎಂದು ರಾವತ್ ಎಚ್ಚರಿಸಿದ್ದರು.[ಭಾರತದ ಅತಿ ದೊಡ್ಡ ರಸ್ತೆ ಸುರಂಗ ಮಾರ್ಗದ ಬಗ್ಗೆ ನಿಮಗೇನು ಗೊತ್ತು?]
ಭಾರತೀಯ ಸೇನೆಯಿಂದ ನಡೆಯುತ್ತಿರುವ ಜನಸ್ನೇಹಿ ಕಾರ್ಯಾಚರಣೆಗಳಿಗೆ ಸ್ಥಳೀಯರಿಂದ ಅಗತ್ಯ ಬೆಂಬಲ ಸಿಗುತ್ತಿಲ್ಲ ಎಂದು ರಾವತ್ ಹೇಳಿದ್ದರು.
-
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications