ತೆಂಡೂಲ್ಕರ್, ಸಿಎನ್ಆರ್ ರಾವ್ ಗೆ ಭಾರತ ರತ್ನ ಘೋಷಣೆ
ನವದೆಹಲಿ, ನ.16: ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು 200ನೇ ಟೆಸ್ಟ್ ಪಂದ್ಯವಾಡಿ ಭಾವಪೂರ್ಣ ವಿದಾಯ ಹೇಳಿದ ಭಾರತ ಕ್ರಿಕೆಟ್ ರಂಗದ ಧ್ರುವತಾರೆ ಸಚಿನ್ ರಮೇಶ್ ತೆಂಡೂಲ್ಕರ್ ಅವರಿಗೆ ಭಾರತ ಸರಕಾರ ಕೃತಜ್ಞತಾಪೂರ್ವಕವಾಗಿ ಭಾರತ ರತ್ನ ಘೋಷಿಸಿದೆ.
ಜತೆಗೆ, ಶಿಡ್ಲಘಟ್ಟ ಮೂಲದ 79 ವರ್ಷದ ಪ್ರೊ. ಸಿಎನ್ಆರ್ ರಾವ್ (ಚಿಂತಾಮಣಿ ನಾಗೇಶ್ ರಾಮಚಂದ್ರ ರಾವ್) ಅವರಿಗೂ ಸಹ 'ಭಾರತ ರತ್ನ' ಘೋಷಿಸಲಾಗಿದೆ. 42 ಮತ್ತು 43ನೆ ಭಾರತ ರತ್ನ ಪ್ರಶಸ್ತಿ ಇದಾಗಿದೆ. [ಸಿಎನ್ಆರ್ ರಾವ್ ವ್ಯಕ್ತಿಚಿತ್ರ]

ಕ್ರಿಕೆಟ್ಟಿಗೆ ತನುಮನ ಧಾರೆಯೆರೆದಿದ್ದ 40 ವರ್ಷದ ಸಚಿನ್ ತೆಂಡೂಲ್ಕರ್ ಅವರನ್ನು 'ಭಾರತ ರತ್ನ' ಎಂದು ಪರಿಗಣಿಸಬೇಕೋ ಬೇಡವೋ ಎಂಬುದು ಕಳೆದ ಒಂದೆರಡು ವರ್ಷಗಳಿಂದ ತೀವ್ರ ಚರ್ಚಗೆ ಗ್ರಾಸವಾಗಿತ್ತು. ಆದರೆ ಇದೀಗ ಪ್ರಧಾನಿ ಕಚೇರಿಯು ಅಧಿಕೃತ ಪ್ರಕಟಣೆ ನೀಡಿದ್ದು, ತೆಂಡೂಲ್ಕರ್ ಅವರಿಗೆ 'ಭಾರತ ರತ್ನ' ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ.
ದೇಶದ ಆತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಕ್ರೀಡಾಪಟುವಿಗೆ ನೀಡಿ ಗೌರವಿಸಲಾಗಿದೆ ಮತ್ತು ಈ ಪ್ರಶಸ್ತಿಯನ್ನು ಗಳಿಸಿದ ಅತ್ಯಂತ ಕಿರಿಯ ವ್ಯಕ್ತಿ ತೆಂಡೂಲ್ಕರ್. ತೆಂಡೂಲ್ಕರ್ ತಮಗೆ ದೊರೆತ ಭಾರತ ರತ್ನ ಪ್ರಶಸ್ತಿಯನ್ನು ತಮ್ಮ ತಾಯಿ ರಜನಿಗೆ ಅರ್ಪಿಸಿದ್ದಾರೆ.
ಕರ್ನಾಟಕದ ವಿಜ್ಞಾನಿ ಪ್ರೊ. ಸಿಎನ್ಆರ್ ರಾರ್ ಅವರು ಕರ್ನಾಟಕದಿಂದ ಭಾರತ ರತ್ನ ಗಳಿಸಿದ ನಾಲ್ಕನೆಯವರಾಗಿದ್ದಾರೆ. ಇದುವರೆಗೂ ಸರ್ ಸಿವಿ ರಾಮನ್, ಸರ್ ಎಂ ವಿಶ್ವೇಶ್ವರಯ್ಯ, ಭೀಮಸೇನ ಜೋಶಿ ಅವರುಗಳು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇದರೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಇದುವರೆಗೆ 2ನೆಯ ಭಾರತ ರತ್ನ ಸಂದಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications