ಕೋವಿಡ್ - 19 ಕರ್ತವ್ಯ; ವಿಶೇಷ ಅನುದಾನಕ್ಕೆ ಸಿಆರ್ಪಿಎಫ್ ಬೇಡಿಕೆ
ನವದೆಹಲಿ, ಮೇ 08 : ಕೋವಿಡ್ - 19 ಕರ್ತವ್ಯದಲ್ಲಿದ್ದಾಗ ಸಿಆರ್ಪಿಎಫ್ ಸಿಬ್ಬಂದಿ ಮೃತಪಟ್ಟರೆ 50 ಲಕ್ಷ ವಿಶೇಷ ಅನುದಾನ ನೀಡಬೇಕು ಎಂದು ಕೇಂದ್ರ ಗೃಹ ಇಲಾಖೆಗೆ ಮನವಿ ಮಾಡಲಾಗಿದೆ. ವಿವಿಧ ರಾಜ್ಯಗಳಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯು (ಸಿಆರ್ಪಿಎಫ್) ಗೃಹ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇಶದ ಬಹುದೊಡ್ಡ ಪಡೆಯಾಗಿದೆ. ಸಿಎಆರ್ಪಿಎಫ್ನಲ್ಲಿ ಸುಮಾರು 3.25 ಲಕ್ಷ ಸಿಬ್ಬಂದಿಗಳು ಇದ್ದಾರೆ.
ದೇಶದ ವಿವಿಧ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಿಆರ್ಪಿಎಫ್ ಪಡೆಯನ್ನು ನಿಯೋಜನೆ ಮಾಡಲಾಗುತ್ತದೆ. ಈಗ ಕೊರೊನಾ ವಿರುದ್ಧದ ಹೋರಾಟದ ಸಂದರ್ಭದಲ್ಲಿಯೂ ಪಡೆಗಳನ್ನು ರಾಜ್ಯಗಳಲ್ಲಿ ನಿಯೋಜಿಸಲಾಗಿದೆ.

ಸಿಆರ್ಪಿಎಫ್ ಮುಖ್ಯಸ್ಥ ಎ. ಪಿ. ಮಹೇಶ್ವರಿ ಅವರು ಆರೋಗ್ಯ ಮತ್ತು ಸ್ವಚ್ಛತಾ ಕಾರ್ಮಿಕರಿಗೆ ಘೋಷಣೆ ಮಾಡಿದಂತೆ ಸಿಆರ್ಪಿಎಫ್ ಸಿಬ್ಬಂದಿಯೂ ಕೋವಿಡ್ - 19 ಕರ್ತವ್ಯದಲ್ಲಿರುವಾಗ ಮೃತಪಟ್ಟರೆ 50 ಲಕ್ಷ ಅನುದಾನ ನೀಡಬೇಕು ಎಂದು ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ.
ವಿವಿಧ ರಾಜ್ಯಗಳಲ್ಲಿ ಸಿಆರ್ಪಿಎಫ್ ಪಡೆಗಳನ್ನು ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜನೆ ಮಾಡಲಾಗಿದೆ. ಅದರಲ್ಲಿಯೂ ಕೊರೊನಾ ಹಾಟ್ ಸ್ಪಾಟ್ಗಳಲ್ಲಿಯೂ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆ. ಆದ್ದರಿಂದ, ಗೃಹ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.
ಗೃಹ ಇಲಾಖೆಯಡಿ ಬರುವ ವಿವಿಧ ಪಡೆಗಳ ಐವರು ಸಿಬ್ಬಂದಿಗಳು ಈಗಾಗಲೇ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇಬ್ಬರು ಬಿಎಸ್ಎಫ್ ಸಿಬ್ಬಂದಿ, ಒಬ್ಬರು ಸಿಆರ್ಪಿಎಫ್ ಸಿಬ್ಬಂದಿ ಮತ್ತು ಸಿಎಐಎಸ್ಎಫ್ ಮತ್ತು ದೆಹಲಿ ಪೊಲೀಸ್ನ ಇಬ್ಬರು ಸಿಬ್ಬಂದಿಗಳು ಕೋವಿಡ್ - 19 ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ.
ಕೋವಿಡ್ - 19 ಕರ್ತವ್ಯ ನಿರ್ವಹಣೆ ಮಾಡುವಾಗ ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ, ಅನಾರೋಗ್ಯ ಉಂಟಾದರೆ ವೈದ್ಯರನ್ನು ಭೇಟಿಯಾಗಿ ಎಂದು ಸಿಆರ್ಪಿಎಫ್ ಮುಖ್ಯಸ್ಥ ಎ. ಪಿ. ಮಹೇಶ್ವರಿ ಸಿಬ್ಬಂದಿಗಳಿಗೆ ಸಂದೇಶ ಕಳಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications