ಯಾವ ನಿಯಮದಡಿ ನೋಟುಗಳನ್ನು ನಿಷೇಧಿಸಲಾಗಿದೆ?
ಈಗ ಪ್ರಶ್ನೆ ಉದ್ಭವವಾಗಿರುವುದು, ಯಾವ ನಿಯಮದ ಅಡಿ ಇಂಥ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದೇ ಪ್ರಶ್ನೆ ಕೇಳಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹೂಡಲಾಗಿದೆ.
ಬೆಂಗಳೂರು, ನವೆಂಬರ್ 12 : ಮಂಗಳವಾರ, ನವೆಂಬರ್ 8ರಂದು ಸಂಜೆ 8 ಗಂಟೆಯ ಸುಮಾರಿಗೆ 500 ಮತ್ತು 1000 ರುಪಾಯಿ ನೋಟುಗಳ ಚಲಾವಣೆಯನ್ನು ನಿರ್ಬಂಧಿಸಿ ನರೇಂದ್ರ ಮೋದಿ ಆದೇಶ ಹೊರಡಿಸುತ್ತಿದ್ದಂತೆ, ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟುಗಳಲ್ಲಿ ಒಂದರ ಹಿಂದೊಂದರಂತೆ ಅರ್ಜಿಗಳನ್ನು ಹೂಡಲಾಯಿತು.
ರುಪಾಯಿ ನೋಟುಗಳ ಮೇಲೆ ಹೇರಲಾಗಿರುವ ನಿಷೇಧವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಹೂಡಲಾಗಿರುವ ಅರ್ಜಿಗಳ ವಿಚಾರಣೆ ನವೆಂಬರ್ 15ರಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ಬರಲಿದೆ. ಇದೇ ಬಗೆಯ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಈಗಾಗಲೆ ಇತ್ಯರ್ಥಪಡಿಸಿದ್ದರಿಂದ ಇಲ್ಲಿ ಹೂಡಲಾಗಿದ್ದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯದಲ್ಲಿ ಕೇವಿಯಟ್ ಅರ್ಜಿಯನ್ನು ಕೇಂದ್ರ ಸರಕಾರ ಈಗಾಗಲೆ ಸಲ್ಲಿಸಿದ್ದರಿಂದ, ಕೇಂದ್ರದ ವಾದವನ್ನು ಆಲಿಸದೆ ಯಾವುದೇ ನಿರ್ದೇಶನವನ್ನು ಸರ್ವೋಚ್ಚ ನ್ಯಾಯಾಲಯ ತೆಗೆದುಕೊಳ್ಳುವಂತಿಲ್ಲ. ಈಗ ಪ್ರಶ್ನೆ ಉದ್ಭವವಾಗಿರುವುದು, ಯಾವ ನಿಯಮದ ಅಡಿ ಇಂಥ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. [ದೊಡ್ಡ ನೋಟಿಲ್ಲದ ದಿನಗಳಲ್ಲಿ ಸಾಮಾನ್ಯರ ಬದುಕಿನ ಚಿತ್ರಗಳು...]

ಆ ನಿಯಮಗಳು ಕೆಳಗಿನಂತಿವೆ
* ಕೇಂದ್ರದ ಹಣಕಾಸು ಸಚಿವಾಲಯ ನವೆಂಬರ್ 8ರಂದು ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದು, 500 ರು ಮತ್ತು 1000 ರು.ಗಳ ಎಲ್ಲಾ ನೋಟುಗಳನ್ನು ನವೆಂಬರ್ 9, 2016ರಿಂದ ನಿಷೇಧಿಸಲ್ಪಟ್ಟಿವೆ ಎಂದು ತಿಳಿಸಿದೆ.
* ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ, 1934ರ ನಿಮಯ 26ರ ಉಪನಿಯಮ 2ರ ಅಡಿಯಲ್ಲಿ ಈ 500 ರು. ಮತ್ತು 1000 ರು. ನೋಟುಗಳ ಬಳಕೆ ಅಕ್ರಮ ಎಂದು ಘೋಷಿಸಲಾಗಿದೆ. ಈ ನಿಯಮದ ಪ್ರಕಾರ, ಈ ನೋಟುಗಳು ಯಾವುದೇ ಕಾನೂನಿನ ಮಾನ್ಯತೆ ಪಡೆದಿರುವುದಿಲ್ಲ.
* ಸೆಂಟ್ರಲ್ ಬೋರ್ಡ್ನ ಶಿಫಾರಸಿನಂತೆ, ಬೇರೆ ಇನ್ನಾವುದೇ ಮೊತ್ತದ ನೋಟುಗಳನ್ನು ಕೂಡ ಗೆಜೆಟ್ ನೋಟಿಫಿಕೇಷನ್ ಮುಖಾಂತರ ನಿಷೇಧಿಸುವ ಅಧಿಕಾರ ಕೇಂದ್ರ ಸರಕಾರಕ್ಕಿದೆ. [ಓದುಗರೊಬ್ಬರು ಪ್ರಶ್ನೆ ಕೇಳಿದ್ದಾರೆ, ಪ್ರಧಾನಿಗಳೇ ಉತ್ತರಿಸಿ!]
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications