Cyclone Biparjoy: 'ಬಿಪರ್ಜಾಯ್'ಚಂಡಮಾರುತ: ಜೂನ್ 18 ರವರೆಗೆ ಗುಜರಾತ್ನಲ್ಲಿ 99 ರೈಲುಗಳನ್ನು ರದ್ದು
ಗುಜರಾತ್, ಜೂನ್ 16: ಬಿಪರ್ಜಾಯ್ ಚಂಡಮಾರುತವು ರೈಲು ಸೇವೆಯ ಮೇಲೆ ಪರಿಣಾಮ ಬೀರಿದ್ದು, ಸುಮಾರು 99 ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ.
ತೀವ್ರ ಚಂಡಮಾರುತ ಗುರುವಾರ ಸಂಜೆ ಗುಜರಾತ್ನ ಕಚ್ ಕರಾವಳಿಗೆ ಅಪ್ಪಳಿಸಿತು. 23 ರೈಲುಗಳನ್ನು ರದ್ದುಗೊಳಿಸಿದೆ ಎಂದು ಪಶ್ಚಿಮ ರೈಲ್ವೆ ಹೇಳಿದೆ. ಬಿಪರ್ಜಾಯ್' ಅಬ್ಬರಕ್ಕೆ ಗುಜರಾತ್ ತತ್ತರಿಸಿ ಹೋಗಿರುವ ನಡುವೆ ರೇಲ್ವೇ ಇಲಾಖೆ ಕೂಡ ಶಾಕ್ ಕೊಟ್ಟಿದೆ. ಭೀಕರವಾಗಿ ಬೀಸುತ್ತಿರುವ ಗಾಳಿಗೆ ಅರಬ್ಬಿ ಸಮುದ್ರದ ಕರಾವಳಿ ಪ್ರದೇಶದ ರಾಜ್ಯಗಳು ತತ್ತರಿಸಿ ಹೋಗಿವೆ. ಈ ವೇಳೆ ದಿಢೀರ್ ರೈಲು ಓಡಾಟ ರದ್ದು ಮಾಡಿರುವುದು ಪ್ರಯಾಣಿಕರಿಗೆ ಶಾಕ್ ಕೊಟ್ಟಿದೆ.

ಬಿಪರ್ಜಾಯ್ ಚಂಡಮಾರುತದಿಂದ ಕಟ್ಟೆಚ್ಚರ ವಹಿಸಲಾಗಿದೆ. ಹೀಗಾಗಿ ಪಶ್ಚಿಮ ರೈಲ್ವೆ ಒಟ್ಟು 99 ರೈಲುಗಳ ಸಂಚಾರವನ್ನು ರದ್ದು ಮಾಡಿದೆ. ಹಾಗೇ 33 ರೈಲುಗಳ ಸಂಚಾರದ ಮಾರ್ಗ ಮೊಟಕುಗೊಂಡಿದೆ. ಸೈಕ್ಲೋನ್ ಅಬ್ಬರ ಹೆಚ್ಚಾಗಿರುವಾಗ ಕೆಲ ರೈಲುಗಳ ಓಡಾಟ ಕ್ಯಾನ್ಸಲ್ ಮಾಡಿ ಮುನ್ನೆಚ್ಚರಿಕೆ ಕೈಗೊಳ್ಳಬೇಕಿತ್ತು. ಹೀಗಾಗಿ 69 ರೈಲುಗಳ ಸಂಚಾರವನ್ನ ಪಶ್ಚಿಮ ರೈಲ್ವೆಯು ರದ್ದು ಮಾಡಿದೆ.
23 ರೈಲುಗಳನ್ನು ರದ್ದುಗೊಳಿಸಲಾಗಿದೆ, 3 ರೈಲುಗಳನ್ನು ಅಲ್ಪಾವಧಿಗೆ ಕೊನೆಗೊಳಿಸಲಾಗಿದೆ. ಇದರೊಂದಿಗೆ, 99 ರೈಲುಗಳನ್ನು ರದ್ದುಗೊಳಿಸಲಾಗಿದೆ, 39 ರೈಲುಗಳನ್ನು ಅಲ್ಪಾವಧಿಗೆ ಕೊನೆಗೊಳಿಸಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ರೈಲು ಕಾರ್ಯಾಚರಣೆಯ ದೃಷ್ಟಿಯಿಂದ ಜೂನ್ 18 ರವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ 38 ರೈಲುಗಳನ್ನು ಕಡಿಮೆ ಮಾಡಲಾಗಿದೆ ಎಂದು ಪಶ್ಚಿಮ ರೈಲ್ವೆ ತಿಳಿಸಿದೆ.
ಬಿಪರ್ಜಾಯ್ ಚಂಡಮಾರುತ ಗಂಟೆಗೆ 115 ರಿಂದ 125 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತದೆ ಮತ್ತು ಗಂಟೆಗೆ 140 ಕಿ.ಮೀ ವೇಗದಲ್ಲಿ ಬೀಸಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕಿ ಮನೋರಮಾ ಮೊಹಂತಿ ತಿಳಿಸಿದ್ದಾರೆ. ಪ್ರಸ್ತುತ, ಗಾಳಿಯ ವೇಗ ಗಂಟೆಗೆ 115 ರಿಂದ 125 ರ ನಡುವೆ ಇದೆ, ಇದು ಗಂಟೆಗೆ 140 ಕಿಮೀ ವರೆಗೆ ಹೋಗಬಹುದು. ಮಧ್ಯರಾತ್ರಿಯ ವೇಳೆಗೆ ಗಾಳಿಯ ವೇಗ ಕಡಿಮೆಯಾಗಬಹುದು" ಎಂದು MET ನಿರ್ದೇಶಕರು ತಿಳಿಸಿದ್ದಾರೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications