CSDS Lokniti pre poll Survey 2024: ಸಿಎಸ್ಡಿಎಸ್ ಲೋಕನೀತಿ 2024 ಚುನಾವಣಾ ಪೂರ್ವ ಸಮೀಕ್ಷೆ: ದೇಶದಲ್ಲಿ ಯಾರಿಗೆ ಗೆಲುವು?
2024ರ ಸಾರ್ವತ್ರಿಕ ಚುನಾವಣೆ ಪ್ರಾರಂಭವಾಗುವ ಮೊದಲು ಹಲವಾರು ಸಮೀಕ್ಷೆಗಳು ನಡೆದಿವೆ. ಈ ಸಮೀಕ್ಷೆಗಳ ಮೂಲಕ ಮುಂದಿನ ರಾಜಕೀಯ ಭವಿಷ್ಯ ಯಾವ ಪಕ್ಷಕ್ಕೆ ಉತ್ತಮವಾಗಿದೆ ಎನ್ನುವ ಲೆಕ್ಕಾಚಾರ ಮಾಡಬಹುದು. ಇತ್ತೀಚೆಗೆ CSDS-ಲೋಕನೀತಿ 2024 ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದೆ. ಈ ಸಮೀಕ್ಷೆಯ ವರದಿ ಬಹಿರಂಗಗೊಂಡಿದ್ದು ಮತ್ತೆ ಮೋದಿ ಅಲೆ ಸೃಷ್ಟಿಸುವ ಲಕ್ಷಣಗಳು ದಟ್ಟವಾಗಿವೆ.
ಹೌದು...ಈ ಬಾರಿ ಮತ್ತೆ ದೇಶದಲ್ಲಿ ನರೇಂದ್ರ ಮೋದಿ ಮೋಡಿ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಹೀಗಾಗಿ ಈ ಬಾರಿ ಕಾಂಗ್ರೆಸ್ಗೆ ಬಿಜೆಪಿ ಪ್ರಬಲ ಪೈಪೋಟಿ ನೀಡಲಿದೆ.

2024ರ ಸಾರ್ವತ್ರಿಕ ಚುನಾವಣೆ ಪ್ರಾರಂಭವಾಗುವ ಮೂರು ವಾರಗಳ ಮೊದಲು ಮಾಡಿದ CSDS-Lokniti ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ, ಬಿಜೆಪಿ I.N.D.I.A ಪ್ರತಿಸ್ಪರ್ಧಿ ಮೈತ್ರಿಕೂಟಕ್ಕಿಂತ 12 ಶೇಕಡಾವಾರು ಮುನ್ನಡೆ ಸಾಧಿಸಿದೆ. ಮೋದಿ ಅವರ ಬಲಿಷ್ಠ ನಾಯಕತ್ವ, ಬಿಜೆಪಿ ಪ್ರತಿಪಾದಿಸುವ ಹಿಂದೂ ರಾಷ್ಟ್ರೀಯವಾದದ ಕಾರ್ಯಸೂಚಿ, ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಷ್ಟೆ ಹೆಚ್ಚಾಗುತ್ತಿರುವುದನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನೆರವಿಗೆ ಬರಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿಸಿದೆ.
ಆದರೆ ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಬಗೆಹರಿದಿಲ್ಲ. ಬೆಳವಣಿಗೆಯ ಪ್ರಯೋಜನ ಎಲ್ಲರಿಗೂ ಸಮಾನವಾಗಿ ದೊರಕಿಲ್ಲ ಎಂದು ವರದಿಯು ಉಲ್ಲೇಖಿಸುತ್ತದೆ. ದೇಶದ 19 ರಾಜ್ಯಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. 10 ಸಾವಿರ ಮಂದಿಯಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಶೇಕಡ 27ರಷ್ಟು ಮಂದಿ ನಿರುದ್ಯೋಗವು ಪ್ರಮುಖ ಸಮಸ್ಯೆ ಎಂದು ಹೇಳಿಕೊಂಡಿದ್ದಾರೆ. ಬೆಲೆ ಏರಿಕೆಯ ಪ್ರಮುಖ ಸಮಸ್ಯೆ ಎಂದು ಹೇಳಿದವರ ಪ್ರಮಾಣವು ಶೇ. 23ರಷ್ಟಿದೆ ಎಂದು ಸಮೀಕ್ಷೆ ಹೇಳಿದೆ.

ನರೇಂದ್ರ ಮೋದಿ ಅವರು ಮೊದಲು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿತ್ತು. ಅದನ್ನು ಕಡಿಮೆ ಮಾಡುವ ಭರವಸೆಯನ್ನು ಮೋದಿ ಅವರು ನೀಡಿದ್ದರು. ಆದರೆ ಅದಾಗಿಲ್ಲ ಎನ್ನುವುದು ಬಹುತೇಕರ ಅಭಿಪ್ರಾಯವಾಗಿದೆ. ದೇಶದಲ್ಲಿ ನಿರುದ್ಯೋಗ ಪ್ರಮಾಣವು ಶೇ.4.9ರಷ್ಟು ಇತ್ತು. ಇದು 2022-23ರಲ್ಲಿ ಶೇ.5.4ಕ್ಕೆ ಏರಿಕೆ ಆಗಿದೆ. 2022-23ರಲ್ಲಿ 15ರಿಂದ 29 ವರ್ಷದ ನಡುವಿನ ವಯಸ್ಸಿನ ನಗರವಾಸಿ ಯುವಕರ ಪೈಕಿ ಶೇಕಡ 16ರಷ್ಟು ಮಂದಿ ನಿರುದ್ಯೋಗಿಗಳಾಗಿದ್ದರು. ಇದಕ್ಕೆ ಕಾರಣ ಅಗತ್ಯ ಕೌಶಲಗಳು ಇಲ್ಲದಿರುವುದು ಹಾಗೂ ಗುಣಮಟ್ಟದ ಉದ್ಯೋಗಗಳ ಕೊರತೆ ಎಂಬುದನ್ನು ಸರ್ಕಾರಿ ಅಂಕಿ-ಅಂಶಗಳು ಹೇಳುತ್ತಿವೆ.
ಇನ್ನೂ ರಾಮ ಮಂದಿರ ನಿರ್ಮಾಣ ನರೇಂದ್ರ ಮೋದಿ ಅವರಿಗೆ ಈ ಬಾರಿ ಚುನಾವಣೆಗೆ ಸಾಕಷ್ಟು ಜನಬೆಂಬಲವನ್ನು ತಂದುಕೊಟ್ಟಿದೆ ಎಂದು ಸಮೀಕ್ಷೆ ಬಹಿರಂಗಪಡಿಸುತ್ತದೆ. ಸಮೀಕ್ಷೆಯಲ್ಲಿ 22ರಷ್ಟು ಜನ ಮೋದಿ ನೇತೃತ್ವದ ಸರ್ಕಾರ ಮಾಡಿದ ಅತ್ಯಂತ ಇಷ್ಟವಾದ ಕೆಲಸ ರಾಮ ಮಂದಿರ ನಿರ್ಮಾಣ ಎಂದು ಹೇಳಿದ್ದಾರೆ. 79ರಷ್ಟು ಜನ ಭಾರತವೂ ಹಿಂದೂಗಳಿಗೆ ಮಾತ್ರವೇ ಅಲ್ಲ, ಎಲ್ಲ ಧರ್ಮೀಯರಿಗೂ ಸಮಾನವಾಗಿ ಸೇರುತ್ತದೆ ಎಂದಿದ್ದಾರೆ. ಜೊತೆಗೆ 48ರಷ್ಟು ಜನ ರಾಮ ಮಂದಿರ ನಿರ್ಮಾಣ ಹಿಂದೂ ಅಸ್ಮಿತೆಯನ್ನು ಗಟ್ಟಿಗೊಳಿಸಲಿದೆ ಎಂದಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications