ಅಂಫಾನ್ ಚಂಡಮಾರುತ ಭೀತಿಯಲ್ಲಿ ಕರಾವಳಿ ಪ್ರದೇಶದ ಜನ ಶಿಫ್ಟ್!
ನವದೆಹಲಿ, ಮೇ.19: ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿ ಅಂಫಾನ್ ಚಂಡ ಮಾರುತವು ಒಡಿಶಾ ಹಾಗೂ ಪಶ್ಚಿಮ ಬಂಗಾಳ ಕರಾವಳಿ ಪ್ರದೇಶದ ಜನರಲ್ಲಿ ಆತಂಕ ಸೃಷ್ಟಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಒಡಿಶಾದ ಕರಾವಳಿ ಪ್ರದೇಶದಲ್ಲಿನ 11 ಲಕ್ಷ ಜನರನ್ನು ಸರ್ಕಾರವೇ ಸ್ಥಳಾಂತರಿಸಿದೆ.
ಸೋಮವಾರ ರಾತ್ರಿ 11.30ರ ವೇಳೆಗೆ ಅಂಫಾನ್ ಚಂಡ ಮಾರುತವು ಒಡಿಶಾದ ಪಾರದೀಪ್ ನಿಂದ ದಕ್ಷಿಣಕ್ಕೆ 600 ಕಿ.ಮೀ ಹಾಗೂ ಪಶ್ಚಿಮ ಬಂಗಾಳದ ದಿಘಾ ನೈಋತ್ಯ ದಿಕ್ಕಿನಿಂದ 750 ಕಿಲೋ ಮೀಟರ್ ದೂರದಲ್ಲಿ ಕಾಣಿಸಿಕೊಂಡಿದೆ.
ಮೇ.20ರ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಅಂಫಾನ್ ಚಂಡ ಮಾರುತವು ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಸಮುದ್ರ ತೀರದಿಂದ ಭೂಪ್ರದೇಶವನ್ನು ಪ್ರವೇಶಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಒಡಿಶಾದ ಕರಾವಳಿ ಪ್ರದೇಶದ ಜನರು ಶಿಫ್ಟ್:
ಒಡಿಶಾದಲ್ಲಿ ವಿಶೇಷ ಪರಿಹಾರ ಆಯುಕ್ತರು ಕರಾವಳಿ ಪ್ರದೇಶದ ಜನರ ಸ್ಥಳಾಂತರ ಹಾಗೂ ಬೇರೆಡೆಗೆ ತಾತ್ಕಾಲಿಕ ಸೂರು ಕಲ್ಪಿಸಿಕೊಂಡುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಬಾಲಸೋರ್, ಭದ್ರಕ್, ಕೇಂದ್ರಪಾದ್, ಜಗತ್ ಸಿಂಗ್ ಪುರ್, ಪುರಿ, ಖೋದ್ರಾ, ಕಟ್ಟಕ್, ಜಜ್ಪುರ್, ಮಯೂರ್ ಬಂಜ್ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಅಂಫಾಲ್ ಚಂಡಮಾರುತದ ಭೀತಿ ಹಿನ್ನೆಲೆ ಕರಾವಳಿ ಜನರನ್ನು ಸ್ಥಳಾಂತರಿಸುವುದರ ಜೊತೆಗೆ ಕೊರೊನಾ ವೈರಸ್ ಸೋಂಕು ಹರಡುವಿಕೆ ಬಗ್ಗೆಯೂ ನಿಗಾ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಜನರ ಸ್ಥಳಾಂತರ:
ಪಶ್ಚಿಮ ಬಂಗಾಳದ ಸುಂದರ್ ಬನ್ಸ್ ಮತ್ತು ದಿಘಾ ಕರಾವಳಿ ಪ್ರದೇಶದಲ್ಲಿ ವಾಸವಿದ್ದ ಜನರನ್ನು ಈಗಾಗಲೇ ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ. ಅಂಫಾನ್ ಚಂಡಮಾರುತದ ಬಗ್ಗೆ ಜನರಿಗೆ ಮಾಹಿತಿ ನೀಡುವುದಕ್ಕಾಗಿ ವಿಶೇಷ ಮಾಹಿತಿ ಕೇಂದ್ರಗಳನ್ನು ಕೂಡಾ ತೆರೆಯಲಾಗಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications