CUET Result 2022 : 100ಕ್ಕೆ 100 ಅಂಕ ಗಳಿಸಿದ ಅಂಕಿತಾ ಗುರಿಯೇ ಯುಪಿಎಸ್ಸಿ
ನವದೆಹಲಿ, ಅಕ್ಟೋಬರ್ 18: ದೆಹಲಿ ವಿಶ್ವವಿದ್ಯಾಲಯದ ಪ್ರವೇಶಕ್ಕಾಗಿ ಮೊದಲ ಬಾರಿಗೆ ನಡೆದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) 2022 ರಲ್ಲಿ ರಾಜಸ್ಥಾನದ ವಿದ್ಯಾರ್ಥಿನಿ ಅಂಕಿತಾ ಲೋಥಿಯಾ ಶೇ.100ರಷ್ಟು ಅಂಕಗಳೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ.
ರಾಜಸ್ಥಾನದ ಶ್ರೀ ಗಂಗಾನಗರದ ಮೂಲಕ ಅಂಕಿತಾ ಲೋಥಿಯಾ ಇಂಗ್ಲಿಷ್, ಭೂಗೋಳ ಮತ್ತು ರಾಜ್ಯಶಾಸ್ತ್ರ ಸೇರಿದಂತೆ ಮೂರು ವಿಷಯಗಳಲ್ಲಿ 200ಕ್ಕೆ 200 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇತಿಹಾಸ ಮತ್ತು ಸೋಷಿಯಲ್ ಸ್ಟಡೀಸ್ ನಲ್ಲಿ ಕ್ರಮವಾಗಿ 97 ಮತ್ತು 80 ಅಂಕಗಳನ್ನು ಗಳಿಸಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ಮೂರು ಉನ್ನತ ಕಾಲೇಜುಗಳಾದ ಸೇಂಟ್ ಸ್ಟೀಫನ್ಸ್ ಕಾಲೇಜು, ಹಿಂದೂ ಮತ್ತು ಲೇಡಿ ಶ್ರೀರಾಮ್ ಕಾಲೇಜಿನಲ್ಲಿ ಇತಿಹಾಸ ಅಥವಾ ರಾಜಕೀಯ ವಿಜ್ಞಾನದಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ (BA) ಅನ್ನು ಮುಂದುವರಿಸಲು ಅಂಕಿತಾ ಲೋಥಿಯಾ ಬಯಸಿದ್ದಾರೆ.

ಐಎಎಸ್ ಅಧಿಕಾರಿಯಾಗುವ ಕನಸು:
ಕಳೆದ ಜುಲೈ 15 ಮತ್ತು 19ರಂದು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಂಡಿದ್ದ ಅಂಕಿತಾ ಲೋಥಿಯಾ ಭವಿಷ್ಯದ ಬಗ್ಗೆ ಭವ್ಯ ಕನಸು ಕಟ್ಟಿಕೊಂಡಿದ್ದಾರೆ. ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಗುರಿಯನ್ನು ಹೊಂದಿದ್ದಾರೆ.
ವಿದ್ಯಾವಂತ ವಿದ್ಯಾರ್ಥಿನಿ ಎನಿಸಿರುವ ಅಂಕಿತಾ:
ಸರ್ಕಾರಿ ಶಾಲೆಯ ಶಿಕ್ಷಕಿಯ ಮಗಳಾಗಿರುವ ಅಂಕಿತಾ ಲೋಥಿಯಾ ಬಾಲ್ಯದಿಂದಲೂ ಉತ್ತಮ ವಿದ್ಯಾರ್ಥಿನಿ ಎನಿಸಿಕೊಂಡಿದ್ದರು. 10ನೇ ತರಗತಿಯಲ್ಲಿ ಶೇ.93.67ರಷ್ಟು ಫಲಿತಾಂಶವನ್ನು ಪಡೆದುಕೊಂಡಿದ್ದ ಅವರು, 12ನೇ ತರಗತಿಯಲ್ಲಿ ಶೇ.95.2ರಷ್ಟು ಫಲಿತಾಂಶವನ್ನು ಪಡೆದುಕೊಂಡಿದ್ದರು.
ಅಂಕಿತಾ ಆರಂಭದಲ್ಲಿ ರಾಜಸ್ಥಾನ ನ್ಯಾಯಾಂಗ ಪರೀಕ್ಷೆಗೆ ಹಾಜರಾಗಲು ಬಯಸಿದ್ದರು, ಆದರೆ ಈಗ, ಅವರು ಕಾಲೇಜಿನ ಎರಡನೇ ವರ್ಷದಲ್ಲಿ ದೇಶದ ಅತ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್ಸಿಗೆ ತಯಾರಿ ಮಾಡುವ ಗುರಿಯನ್ನು ಹೊಂದಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications